ಆ್ಯಪ್ನಗರ

ಪೊಲೀಸರ ಮೇಲೆ ಹಲ್ಲೆ ಆರೋಪದಲ್ಲಿ ಸೌಮ್ಯ ರೆಡ್ಡಿ ವಿರುದ್ಧ ಎಫ್‌ಐಆರ್‌, ಡಿಕೆ ಶಿವಕುಮಾರ್ ಕಿಡಿ

ಕಾಂಗ್ರೆಸ್ ರಾಜಭವನ ಚಲೋ ಪ್ರತಿಭಟನೆಯ ಸಂದರ್ಭದಲ್ಲಿ ಮಹಿಳಾ ಪೊಲೀಸ್ ಪೇದೆಯ ವಿರುದ್ಧ ಹಲ್ಲೆ ಮಾಡಿರುವ ಆರೋಪದಡಿಯಲ್ಲಿ ಶಾಸಕಿ ಸೌಮ್ಯ ರೆಡ್ಡಿ ವಿರುದ್ಧ ಎಫ್‌ಐಆರ್‌ ದಾಖಲು ಮಾಡಿರುವ ಪೊಲೀಸರ ಕ್ರಮಕ್ಕೆ ಡಿಕೆ ಶಿವಕುಮಾರ್ ವಿರೋಧ ವ್ಯಕ್ತಪಡಿಸಿದ್ದಾರೆ.

Vijaya Karnataka Web 23 Jan 2021, 1:27 pm
ಬೆಂಗಳೂರು: ಕಾಂಗ್ರೆಸ್ ರಾಜಭವನ ಚಲೋ ಸಂದರ್ಭದಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿರುವ ಆರೋಪದಡಿಯಲ್ಲಿ ಶಾಸಕಿ ಸೌಮ್ಯ ರೆಡ್ಡಿ ವಿರುದ್ಧ ಎಫ್‌ಐಆರ್‌ ದಾಖಲು ಮಾಡಿದ ಪೊಲೀಸರ ಕ್ರಮಕ್ಕೆ ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ.
Vijaya Karnataka Web DK Shivakumar


ಬೆಂಗಳೂರಿನಲ್ಲಿ ಶನಿವಾರ ಮಾತನಾಡಿದ ಅವರು, ಶಾಸಕಿ ಸೌಮ್ಯ ರೆಡ್ಡಿ ವಿರುದ್ಧ ಪೊಲೀಸರ ಹೇಗೆ ವರ್ತಿಸಿದರು ಎಂಬುವುದನ್ನು ನಾನೇ ಸ್ವತಃ ಕಣ್ಣಲ್ಲಿ ನೋಡಿದ್ದೇನೆ. ಪೊಲೀಸರು ಬೇಕಂತ ಎಳೆದು ಗಾಡಿಗೆ ಹತ್ತಿಸುತ್ತಿದ್ದರು. ಈ ಸಂದರ್ಭದಲ್ಲಿ ಸ್ವಯಂ ರಕ್ಷಣೆಗಾಗಿ ಅವರು ಸಣ್ಣ ಏಟು ಹೊಡೆದಿದ್ದಾರೆ.

ಆದರೆ ಪೊಲೀಸರು ನಮ್ಮ ಕಾರ್ಯಕರ್ತರ ಮೇಲೆ ವ್ಯವಸ್ಥಿತರಾಗಿ ದೌರ್ಜನ್ಯ ಎಸಗಿದ್ದಾರೆ. ಬಿಜೆಪಿ ಶಾಸಕರು ಈ ಹಿಂದೆ ಬಾಯಿಗೆ ಬಂದ ಹಾಗೆ ಹೇಳಿಕೆ ಕೊಟ್ಟಾಗ ಏಕೆ ಕ್ರಮ ಇಲ್ಲ. ಪೊಲೀಸ್ ಅಧಿಕಾರಿಗಳು ಹೇಡಿಗಳ ತರ ವರ್ತನೆ ಮಾಡಿದ್ದೀರಿ. ಪೊಲೀಸರುಗೆ ಇರುವ ಗೌರವ ಹಾಳು ಮಾಡುತ್ತಿದ್ದೀರಿ ಎಂದು ಕಿಡಿಕಾರಿದರು.

ಕಾಂಗ್ರೆಸ್ ಪ್ರತಿಭಟನೆಯಲ್ಲಿ ಸೌಮ್ಯ ರೆಡ್ಡಿ ದರ್ಪ, ಮಹಿಳಾ ಪೊಲೀಸ್ ಪೇದೆ ಮೇಲೆ ಹಲ್ಲೆ!

ನಾವು ಸೌಮ್ಯ ರೆಡ್ಡಿ ಜತೆ ನಿಲ್ಲುತ್ತೇವೆ. ಘಟನೆಯ ಬಗ್ಗೆ ಎಲ್ಲ ವಿಡಿಯೋ ನಮ್ಮ ಜೊತೆಗೆ ಇದೆ. ಈ ವಿಚಾರವಾಗಿ ಸಿಎಂಬಿಎಸ್ ಯಡಿಯೂರಪ್ಪ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಧ್ಯಪ್ರವೇಶ ಮಾಡಬೇಕು. ಪ್ರತಿಭಟನೆಯ ಸಂದರ್ಭದಲ್ಲಿ ಹೇಗೆ ಬಿದ್ದರು ಎಂದು ನಾನು ನೋಡಿದ್ದೇನೆ. ಸೌಮ್ಯ ರೆಡ್ಡಿ ವಿರುದ್ಧ ಎಫ್‌ಐಆರ್‌ ದಾಖಲು ಮಾಡಿರುವುದರ ಹಿಂದೆ ಸರ್ಕಾರ ಇದೆ. ಪೊಲೀಸರ ಕೈಯಲ್ಲಿ ಮಾಡಿದ್ದೆಲ್ಲಾ ಮಾಡಿಸಿಕೊಳ್ಳಕಾಗುತ್ತಾ? ಎಂದು ಪ್ರಶ್ನಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ