ಬೆಂಗಳೂರು : ಕೆಪಿಎಸ್ಸಿ 1998ನೇ ಸಾಲಿನ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ನೇಮಕ ಹಗರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ತೀರ್ಪಿನಿಂದ 7 ಐಎಎಸ್ ಅಧಿಕಾರಿಗಳಿಗೆ ಹಿಂಬಡ್ತಿಯಾಗುವುದು ಹಾಗೂ 28 ಮಂದಿ 'ಎ' ಮತ್ತು 'ಬಿ' ದರ್ಜೆ ಅಧಿಕಾರಿಗಳು ಉದ್ಯೋಗ ಕಳೆದುಕೊಳ್ಳುವುದನ್ನು ತಪ್ಪಿಸಲು ಸುಗ್ರೀವಾಜ್ಞೆ ಹೊರಡಿಸಲು ನಿರ್ಧರಿಸಿರುವ ರಾಜ್ಯ ಸರಕಾರದ ತೀರ್ಮಾನಕ್ಕೆ ಸ್ಪೀಕರ್ ಕೆ.ಆರ್.ರಮೇಶ್ಕುಮಾರ್ ವಿರೋಧ ವ್ಯಕ್ತಪಡಿಸಿದ್ದಾರೆ.
ಬಾಗೇಪಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಕೂಡ ಮುಖ್ಯಮಂತ್ರಿಯವರಿಗೆ ಪತ್ರ ಬರೆದಿದ್ದು ''ಸುಗ್ರೀವಾಜ್ಞೆಯಿಂದ ಹಲವು ಕೆಎಎಸ್ ವೃಂದದ ಅಧಿಕಾರಿಗಳ ಸೇವಾ ಹಿರಿತನಕ್ಕೆ ಧಕ್ಕೆ ಬರುವುದರ ಜತೆಗೆ ನ್ಯಾಯಯುತವಾಗಿ ಲಭಿಸಬೇಕಾದ ಬಡ್ತಿಗಳು ವರ್ಷಗಟ್ಟಲೇ ಮುಂದೂಡಲ್ಪಡುತ್ತವೆ. ಉದ್ದೇಶಿತ ಸುಗ್ರೀವಾಜ್ಞೆಯಲ್ಲಿ ಅಧಿಕಾರಿಗಳಿಗೆ ಸೇವಾ ಭದ್ರತೆಯನ್ನು ಮಾತ್ರ ನೀಡುವುದು ನ್ಯಾಯಸಮ್ಮತವಾಗಿದೆ. ಆದರೆ ಕೆಲವೇ ಅಧಿಕಾರಿಗಳ ಹಿತವನ್ನು ಸರಕಾರ ಗಮನದಲ್ಲಿಟ್ಟುಕೊಂಡು ಅವರಿಗೆ ಸೇವಾ ಭದ್ರತೆ ಹಾಗೂ ಸೇವಾ ಹಿರಿತನ ನೀಡಿ ಯಾವ ತಪ್ಪೂ ಮಾಡದ ಇತರೆ ಅಧಿಕಾರಿಗಳನ್ನು ಶಿಕ್ಷಿಸುವುದು ಸರಿಯಾದ ಕ್ರಮವಲ್ಲ. ಈ ಹಿನ್ನೆಲೆಯಲ್ಲಿ ಸಂಪುಟದಲ್ಲಿ ಚರ್ಚಿಸಿ ಅಧಿಕಾರಿಗಳಿಗೆ ನ್ಯಾಯ ದೊರಕಿಸಬೇಕು,''ಎಂದು ಮನವಿ ಮಾಡಿದ್ದಾರೆ.
ಶಾಸಕರು ಬರೆದಿರುವ ಪತ್ರಗಳನ್ನು ಉಲ್ಲೇಖಿಸಿ ಸಿಎಂಗೆ ಪತ್ರ ಬರೆದಿರುವ ಸ್ಪೀಕರ್, ''ಯಾವುದೇ ಸರಕಾರಿ ನೌಕರರ ಸೇವಾ ಭದ್ರತೆಯನ್ನು ಒದಗಿಸುವ ಸರಕಾರಿ ನಿರ್ಣಯಕ್ಕೆ ನಮ್ಮ ಯಾರ ಆಕ್ಷೇಪವೂ ಇರಕೂಡದು. ಅದಕ್ಕೆ ಸೇವಾ ಜೇಷ್ಠತೆ ಪರಿಗಣಿಸುವಾಗ ಅತ್ಯಂತ ಜಾಗರೂಕತೆಯಿಂದ ನಾವು ಹೆಜ್ಜೆ ಇಡಬೇಕಾಗುತ್ತದೆ. ಯಾವುದೇ ಒಂದು ಸದುದ್ದೇಶದಿಂದ ಮಾಡುವ ಕೆಲಸ ನಮ್ಮ ಅರಿವಿಲ್ಲದೆ ನಿರಪರಾಧಿಗಳಾದ ಇತರರಿಗೆ ವಿನಾಕಾರಣ ಅನ್ಯಾಯ ಆಗದಂತೆ ನಾವು ಜಾಗ್ರತೆವಹಿಸಬೇಕಾಗುತ್ತದೆ,'' ಎಂದು ಹೇಳಿದ್ದಾರೆ.
ಬಾಗೇಪಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಕೂಡ ಮುಖ್ಯಮಂತ್ರಿಯವರಿಗೆ ಪತ್ರ ಬರೆದಿದ್ದು ''ಸುಗ್ರೀವಾಜ್ಞೆಯಿಂದ ಹಲವು ಕೆಎಎಸ್ ವೃಂದದ ಅಧಿಕಾರಿಗಳ ಸೇವಾ ಹಿರಿತನಕ್ಕೆ ಧಕ್ಕೆ ಬರುವುದರ ಜತೆಗೆ ನ್ಯಾಯಯುತವಾಗಿ ಲಭಿಸಬೇಕಾದ ಬಡ್ತಿಗಳು ವರ್ಷಗಟ್ಟಲೇ ಮುಂದೂಡಲ್ಪಡುತ್ತವೆ. ಉದ್ದೇಶಿತ ಸುಗ್ರೀವಾಜ್ಞೆಯಲ್ಲಿ ಅಧಿಕಾರಿಗಳಿಗೆ ಸೇವಾ ಭದ್ರತೆಯನ್ನು ಮಾತ್ರ ನೀಡುವುದು ನ್ಯಾಯಸಮ್ಮತವಾಗಿದೆ. ಆದರೆ ಕೆಲವೇ ಅಧಿಕಾರಿಗಳ ಹಿತವನ್ನು ಸರಕಾರ ಗಮನದಲ್ಲಿಟ್ಟುಕೊಂಡು ಅವರಿಗೆ ಸೇವಾ ಭದ್ರತೆ ಹಾಗೂ ಸೇವಾ ಹಿರಿತನ ನೀಡಿ ಯಾವ ತಪ್ಪೂ ಮಾಡದ ಇತರೆ ಅಧಿಕಾರಿಗಳನ್ನು ಶಿಕ್ಷಿಸುವುದು ಸರಿಯಾದ ಕ್ರಮವಲ್ಲ. ಈ ಹಿನ್ನೆಲೆಯಲ್ಲಿ ಸಂಪುಟದಲ್ಲಿ ಚರ್ಚಿಸಿ ಅಧಿಕಾರಿಗಳಿಗೆ ನ್ಯಾಯ ದೊರಕಿಸಬೇಕು,''ಎಂದು ಮನವಿ ಮಾಡಿದ್ದಾರೆ.
ಶಾಸಕರು ಬರೆದಿರುವ ಪತ್ರಗಳನ್ನು ಉಲ್ಲೇಖಿಸಿ ಸಿಎಂಗೆ ಪತ್ರ ಬರೆದಿರುವ ಸ್ಪೀಕರ್, ''ಯಾವುದೇ ಸರಕಾರಿ ನೌಕರರ ಸೇವಾ ಭದ್ರತೆಯನ್ನು ಒದಗಿಸುವ ಸರಕಾರಿ ನಿರ್ಣಯಕ್ಕೆ ನಮ್ಮ ಯಾರ ಆಕ್ಷೇಪವೂ ಇರಕೂಡದು. ಅದಕ್ಕೆ ಸೇವಾ ಜೇಷ್ಠತೆ ಪರಿಗಣಿಸುವಾಗ ಅತ್ಯಂತ ಜಾಗರೂಕತೆಯಿಂದ ನಾವು ಹೆಜ್ಜೆ ಇಡಬೇಕಾಗುತ್ತದೆ. ಯಾವುದೇ ಒಂದು ಸದುದ್ದೇಶದಿಂದ ಮಾಡುವ ಕೆಲಸ ನಮ್ಮ ಅರಿವಿಲ್ಲದೆ ನಿರಪರಾಧಿಗಳಾದ ಇತರರಿಗೆ ವಿನಾಕಾರಣ ಅನ್ಯಾಯ ಆಗದಂತೆ ನಾವು ಜಾಗ್ರತೆವಹಿಸಬೇಕಾಗುತ್ತದೆ,'' ಎಂದು ಹೇಳಿದ್ದಾರೆ.