ಆ್ಯಪ್ನಗರ

ಕೆಪಿಎಲ್ ಮ್ಯಾಚ್ ಫಿಕ್ಸಿಂಗ್: ಇಬ್ಬರು ಆಟಗಾರರಿಗೆ ಸಿಕ್ತು ಬೇಲ್: ಬಳ್ಳಾರಿ ಟಸ್ಕರ್‌ ಮಾಲೀಕನಿಗೂ ರಿಲೀಫ್!

2019ರ ಕೆಪಿಎಲ್‌ ಫೈನಲ್ಸ್‌ನಲ್ಲಿ ಬಳ್ಳಾರಿ ಟಸ್ಕರ್ಸ್‌ ಮತ್ತು ಹುಬ್ಬಳ್ಳಿ ಟೈಗರ್ಸ್‌ ನಡುವೆ ನಡೆದ ಪಂದ್ಯದಲ್ಲಿ ಆರೋಪಿಗಳು ಬಳ್ಳಾರಿ ತಂಡದ ಆಟಗಾರರು ನಿಧಾನಗತಿಯಲ್ಲಿ ಬ್ಯಾಟಿಂಗ್‌ ಮಾಡಲು 20 ಲಕ್ಷ ರೂ. ಪಡೆದಿದ್ದರು ಎನ್ನಲಾಗಿದೆ.

Vijaya Karnataka 11 Dec 2019, 7:19 pm
ಬೆಂಗಳೂರು: ಕೆಪಿಎಲ್‌ ಮ್ಯಾಚ್‌ ಫಿಕ್ಸಿಂಗ್‌ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಗೌತಮ್ ಹಾಗೂ ಅಬ್ರಾರ್ ಖಾಜಿಗೆ ಬೇಲ್ ಸಿಕ್ಕಿದೆ. ಮೂರು ಬಾರಿ ಐಪಿಎಲ್‌ನಲ್ಲಿ ಆಡಿರುವ ಇವರಿಬ್ಬರೂ ಹಗರಣ ಸಂಬಂಧ ಬಂಧನಕ್ಕೆ ಒಳಗಾಗಿದ್ದರು. ಸಿ.ಎಂ.ಗೌತಮ್‌ ಪ್ರಥಮ ದರ್ಜೆ ಕ್ರಿಕೆಟ್‌ ಆಟಗಾರ ಹಾಗೂ ಬಳ್ಳಾರಿ ಟಸ್ಕರ್‌ ತಂಡದ ನಾಯಕನೂ ಆಗಿದ್ದ. ಇನ್ನು ಅಬ್ರಾರ್‌ ಖಾಜಿ, ಕರ್ನಾಟಕ ಕ್ರಿಕೆಟ್‌ ತಂಡದ ಮಾಜಿ ಆಟಗಾರನಾಗಿದ್ದ. ಇವರಿಬ್ಬರಿಗೂ ಹೈಕೋರ್ಟ್‌ ಷರತ್ತಿನ ಜಾಮೀನು ಮಂಜೂರು ಮಾಡಿದೆ.
Vijaya Karnataka Web ಕೆಪಿಎಲ್ ಮ್ಯಾಚ್ ಫಿಕ್ಸಿಂಗ್: ಇಬ್ಬರು ಆಟಗಾರರಿಗೆ ಸಿಕ್ತು ಬೇಲ್: ಬಳ್ಳಾರಿ ಟಸ್ಕರ್‌ ಮಾಲೀಕನಿಗೂ ರಿಲೀಫ್!


ಇದೇ ಹಗರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಬಳ್ಳಾರಿ ಟಸ್ಕರ್‌ ತಂಡದ ಮಾಲೀಕ ಅರವಿಂದ ರೆಡ್ಡಿಗೂ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಗೌತಮ್‌ ಮತ್ತು ಖಾಜಿ ಅವರ ಅರ್ಜಿಗಳನ್ನು ಆಲಿಸಿದ ನ್ಯಾ. ಕೆ.ಎನ್‌. ಫಣೀಂದ್ರ ಅವರಿದ್ದ ಏಕಸದಸ್ಯ ಪೀಠ, ಇಬ್ಬರೂ ಆರೋಪಿಗಳು ತಲಾ 2 ಲಕ್ಷ ಬಾಂಡ್‌, ಇಬ್ಬರು ಶ್ಯೂರಿಟಿ ನೀಡಬೇಕು ಮತ್ತು ಸಾಕ್ಷ್ಯಾಧಾರ ನಾಶಪಡಿಸಬಾರದು ಎಂಬ ಷರತ್ತುಗಳೊಂದಿಗೆ ಜಾಮೀನು ನೀಡಿತು.

ಪ್ರಕರಣದಲ್ಲಿ ಗೌತಮ್‌ ಮತ್ತು ಖಾಜಿ ಅವರ ತಪ್ಪೇನೂ ಇಲ್ಲ. ಅನಗತ್ಯವಾಗಿ ಅವರನ್ನು ಸಿಲುಕಿಸಲಾಗಿದೆ ಎಂದು ಅರ್ಜಿದಾರರ ಪರ ವಕೀಲರು ವಾದಿಸಿದರು. ಪೊಲೀಸರು ಮಾಡಿರುವ ಆರೋಪಗಳು ಸುಳ್ಳಿನಿಂದ ಕೂಡಿವೆ, ಆ ಆರೋಪಗಳಿಗೆ ಯಾವುದೇ ಆಧಾರಗಳಿಲ್ಲ. ಹಾಗಾಗಿ ಜಾಮೀನು ಮಂಜೂರು ಮಾಡಬೇಕೆಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.

ಕೆಪಿಎಲ್ ಮ್ಯಾಚ್‌ ಫಿಕ್ಸಿಂಗ್‌‌ಗೆ ಹೊಸ ಟ್ವಿಸ್ಟ್; ಸಿನಿಮಾ ನಟಿಯರ ನಂಟು

ಇದಕ್ಕೆ ಆಕ್ಷೇಪ ಎತ್ತಿದ ಸರಕಾರಿ ವಕೀಲರು, ಆರೋಪಿಗಳ ವಿರುದ್ಧ ಪೊಲೀಸರು ಸಾಕಷ್ಟು ಸಾಕ್ಷ್ಯ ಸಂಗ್ರಹ ಮಾಡಿದ್ದಾರೆ. ಇನ್ನೂ ಸಿಸಿಬಿ ತನಿಖೆ ಪ್ರಗತಿಯಲ್ಲಿದೆ. ಹಾಗಾಗಿ, ಈ ಹಂತದಲ್ಲಿ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು, ಜಾಮೀನು ನೀಡಿದರೆ ಅದು ತನಿಖೆಯ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ ಎಂದು ಕೋರಿದರು. ವಾದ-ಪ್ರತಿವಾದ ಆಲಿಸಿದ ಬಳಿಕ ಅಂತಿಮವಾಗಿ ನ್ಯಾಯಾಲಯ ಷರತ್ತಿನ ಜಾಮೀನು ನೀಡಿತು.

2019ರ ಕೆಪಿಎಲ್‌ ಫೈನಲ್ಸ್‌ನಲ್ಲಿ ಬಳ್ಳಾರಿ ಟಸ್ಕರ್ಸ್‌ ಮತ್ತು ಹುಬ್ಬಳ್ಳಿ ಟೈಗರ್ಸ್‌ ನಡುವೆ ನಡೆದ ಪಂದ್ಯದಲ್ಲಿ ಆರೋಪಿಗಳು ಬಳ್ಳಾರಿ ತಂಡದ ಆಟಗಾರರು ನಿಧಾನಗತಿಯಲ್ಲಿ ಬ್ಯಾಟಿಂಗ್‌ ಮಾಡಲು 20 ಲಕ್ಷ ರೂ. ಪಡೆದಿದ್ದರು ಎನ್ನಲಾಗಿದೆ. ಕೊನೆಗೆ ಹುಬ್ಬಳ್ಳಿ ತಂಡ ಪಂದ್ಯವನ್ನು 8 ರನ್‌ ಗಳಿಂದ ಗೆದ್ದಿತ್ತು. ಹಾಗಾಗಿ ಆರೋಪಿಗಳು ಮ್ಯಾಚ್‌ ಪಿಕ್ಸಿಂಗ್‌ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಸಿಸಿಬಿ ಪೊಲೀಸರು ಆರೋಪಿಸಿದ್ದಾರೆ.

ಮ್ಯಾಚ್ ಫಿಕ್ಸಿಂಗ್ ಪ್ರಕರಣ: ವಿನಯ್ ಕುಮಾರ್‌ಗೂ ಸಿಸಿಬಿ ನೋಟಿಸ್!

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ