ಆ್ಯಪ್ನಗರ

ತಾಂಬೂಲ ಪ್ರಶ್ನೆ ವಿಚಾರ: ಭವಿಷ್ಯ ಹೇಳೋರನ್ನೂ ಕೂಡಲೇ ಬಂಧಿಸಬೇಕು ಎಂದ ಡಿಕೆ ಶಿವಕುಮಾರ್‌

ಪಕ್ಷದ ನಾಯಕರುಗಳಿಗೆ ಹಾಗೂ ಪಕ್ಷಕ್ಕೆ ಅನುಕೂಲ ಆಗಲಿ ಎಂದು ತರುತ್ತಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಆತುರವಾಗಿ ತಂದರು. ಇಡೀ ದೇಶದಲ್ಲಿ ಅವರದ್ದೇ ಪಕ್ಷ ಆಡಳಿತದಲ್ಲಿ ಇದ್ದ ಕಡೆಗಳಲ್ಲಿ ತರಲು ಆಗಿಲ್ಲ. ಇಲ್ಲಿ ಮಾತ್ರ ಆತುರವಾಗಿ ತಂದರು.

Vijaya Karnataka Web 25 May 2022, 1:01 pm
ಬೆಂಗಳೂರು: ಮಂಗಳೂರಿನ ಮಳಲಿಮಸೀದಿ ವರ್ಸಸ್‌ ದೇವಸ್ಥಾನ ಹಾಗೂ ಅದಕ್ಕೆ ಸಂಬಂಧಿಸಿದಂತೆ ತಾಂಬೂಲ ಪ್ರಶ್ನೆ ವಿಚಾರ ಈಗ ಭಾರಿ ಚರ್ಚೆಗೆ ಕಾರಣವಾಗಿದೆ.
Vijaya Karnataka Web ಡಿಕೆ ಶಿವಕುಮಾರ್‌
ಡಿಕೆ ಶಿವಕುಮಾರ್‌


ಈ ವಿಷಯ ಬಿಜೆಪಿ ಹಾಗೂ ಕಾಂಗ್ರೆಸ್‌ ನಾಯಕರ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. ಈ ವಿಚಾರಕ್ಕೆ ಡಿಕೆ ಶಿವಕುಮಾರ್‌ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಮಾತನಾಡಿದರು.

ಮಂಗಳೂರಿನ ಮಳಲಿ ಮಸೀದಿ ವರ್ಸಸ್ ದೇವಸ್ಥಾನ ವಿವಾದಕ್ಕೆ ಪ್ರತಿಕ್ರಿಯೆ ನೀಡಿ, ಅವರಿಗೆ ಏನೇನು ನಂಬಿಕೆ ಇದೆಯೋ ? ಏನೇನು ಬೇಕಾದ್ರೂ ಮಾಡಿಕೊಳ್ಳಲು. ನಾವು ಮಧ್ಯಪ್ರವೇಶ ಮಾಡಲ್ಲ.ಅವರು ಈ ರಾಜ್ಯ ಸಾಯಿಸ್ತಿದ್ದಾರೆ. ಅವರ ಸ್ವಂತಕ್ಕೆ, ಮನೆಗೆ ಏನ್ ಬೇಕಾದ್ರೂ ಮಾಡಲಿ. ಸರಕಾರ ಇದೆ, ಅಲ್ಪಸಂಖ್ಯಾತ ಇಲಾಖೆ ಇದೆ, ಮುಜರಾಯಿ ಇಲಾಖೆಯೂ ಇದೆ, ಕ್ಯಾಬಿನೆಟ್ ಇದೆ, ಸರ್ಕಾರಿ ಅಧಿಕಾರಿಗಳು ಇದ್ದಾರೆ.‌ಆದ್ರೆ ಖಾಸಗಿಯಾಗಿ ಹೀಗೆ ಮಾಡಬಾರದು, ಅವರ ವಿರುದ್ಧ ಕೇಸ್ ಹಾಕಬೇಕು ಎಂದು ಮಂಗಳೂರು ತಾಂಬೂಲ ಪ್ರಶ್ನೆ ವಿರುದ್ಧ ಡಿಕೆಶಿ ಕಿಡಿಕಾರಿದರು.

ಪಠ್ಯಪುಸ್ತಕ ಪರಿಷ್ಕರಣೆಯೇ ಆಗಿಲ್ಲ, ಕುವೆಂಪು ಅವರಿಗೆ ಅವಮಾನ ಮಾಡಿಲ್ಲ: ಶಿಕ್ಷಣ ಇಲಾಖೆ ಸ್ಪಷ್ಟನೆ

ಪಠ್ಯ ಪುಸ್ತಕಗಳನ್ನು ಪರಿಷ್ಕರಣೆ ಮಾಡುವ ಮೂಲಕ ಮುಂದಿನ ಪೀಳಿಗೆಗೆ ಹೊಸ ಇತಿಹಾಸ ಸೃಷ್ಟಿ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.

ಇದೊಂದು ಭಾವನಾತ್ಮಕ ವಿಚಾರ. ಅದನ್ನ ಅವರು ಮನೆಯಲ್ಲಿ ಇಟ್ಟುಕೊಳ್ಳಲಿ. ಸರಕಾರ ಮಧ್ಯಪ್ರವೇಶ ಮಾಡ್ಬೇಕು, ಕೂಡಲೇ ಬಂಧಿಸಬೇಕು. ಭವಿಷ್ಯ ಹೇಳೋರನ್ನೂ ಕೂಡಲೇ ಬಂಧಿಸಬೇಕು. ಜಿಲ್ಲಾಧಿಕಾರಿ, ಎಸ್‌ಪಿ‌ ಮಧ್ಯಪ್ರವೇಶ ಮಾಡ್ಬೇಕು ಎಂದು ಡಿಕೆ ಶಿವಕುಮಾರ್ ಆಗ್ರಹಿಸಿದರು.

ಮುಂದಿನ ಪೀಳಿಗೆಗೆ ಇತಿಹಾಸ ತೆದುಕು ಹಾಕಿ. ಹೊಸ ಇತಿಹಾಸ ಸೃಷ್ಟಿ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಯಾರು ಏನು ಮಾಡತಾರೋ ಬಿಡತ್ತಾರೋ ಅದು ಬೇರೆ ವಿಚಾರ. ಎಲ್ಲರಿಗೂ ಅಭಿಪ್ರಾಯ ಹೇಳುವ ಸ್ವಾತಂತ್ರ್ಯವಿದೆ.‌ ಚಿಂತಕರು ಎಲ್ಲರಿಗೂ ಸ್ವಾತಂತ್ರ್ಯವಿದೆ. ಆದರೆ ಇವರು ರಾಜಕೀಯ ಅಜೆಂಡಾ ತರುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು.

ನನ್ನ ಕಥನ ಭಾಗವನ್ನು ಪಠ್ಯದಿಂದ ಕೈಬಿಡಿ : ಸರ್ಕಾರಕ್ಕೆ ಪತ್ರ ಬರೆದ ದೇವನೂರು ಮಹದೇವ!

ಅವರ ಪಕ್ಷದ ನಾಯಕರುಗಳಿಗೆ ಹಾಗೂ ಪಕ್ಷಕ್ಕೆ ಅನುಕೂಲ ಆಗಲಿ ಎಂದು ತರುತ್ತಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಆತುರವಾಗಿ ತಂದರು. ಇಡೀ ದೇಶದಲ್ಲಿ ಅವರದ್ದೇ ಪಕ್ಷ ಆಡಳಿತದಲ್ಲಿ ಇದ್ದ ಕಡೆಗಳಲ್ಲಿ ತರಲು ಆಗಿಲ್ಲ. ಇಲ್ಲಿ ಮಾತ್ರ ಆತುರವಾಗಿ ತಂದರು. ಮಕ್ಕಳ ತಲೆಗೆ ಅವರ ಪಕ್ಷದ,ಸಂಘಟನೆ ವಿಚಾರಗಳ ತುಂಬಲು ಹೊರಟಿದ್ದಾರೆ. ಅದು ಅಪರಾಧ ಹಾಗೂ ತಪ್ಪು. ಜನರೇ ಅದಕ್ಕೆ ಉತ್ತರ ಹೇಳ್ತಾರೆ ಎಂದು ಡಿಕೆ ಶಿವಕುಮಾರ್‌ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ