ಆ್ಯಪ್ನಗರ

ಕೆಪಿಎಂಇ ಕಾಯಿದೆ ಸಮಗ್ರ ಅನುಷ್ಠಾನ : ಸಚಿವ

ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ನಿಯಂತ್ರಣ ಕಾಯಿದೆಯ ಸಮಗ್ರ ಅನುಷ್ಠಾನಕ್ಕೆ ಸರಕಾರ ಬದ್ಧ. ಸರಕಾರ ಖಾಸಗಿ ಆಸ್ಪತ್ರೆಗಳ ಒತ್ತಡಕ್ಕೆ ಮಣಿಯುವ ಪ್ರಶ್ನೆಯೇ ಇಲ್ಲ ಎಂದು ಆರೋಗ್ಯ ಸಚಿವ ಶಿವಾನಂದ ಪಾಟೀಲ್‌ ಹೇಳಿದ್ದಾರೆ.

Vijaya Karnataka Web 11 Jan 2019, 5:00 am
ವಿಕ ಸುದ್ದಿಲೋಕ ತುಮಕೂರು
Vijaya Karnataka Web KPME

ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ನಿಯಂತ್ರಣ (ಕೆಪಿಎಂಇ) ಕಾಯಿದೆ ಈಗಾಗಲೇ ಜಾರಿಗೆ ಬಂದಿದ್ದು, ಅದನ್ನು ಸಮಗ್ರವಾಗಿ ಅನುಷ್ಠಾನಕ್ಕೆ ತರಲಾಗುವುದು ಎಂದು ಆರೋಗ್ಯ ಸಚಿವ ಶಿವಾನಂದ ಪಾಟೀಲ್‌ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಕಾಯಿದೆ ಜಾರಿಗೊಳಿಸುವ ವಿಚಾರದಲ್ಲಿ ಸರಕಾರ ಖಾಸಗಿ ಆಸ್ಪತ್ರೆಗಳ ಒತ್ತಡಕ್ಕೆ ಮಣಿದಿಲ್ಲ. ಈ ಬಗ್ಗೆ ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳೇ ಕಾಯಿದೆ ಅನುಷ್ಠಾನದ ನೇತೃತ್ವ ವಹಿಸಿದ್ದಾರೆ. ರೋಗಿಗಳು, ಸಂಬಂಧಿಕರಿಂದ ದೂರು ದುಮ್ಮಾನಗಳು ಬಂದರೂ ಕ್ರಮಕೈಗೊಳ್ಳುತ್ತಾರೆ,'' ಎಂದರು.
''ಆಯುಷ್ಮಾನ್‌ ಭಾರತ್‌, ಆಯುಷ್ಮಾನ್‌ ಕರ್ನಾಟಕ ಯೋಜನೆ ಬಂದ ಮೇಲೆ ಆರೋಗ್ಯ ಇಲಾಖೆಗೆ ಹೆಚ್ಚು ಆದಾಯ ಬರುತ್ತಿದೆ. ಬಂದ ಆದಾಯದಲ್ಲಿ ವೈದ್ಯ ಸಿಬ್ಬಂದಿಗೆ ಇನ್ಸೆಂಟಿವ್‌ ನೀಡಲಾಗುತ್ತಿದೆ,'' ಎಂದು ತಿಳಿಸಿದರು.

ರೋಗಿಗೆ ಕ್ಯಾರೇ ಎನ್ನದ ಸಚಿವ
ಆಸ್ಪತ್ರೆ ಪರಿಶೀಲನೆ ವೇಳೆ ಸಚಿವ ಶಿವಾನಂದ ಪಾಟೀಲ್‌, ನೆಲದಲ್ಲಿ ಮಲಗಿದ್ದ ಬಾಲಕಿ ಹಾಗೂ ಆಕೆಯ ತಾಯಿಯನ್ನು ನೋಡಿಯೂ ನೋಡದಂತೆ ಹೋಗಿದ್ದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಯಿತು. ಸಚಿವರ ಭೇಟಿ ವೇಳೆ ವೈದ್ಯರ ಕೊಠಡಿ ಹೊರಗೆ ಮಹಿಳೆಯೊಬ್ಬರು ಮಗಳನ್ನು ನೆಲದ ಮೇಲೆ ಮಲಗಿಸಿ ಆರೈಕೆ ಮಾಡುತ್ತಿದ್ದಳು. ಆದರೆ ಕ್ಯಾರೆ ಎನ್ನಲಿಲ್ಲ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ