ಬೆಂಗಳೂರು: ದಿನೇಶ್ ಗುಂಡೂರಾವ್ ರಾಜೀನಾಮೆಯಿಂದ ತೆರವಾದ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್ನಲ್ಲಿ ಭರ್ಜರಿ ಪೈಪೋಟಿ ನಡೆಯುತ್ತಿದ್ದು ಮಾಜಿ ಸಚಿವ ಡಿ.ಕೆ ಶಿವಕುಮಾರ್ ಹಾಗೂ ಮಾಜಿ ಸಂಸದ ಕೆ.ಎಚ್ ಮುನಿಯಪ್ಪ ರೇಸ್ನಲ್ಲಿದ್ದಾರೆ. ಇಬ್ಬರು ನಾಯಕರು ದೆಹಲಿಯಲ್ಲಿ ಬೀಡು ಬಿಟ್ಟಿದ್ದು ಅಧ್ಯಕ್ಷ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದಾರೆ.
ಉಪಚುನಾವಣೆಯಲ್ಲಿ ಸೋಲಿನ ನೈತಿಕ ಹೊಣೆ ಹೊತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದಾರೆ. ಅಲ್ಲದೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ದಿನೇಶ್ ಗುಂಡೂರಾವ್ ರಾಜೀನಾಮೆ ಸಲ್ಲಿಸಿದ್ದಾರೆ. ಇಬ್ಬರ ರಾಜೀನಾಮೆಯನ್ನು ಕಾಂಗ್ರೆಸ್ ಹೈ ಕಮಾಂಡ್ ಇದುವರೆಗೂ ಅಂಗೀಕಾರ ಮಾಡಿಲ್ಲ.
ಈ ನಡುವೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಪೈಪೋಟಿ ಶುರುವಾಗಿದ್ದು ಮಾಜಿ ಸಚಿವ ಡಿ.ಕೆ ಶಿವಕುಮಾರ್ ಹಾಗೂ ಎಚ್.ಕೆ ಪಾಟೀಲ್ ಜೊತೆಗೆ ಕೆ.ಎಚ್ ಮುನಿಯಪ್ಪ ಕೂಡಾ ರೇಸ್ನಲ್ಲಿದ್ದಾರೆ. ಒಂದು ವೇಳೆ ದಿನೇಶ್ ಗುಂಡೂರಾವ್ ರಾಜೀನಾಮೆ ಅಂಗೀಕಾರಗೊಂಡರೆ ಆ ಸ್ಥಾನಕ್ಕೆ ಡಿಕೆ ಶಿವಕುಮಾರ್ ಆಯ್ಕೆ ಬಹುತೇಕ ಖಚಿತವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ತಜ್ಞರ ವರದಿ ಬಂದ ನಂತರ ಟಿಪ್ಪು ಸುಲ್ತಾನ್ ಪಠ್ಯ ತೆಗೆಯುವ ಬಗ್ಗೆ ನಿರ್ಧಾರ: ಸುರೇಶ್ ಕುಮಾರ್
ಡಿಕೆಶಿ ಒಕ್ಕಲಿಗ ಸಮುದಾಯದ ಪ್ರಭಾವಿ ಮುಖಂಡರಾಗಿರುವುದರಿಂದ ಒಕ್ಕಲಿಗರನ್ನು ಒಳಗೊಳ್ಳುವ ಪ್ರಕ್ರಿಯೆಯ ಭಾಗವಾಗಿ ಡಿಕೆಶಿಗೆ ಮಣೆ ಹಾಕಲು ಹೈ ಕಮಾಂಡ್ ಒಲವು ವ್ಯಕ್ತಪಡಿಸಿದೆ ಎಂದು ಕಾಂಗ್ರೆಸ್ ಮೂಲಗಳಿಂದ ತಿಳಿದುಬಂದಿದೆ.
ಇನ್ನು ಕೆ.ಎಚ್ ಮುನಿಯಪ್ಪ ಅವರು ನಾನು ಕೂಡಾ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದು ಅಧ್ಯಕ್ಷ ಸ್ಥಾನಕ್ಕೆ ಹೆಸರನ್ನು ಪರಿಗಣಿಸುವಂತೆ ಒತ್ತಾಯಿಸಿದ್ದಾರೆ. ದೆಹಲಿಯಲ್ಲಿ ಬೀಡುಬಿಟ್ಟಿರುವ ಅವರು, ಕಾಂಗ್ರೆಸ್ ಹೈ ಕಮಾಂಡ್ ಅವಕಾಶ ನೀಡಿದರೆ ಕೆಲಸ ಮಾಡುತ್ತೇನೆ. ನಾನು ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದರೂ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ನಿರ್ಧಾರಕ್ಕೆ ಬದ್ಧನಾಗಿದ್ದೇನೆ ಎಂದಿದ್ದಾರೆ.
ಬೈ ಎಲೆಕ್ಷನ್ನಲ್ಲಿ ಸಿದ್ದುಗೆ 'ಕೈ'ಕೊಟ್ಟ 'ಹಿರಿಯರಿಗೆ' ಶಾಕ್! ಹೈಕಮಾಂಡ್ಗೆ 'ಏಕಾಂಗಿ' ಹೋರಾಟದ ರಿಪೋರ್ಟ್!
ಸದ್ಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅನಾರೋಗ್ಯದ ಹಿನ್ನೆಲೆಯಲ್ಲಿ ವಿಶ್ರಾಂತಿಯಲ್ಲಿದ್ದಾರೆ. ಅವರು ಸುಧಾರಿಸಿಕೊಂಡ ಬಳಿಕ ದೆಹಲಿಯಲ್ಲಿ ಮಾತುಕತೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಉಪಚುನಾವಣೆಯಲ್ಲಿ ಸೋಲಿನ ನೈತಿಕ ಹೊಣೆ ಹೊತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದಾರೆ. ಅಲ್ಲದೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ದಿನೇಶ್ ಗುಂಡೂರಾವ್ ರಾಜೀನಾಮೆ ಸಲ್ಲಿಸಿದ್ದಾರೆ. ಇಬ್ಬರ ರಾಜೀನಾಮೆಯನ್ನು ಕಾಂಗ್ರೆಸ್ ಹೈ ಕಮಾಂಡ್ ಇದುವರೆಗೂ ಅಂಗೀಕಾರ ಮಾಡಿಲ್ಲ.
ಈ ನಡುವೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಪೈಪೋಟಿ ಶುರುವಾಗಿದ್ದು ಮಾಜಿ ಸಚಿವ ಡಿ.ಕೆ ಶಿವಕುಮಾರ್ ಹಾಗೂ ಎಚ್.ಕೆ ಪಾಟೀಲ್ ಜೊತೆಗೆ ಕೆ.ಎಚ್ ಮುನಿಯಪ್ಪ ಕೂಡಾ ರೇಸ್ನಲ್ಲಿದ್ದಾರೆ. ಒಂದು ವೇಳೆ ದಿನೇಶ್ ಗುಂಡೂರಾವ್ ರಾಜೀನಾಮೆ ಅಂಗೀಕಾರಗೊಂಡರೆ ಆ ಸ್ಥಾನಕ್ಕೆ ಡಿಕೆ ಶಿವಕುಮಾರ್ ಆಯ್ಕೆ ಬಹುತೇಕ ಖಚಿತವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ತಜ್ಞರ ವರದಿ ಬಂದ ನಂತರ ಟಿಪ್ಪು ಸುಲ್ತಾನ್ ಪಠ್ಯ ತೆಗೆಯುವ ಬಗ್ಗೆ ನಿರ್ಧಾರ: ಸುರೇಶ್ ಕುಮಾರ್
ಡಿಕೆಶಿ ಒಕ್ಕಲಿಗ ಸಮುದಾಯದ ಪ್ರಭಾವಿ ಮುಖಂಡರಾಗಿರುವುದರಿಂದ ಒಕ್ಕಲಿಗರನ್ನು ಒಳಗೊಳ್ಳುವ ಪ್ರಕ್ರಿಯೆಯ ಭಾಗವಾಗಿ ಡಿಕೆಶಿಗೆ ಮಣೆ ಹಾಕಲು ಹೈ ಕಮಾಂಡ್ ಒಲವು ವ್ಯಕ್ತಪಡಿಸಿದೆ ಎಂದು ಕಾಂಗ್ರೆಸ್ ಮೂಲಗಳಿಂದ ತಿಳಿದುಬಂದಿದೆ.
ಇನ್ನು ಕೆ.ಎಚ್ ಮುನಿಯಪ್ಪ ಅವರು ನಾನು ಕೂಡಾ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದು ಅಧ್ಯಕ್ಷ ಸ್ಥಾನಕ್ಕೆ ಹೆಸರನ್ನು ಪರಿಗಣಿಸುವಂತೆ ಒತ್ತಾಯಿಸಿದ್ದಾರೆ. ದೆಹಲಿಯಲ್ಲಿ ಬೀಡುಬಿಟ್ಟಿರುವ ಅವರು, ಕಾಂಗ್ರೆಸ್ ಹೈ ಕಮಾಂಡ್ ಅವಕಾಶ ನೀಡಿದರೆ ಕೆಲಸ ಮಾಡುತ್ತೇನೆ. ನಾನು ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದರೂ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ನಿರ್ಧಾರಕ್ಕೆ ಬದ್ಧನಾಗಿದ್ದೇನೆ ಎಂದಿದ್ದಾರೆ.
ಬೈ ಎಲೆಕ್ಷನ್ನಲ್ಲಿ ಸಿದ್ದುಗೆ 'ಕೈ'ಕೊಟ್ಟ 'ಹಿರಿಯರಿಗೆ' ಶಾಕ್! ಹೈಕಮಾಂಡ್ಗೆ 'ಏಕಾಂಗಿ' ಹೋರಾಟದ ರಿಪೋರ್ಟ್!
ಸದ್ಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅನಾರೋಗ್ಯದ ಹಿನ್ನೆಲೆಯಲ್ಲಿ ವಿಶ್ರಾಂತಿಯಲ್ಲಿದ್ದಾರೆ. ಅವರು ಸುಧಾರಿಸಿಕೊಂಡ ಬಳಿಕ ದೆಹಲಿಯಲ್ಲಿ ಮಾತುಕತೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.