ಆ್ಯಪ್ನಗರ

ಅನರ್ಹರ ವಿರುದ್ಧ ಹೋರಾಟ

ಅನರ್ಹ ಶಾಸಕರ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ಹೋರಾಟ ಮುಂದುವರಿಸಲಾಗುವುದು. ಜತೆಗೆ ಪ್ರತಿಪಕ್ಷದ ಸ್ಥಾನದಲ್ಲಿ ಕುಳಿತು ಸಮರ್ಥ ಕೆಲಸ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

Vijaya Karnataka 2 Aug 2019, 5:00 am
ಬೆಂಗಳೂರು : ಅನರ್ಹ ಶಾಸಕರ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ಹೋರಾಟ ಮುಂದುವರಿಸಲಾಗುವುದು. ಜತೆಗೆ ಪ್ರತಿಪಕ್ಷದ ಸ್ಥಾನದಲ್ಲಿ ಕುಳಿತು ಸಮರ್ಥ ಕೆಲಸ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.
Vijaya Karnataka Web kpcc stugle against disqualified mlas says dinesh gundurao
ಅನರ್ಹರ ವಿರುದ್ಧ ಹೋರಾಟ


ಪಕ್ಷದ ಕಚೇರಿಯಲ್ಲಿ ನಡೆದ ಹಿರಿಯ ಮುಖಂಡರ ಸಭೆ ಬಳಿಕ ಮಾತನಾಡಿದ ಅವರು, ''ಪಕ್ಷ ದ್ರೋಹಿಗಳಿಗೆ ತಕ್ಕ ಶಾಸ್ತಿಯಾಗಬೇಕಿದೆ. ಈ ಹಿನ್ನೆಲೆಯಲ್ಲಿ ಕಾನೂನು ಆಯಾಮದ ಬಗ್ಗೆಯೂ ಗಂಭೀರ ಚರ್ಚೆ ನಡೆಸಿದ್ದೇವೆ. ಪಂಚಮಸಾಲಿ ಸಮುದಾಯದ ನಿಯೋಗಕ್ಕೆ ಸಿಎಂ ಯಡಿಯೂರಪ್ಪ ನೀಡಿದ ಉತ್ತರದಿಂದಲೇ ಸರಕಾರ ಕೆಡವಿದ್ದು ಯಾರೆಂದು ಸ್ಪಷ್ಟವಾಗಿದೆ,'' ಎಂದರು.

''ಟಿಪ್ಪು ಜಯಂತಿ ರದ್ದು ಮಾಡಿದ ಸರಕಾರ ಹಿಂದೂ ಮುಖಂಡರ ಮೇಲಿನ ಕೇಸ್‌ ವಾಪಸ್‌ ತೆಗೆದುಕೊಳ್ಳಲು ಹೊರಟಿದೆ. ಬಿಜೆಪಿಯವರು ವೋಟಿಗಾಗಿ ಏನು ಬೇಕಾದರೂ ಮಾಡುತ್ತಾರೆ. ಹಿಂದೂ ಕಾರ್ಯಕರ್ತರ ವಿರುದ್ಧದ ಪ್ರಕರಣವನ್ನಷ್ಟೇ ಕೈಬಿಡುವ ಬದಲು ನಿಷ್ಪಕ್ಷಪಾತವಾಗಿ ಎಲ್ಲ ಪ್ರಕರಣಗಳ ತನಿಖೆ ನಡೆಸಿ ಇತ್ಯರ್ಥಗೊಳಿಸಲಿ,'' ಎಂದು ಒತ್ತಾಯಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ