ಆ್ಯಪ್ನಗರ

ಕಾಂಗ್ರೆಸ್‌ ಕಾರ್ಯಕರ್ತರಿಗೆ ಸೈದ್ದಾಂತಿಕ ತರಬೇತಿ! ಸಮಿತಿ ರಚನೆ ಮಾಡಿದ ಡಿಕೆಶಿ

ಕಾಂಗ್ರೆಸ್ ಕಾರ್ಯಕರ್ತರನ್ನು ಸೈದ್ದಾಂತಿಕವಾಗಿ ತಯಾರು ಮಾಡುವ ನಿಟ್ಟಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಸಮಿತಿಯೊಂದನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ರಚನೆ ಮಾಡಿದ್ದಾರೆ.

Vijaya Karnataka Web 4 Aug 2020, 11:33 am
ಬೆಂಗಳೂರು: ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಸೈದ್ದಾಂತಿಕವಾಗಿ ತರಬೇತಿಗೊಳಿಸುವ ನಿಟ್ಟಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಸಮಿತಿ ಒಂದನ್ನು ರಚನೆ ಮಾಡಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಸಮಿತಿ ರಚನೆಯಾಗಿದ್ದು ಮುಂದಿನ ದಿನಗಳಲ್ಲಿ ಪಕ್ಷದ ಕಾರ್ಯಕರ್ಯರಿಗೆ ಕೇಡರ್‌ ಮಾದರಿಯಲ್ಲಿ ತರಬೇತಿ ನೀಡಲಾಗುತ್ತದೆ ಎಂದು ತಿಳಿದು ಬಂದಿದೆ.
Vijaya Karnataka Web dk shivakumar


ಪಕ್ಷದಲ್ಲಿ ರಾಜಕೀಯ ನಾಯಕತ್ವ ಹಾಗೂ ಆಡಳಿತ ನಿರ್ವಹಣೆ ಮಾಡುವ ಕುರಿತು ಕಾರ್ಯಕರ್ತರಿಗೆ ತರಬೇತಿ ನೀಡುವ ‘ಅಕಾಡೆಮಿ ಆಫ್ ಪೊಲಿಟಿಕಲ್ ಲೀಡರ್ ಶಿಪ್ ಮತ್ತು ಗವರ್ನನ್ಸ್ ಸಮಿತಿ' ರಚಿಸಿ ಡಿಕೆ ಶಿವಕುಮಾರ್‌ ಆದೇಶ ಹೊರಡಿಸಿದ್ದಾರೆ.

ಬಿಜೆಪಿ ಮಾದರಿಯಲ್ಲಿ ‘ಕೇಡರ್‌’ ಮೊರೆ ಹೋದ ಕಾಂಗ್ರೆಸ್‌, ಸತೀಶ್ ಜಾರಕಿಹೊಳಿಗೆ ಸಂಘಟನೆ ಹೊಣೆ?

ಈ ಸಮಿತಿ ಅಧ್ಯಕ್ಷತೆಯನ್ನು ಸತೀಶ್ ಜಾರಕಿಹೊಳಿ ಹೊಂದಿದ್ದುವಿಧಾನಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್, ಮಾಜಿ ಸಚಿವ ಕೃಷ್ಣ ಬೈರೇಗೌಡ,ಯುಟಿ ಖಾದರ್‌, ಡಾ. ಶರಣ ಪ್ರಕಾಶ್ ಪಾಟೀಲ್, ಡಿಕೆ ಸುರೇಶ್, ಎಲ್‌ ಹನುಮಂತಯ್ಯ, ಸೈಯದ್‌ ನಾಸೀರ್‌ ಹುಸೇನ್, ಪ್ರೊ. ಕೆ.ಇ ರಾಧಾಕೃಷ್ಣ, ಶಾಸಕಿ ಸೌಮ್ಯಾ ರೆಡ್ಡಿ, ಉಡುಪಿ ಡಿಸಿಸಿ ಅಧ್ಯಕ್ಷ ಅಶೋಕ್ ಕುಮಾರ್‌, ಭರತ್ ಮುಂಡೋಡಿ, ಡಾ. ಲೋಹಿತ್ ನಾಯ್ಕರ್, ಮಂಜುನಾಥ ಅದ್ವೆ, ಸುಧೀರ್‌ ಕುಮಾರ್ ಮರೋಡಿ ಮುಂತಾದವರನ್ನು ಒಳಗೊಂಡಿದೆ.

ಡಿಕೆಶಿ ಹೊಸ ತಂತ್ರ, ಫೀಲ್ಡಿಗಿಳಿದು ಗೆದ್ದರಷ್ಟೇ ಪದಾಧಿಕಾರಿ ಹುದ್ದೆ!

ರಾಜ್ಯದಲ್ಲಿ ಸಂಘಟನಾ ಹಿಡಿತ ಹೊಂದಿರುವ ಬಿಜೆಪಿ ಪಕ್ಷವನ್ನು ಕೇಡರ್‌ ಸಾಮರ್ಥ್ಯದಿಂದಲೇ ಎದುರಿಸುವ ಹಿನ್ನೆಲೆಯಲ್ಲಿ ಈ ಸಮಿತಿಯನ್ನು ರಚನೆ ಮಾಡಲಾಗಿದೆ ಎಂಬ ಮಾಹಿತಿ ಇದೆ. ಆಯ್ದ ಕಾರ್ಯಕರ್ತರಿಗೆ ಸಮಿತಿಯ ಮೂಲಕ ನಿರಂತರ ತರಬೇತಿಯನ್ನು ನೀಡಲಾಗುತ್ತದೆ. ಹೀಗೆ ರಾಜ್ಯದಲ್ಲಿ ತರಬೇತಿಗೊಂಡ ಕಾರ್ಯಕರ್ತರ ತಂಡವನ್ನು ರಚನೆ ಮಾಡುವುದು ಕಾಂಗ್ರೆಸ್ ಉದ್ದೇಶವಾಗಿದೆ.

ಡಿಕೆ ಶಿವಕುಮಾರ್ ಅಧ್ಯಕ್ಷ ಸ್ಥಾನ ವಹಿಸಿಕೊಂಡ ಬಳಿಕ ಕಾಂಗ್ರೆಸ್‌ ಪಕ್ಷವನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಕೇರಳ ಮಾದರಿಯನನ್ನು ಅನುಸರಿಸಲು ಮುಂದಾಗಿದ್ದಾರೆ. ಪಕ್ಷದ ಸಂಘಟನೆಯನ್ನು ಕಟ್ಟುವ ಹೊಣೆಗಾರಿಕೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಗೆ ನೀಡಲಾಗಿದೆ.

ಸತೀಶ್ ಜಾರಕಿಹೊಳಿ ಈಗಾಗಲೆ ಮಾನವ ಬಂಧುತ್ವ ವೇದಿಕೆಯಂತಹ ಸಂಘಟನೆಯನ್ನು ಸ್ಥಾಪಿಸಿ ಕೇಡರ್‌ಗಳಿಗೆ ತರಬೇತಿ ಮಾಡುವ ಕೆಲಸ ಮಾಡುತ್ತಿದ್ದಾರೆ. ಈ ಅನುಭವದ ಹಿನ್ನೆಲೆಯಲ್ಲಿ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರನ್ನು ಸೈದ್ದಾಂತಿಕವಾಗಿ ತಯಾರು ಮಾಡುವ ಹೊಣೆಯನ್ನು ನೀಡಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ