ಆ್ಯಪ್ನಗರ

Santro Ravi Arrest | ಸ್ಯಾಂಟ್ರೋ ರವಿ ತಪ್ಪಿತಸ್ಥನಾಗಿದ್ದರೆ ಸೂಕ್ತ ಕಾನೂನು ಕ್ರಮ: ಆರಗ ಜ್ಞಾನೇಂದ್ರ

Santro Ravi Case: ವೇಶ್ಯಾವಾಟಿಕೆ ಮತ್ತು ವರ್ಗಾವಣೆ ದಂಧೆಯ ಆರೋಪಗಳು ಕೆ. ಎಸ್.ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿ ಮೇಲಿವೆ. 11 ದಿನಗಳಿಂದ ಆತ ತಲೆ ಮರೆಸಿಕೊಂಡು ರಾಜ್ಯದಿಂದ ರಾಜ್ಯಕ್ಕೆ ಸಂಚರಿಸುತ್ತಿದ್ದವನ ಪತ್ತೆಗೆ ಪೊಲೀಸ್‌ ಇಲಾಖೆಯು ವಿಶೇಷ ತಂಡವನ್ನು ರಚಿಸಿತ್ತು. ಮೈಸೂರು ಮತ್ತು ಮಂಗಳೂರಿನಲ್ಲೂ ಆತ ಓಡಾಡಿದ್ದ ಎಂದು ತಿಳಿದು ಬಂದಿದೆ. ಈ ಹಿಂದೆ ಗೂಂಡಾ ಕಾಯ್ದೆಯಡಿ ಸ್ಯಾಂಟ್ರೋ ರವಿ ಮೇಲೆ ಪ್ರಕರಣ ದಾಖಲಾಗಿತ್ತು ಹಾಗೂ ಹನ್ನೊಂದು ತಿಂಗಳು ಸೆರೆವಾಸ ಶಿಕ್ಷೆಯನ್ನೂ ಅನುಭವಿಸಿದ್ದ.

Reported byಇರ್ಷಾದ್ ಉಪ್ಪಿನಂಗಡಿ | Edited byಹೇಮಂತ್ ಕುಮಾರ್ ಎಸ್ | Vijaya Karnataka Web 13 Jan 2023, 6:15 pm

ಹೈಲೈಟ್ಸ್‌:

  • ಹನ್ನೊಂದು ದಿನಗಳಿಂದ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಓಡಾಡಿದ್ದ
  • ಆತನ ಬಂಧನಕ್ಕೆ ವಿಶೇಷ ಪೊಲೀಸ್ ತಂಡ ರಚಿಸಲಾಗಿತ್ತು
  • ಸರಕಾರಕ್ಕೆ ತಲೆನೋವು ತಂದಿದ್ದ ಸ್ಯಾಂಟ್ರೋ ರವಿ ವಿಚಾರ
  • ಗುಜರಾತ್‌ನಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Santro Ravi alias Manjunath
ಕೆ. ಎಸ್. ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿ
ಬೆಂಗಳೂರು: ಸ್ಯಾಂಟ್ರೋ ರವಿಯನ್ನು ಬಂಧಿಸುವಲ್ಲಿ ರಾಜ್ಯ ಪೊಲೀಸರು ಯಶಸ್ವಿಯಾಗಿದ್ದು, ತಪ್ಪಿತಸ್ಥನಾಗಿದ್ದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಈ ಕುರಿತಾಗಿ ಶುಕ್ರವಾರ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ವಂಚಕ ಎನ್ನಲಾದ ಸ್ಯಾಂಟ್ರೋ ರವಿಯನ್ನು ಬಂಧಿಸುವಲ್ಲಿ ರಾಜ್ಯ ಪೊಲೀಸರು ಯಶಸ್ವಿಯಾಗಿದ್ದಾರೆ. ಆತನ ಬಂಧನದಿಂದ ಎಲ್ಲಾ ಊಹಾ ಪೋಹಗಳಿಗೆ ತೆರೆ ಬಿದ್ದಂತಾಗಿದೆ ಎಂದಿದ್ದಾರೆ.
Santro Ravi Arrest: ಗುಜರಾತ್‌ನಲ್ಲಿ ಸ್ಯಾಂಟ್ರೋ ರವಿ ಬಂಧನ: 11 ದಿನಗಳ ಕಳ್ಳ ಪೊಲೀಸ್ ಆಟಕ್ಕೆ ಬಿತ್ತು ಬ್ರೇಕ್!
ಕಳೆದ ಹನ್ನೊಂದು ದಿನಗಳಿಂದ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ತಪ್ಪಿಸಿ ಕೊಳ್ಳುತ್ತಿದ್ದ ಸ್ಯಾಂಟ್ರೋ ರವಿ ವಿರುದ್ಧ ಇರುವ ಆರೋಪಗಳ ಬಗ್ಗೆ ಪೊಲೀಸರು ವಿಚಾರಣೆ ನಡೆಸಿ ತಪ್ಪಿಸ್ಥಸ್ಥನಾಗಿದ್ದರೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಆರಗ ತಿಳಿಸಿದ್ದಾರೆ.

ಅಲ್ಲದೆ ಸಂತ್ರಸ್ತ ವ್ಯಕ್ತಿಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಪೊಲೀಸರು ಕ್ರಮ ವಹಿಸುತ್ತಾರೆ ಎಂದೂ ಅವರು ಇದೇ ಸಂದರ್ಭದಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದ ಸ್ಯಾಂಟ್ರೋ ರವಿ ಬಂಧನ ಆಗಿದೆ. ಕಳೆದ 11 ದಿನಗಳಿಂದ ಆತ ತಲೆ ಮರೆಸಿಕೊಂಡಿದ್ದ. ಆತನ ಬಂಧನಕ್ಕೆ ವಿಶೇಷ ಪೊಲೀಸ್ ತಂಡವನ್ನು ರಚನೆ ಮಾಡಲಾಗಿತ್ತು.

Santro Ravi: ಸ್ಯಾಂಟ್ರೊ ರವಿಯ ಅನೈತಿಕ ಜಾಲ ಬೆಳೆದು ಹೆಮ್ಮರವಾಗಿದ್ದೇ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ! ಬಿಜೆಪಿ ಆರೋಪ
ಕೆ. ಎಸ್. ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿ ಪ್ರಕರಣ ರಾಜಕೀಯ ಆರೋಪ ಪ್ರತ್ಯಾರೋಪಕ್ಕೆ ಕಾರಣವಾಗಿತ್ತು. ರಾಜ್ಯದ ಪ್ರಮುಖ ರಾಜಕಾರಣಿಗಳ ಜೊತೆಗೆ ಆತ ಫೋಟೋ ತೆಗೆಸಿಕೊಂಡಿದ್ದ. ಈ ಫೋಟೋಗಳನ್ನು ಮುಂದಿಟ್ಟುಕೊಂಡು ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿತ್ತು.

ಈ ಹಿನ್ನೆಲೆಯಲ್ಲಿ ಸ್ಯಾಂಟ್ರೋ ರವಿ ಸರ್ಕಾರಕ್ಕೆ ತಲೆನೋವು ಸೃಷ್ಟಿಸಿದ್ದ. ಆತನ ಸೆರೆಗೆ ನಾಲ್ವರು ಎಸ್ಪಿಗಳ ವಿಶೇಷ ತಂಡ ರಚನೆ ಮಾಡಲಾಗಿತ್ತು. ಸ್ಯಾಂಟ್ರೋ ರವಿ ಗುಜರಾತ್‌ನಲ್ಲಿ ಇದ್ದಾನೆ ಎಂಬ ಸುಳಿವು ಸಿಕ್ಕ ಹಿನ್ನೆಲೆಯಲ್ಲಿ ಅಲ್ಲಿಗೆ ಧಾವಿಸಿದ ಪೊಲೀಸರ ವಿಶೇಷ ತಂಡ, ಆತನನ್ನು ಬಂಧನ ಮಾಡುವಲ್ಲಿ ಯಶಸ್ವಿಯಾಗಿದೆ.
Santro Ravi: ಬಿಜೆಪಿ ಆಡಳಿತಕ್ಕೆ ಸ್ಯಾಂಟ್ರೋ ರವಿ ಮುಖವಾಡ: ದಿನೇಶ್ ಗುಂಡೂರಾವ್ ಆರೋಪ
ಸ್ಯಾಂಟ್ರೋ ರವಿ ವಿರುದ್ಧ ವೈಶ್ಯಾವಾಟಿಕೆ, ವರ್ಗಾವಣೆ ದಂಧೆಯ ಆರೋಪಗಳಿವೆ. ಡಿವೈಎಸ್‌ಪಿ ಒಬ್ಬರ ಜೊತೆಗೆ ಫೋನ್‌ನಲ್ಲಿ ವರ್ಗಾವಣೆ ವಿಚಾರವಾಗಿ ಮಾತನಾಡಿದ್ದ ಆಡಿಯೋ ವೈರಲ್ ಆಗಿತ್ತು.

ಈ ಆಡಿಯೋ ಬಳಿಕ ಸ್ಯಾಂಟ್ರೋ ರವಿ ಕುರಿತಾದ ಹಲವು ವಿಚಾರಗಳು ಬಹಿರಂಗಗೊಂಡಿದ್ದವು. ಈ ಬೆಳವಣಿಗೆ ಬಳಿಕ ತಲೆಮರೆಸಿಕೊಂಡಿದ್ದ ಈತನಿಗೆ ಪೊಲೀಸರು ಬಲೆ ಬೀಸಿದ್ದರು. ಪೊಲೀಸರಿಂದ ತಪ್ಪಿಸಿಕೊಳ್ಳಲು ಉಡುಪಿ ಮಾತ್ರವಲ್ಲ, ಮೈಸೂರು ಹಾಗೂ ಮಂಗಳೂರಿನಲ್ಲೂ ಸ್ಯಾಂಟ್ರೋ ರವಿ ತಲೆಮರೆಸಿಕೊಂಡು ಓಡಾಡಿದ್ದ.
ಲೇಖಕರ ಬಗ್ಗೆ
ಇರ್ಷಾದ್ ಉಪ್ಪಿನಂಗಡಿ
ವಿಜಯ ಕರ್ನಾಟಕ ಡಿಜಿಟಲ್ ವಿಭಾಗದಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ದೃಶ್ಯ ಹಾಗೂ ಡಿಜಿಟಲ್ ಮಾಧ್ಯಮ ವರದಿಗಾರಿಕೆಯಲ್ಲಿ 12 ವರ್ಷಗಳ ಅನುಭವ ಹೊಂದಿದ್ದಾರೆ. ಸಿನಿಮಾ ನೋಡುವುದು, ಪುಸ್ತಕ ಓದುವುದು, ಸಮಯ ಸಿಕ್ಕಾಗ ಸುತ್ತಾಟ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ