ಆ್ಯಪ್ನಗರ

ಸಮ್ಮಿಶ್ರ ಸರಕಾರಕ್ಕೆ ಛೀ, ಥೂ ಎನ್ನುವ ಸ್ಥಿತಿ ಬಂದಿದೆ: ಈಶ್ವರಪ್ಪ

ಮನ್ಸೂರ್ ಜೀವಂತವಾಗಿ ಉಳಿಯಲು ಸಾಧ್ಯವಿಲ್ಲ. ‌ ಯಾಕೆಂದರೆ ಪ್ರಭಾವಿಗಳು ಬಿಡುವುದಿಲ್ಲ. ಐಎಂಎನಲ್ಲಿ ಮೈತ್ರಿ ಸರಕಾರದ ಸಚಿವರು ಇದ್ದಾರೆ. ಹಾಗಾಗಿ ಈ ಪ್ರಕರಣ ಸಿಬಿಐ ಗೆ ಒಪ್ಪಿಸಬೇಕು. ಮನ್ಸೂರ್ ರಕ್ಷಣೆ ಮಾಡಬೇಕು ಎಂದು ತಿಳಿಸಿದರು.

Vijaya Karnataka Web 2 Jul 2019, 6:20 pm
ಹುಬ್ಬಳ್ಳಿ: ಮೈತ್ರಿ ಸರಕಾರಕ್ಕೆ ಛೀ, ಥೂ ಎನ್ನುವ ಸ್ಥಿತಿ ಬಂದಿದೆ. ರಾಜ್ಯದಲ್ಲಿ ಮೈತ್ರಿ ಸರಕಾರ ಹೋದರೆ ಪಕ್ಷದ ಹೈ ಕಮಾಂಡ್ ಗಮನಕ್ಕೆ ತರುತ್ತೇವೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್‌. ಈಶ್ವರಪ್ಪ ತಿಳಿಸಿದ್ದಾರೆ.
Vijaya Karnataka Web ಕೆಎಸ್ ಈಶ್ವರಪ್ಪ
ಕೆಎಸ್‌ ಈಶ್ವರಪ್ಪ


ಹುಬ್ಬಳ್ಳಿಯಲ್ಲಿ ಕೆ ಎಸ್ ಈಶ್ವರಪ್ಪ ಸುದ್ದಗಾರರೊಂದಿಗೆ ಮಾತನಾಡಿದರು.

ನಮ್ಮ ನಾಯಕರು ಬಿ.ಎಸ್. ಯಡಿಯೂರಪ್ಪ. ಮುಂದಿನ ಸಿಎಂ ಯಡಿಯೂರಪ್ಪನವರೇ ಅಂತ ಈಗಾಗಲೇ ಹೈಕಮಾಂಡ್ ತೀರ್ಮಾನಿಸಿದೆ. ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ತಾಂಡವಾಡುತ್ತಿದೆ. ರಾಜ್ಯದಲ್ಲಿ ಸರಕಾರ ಇಲ್ಲ ಎಂಬಂತಾಗಿದೆ ಎಂದರು.

ಐಎಎಂ ಜ್ಯುವೆಲ್ಸ್ ವಂಚನೆ ಪ್ರಕರಣದಲ್ಲಿ ಸಚಿವ ಜಮೀರ್‌ ಅಹಮದ್‌ ಹೆಸರು ಕೇಳಿ ಬಂದಿದೆ. ರಾಜ್ಯ ಸರಕಾರಕ್ಕೆ ಈ ಮುಂಚೆಯೇ ಮಾಹಿತಿ ಇದ್ದರೂ ಕ್ರಮ ಕೈಗೊಂಡಿಲ್ಲ ಎಂದು ಈಶ್ವರಪ್ಪ ದೂರಿದರು.

ಈ‌ ಪ್ರಕರಣ ಮುಚ್ಚಿಹಾಕಲು ಮೈತ್ರಿ ಸರಕಾರ ಮುಂದಾಗಿದೆ. ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಲು ಸಿದ್ಧರಾಗಿದ್ದಾರೆ. ಸರಕಾರದ ಬುಡ ಅಲುಗಾಡುತ್ತಿದೆ. ಅವರಿಗೆ ತಮ್ಮ ಶಾಸಕರನ್ನು ಹತೋಟಿಗೆ ಇಟ್ಟಿಕೊಳ್ಳಲು ಆಗುತ್ತಿಲ್ಲ. ಈಗಲೇ ರಾಜೀನಾಮೆ ಪರ್ವ ಆರಂಭವಾಗಿದೆ. ಹೀಗಾಗಿ ಸಿಎಂ ಕುಮಾರಸ್ವಾಮಿ ಗೌರವದಿಂದ ರಾಜೀನಾಮೆ ನೀಡಲಿ ಎಂದು ಈಶ್ವರಪ್ಪ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ