ಆ್ಯಪ್ನಗರ

ಬಸ್‌ ದರ ಹೆಚ್ಚಳ ಬಜೆಟ್‌ನಲ್ಲಿ ಬೆಲೆ ಏರಿಕೆಯ ಮುನ್ಸೂಚನೆ: ಎಚ್‌ಡಿ ಕುಮಾರಸ್ವಾಮಿ

ಬಿಎಂಟಿಸಿ ಹೊರತುಪಡಿಸಿ ಕೆಎಸ್‌ಆರ್‌ಟಿಸಿ, ವಾಯವ್ಯ ಸಾರಿಗೆ ಹಾಗೂ ಈಶಾನ್ಯ ಸಾರಿಗೆ ಈ ಮೂರು ನಿಗಮಗಳ ಬಸ್‌ ಪ್ರಯಾಣ ದರವನ್ನು ಮಾತ್ರ ಹೆಚ್ಚಳ ಮಾಡಲಾಗಿದೆ. ವೋಲ್ವೊ ಬಸ್‌ ಪ್ರಯಾಣದ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.​​

Vijaya Karnataka Web 26 Feb 2020, 9:32 am
ಬೆಂಗಳೂರು: ಏಕಾಏಕಿ ಬಸ್ ದರ ಹೆಚ್ಚಳ ಮಾಡುವ ಮೂಲಕ ಜನಸಾಮಾನ್ಯರಿಗೆ ಹೊರೆ ಮಾಡಿರುವ ರಾಜ್ಯ ಸರಕಾರದ ಕ್ರಮವನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರವಾಗಿ ಖಂಡಿಸಿದ್ದಾರೆ.
Vijaya Karnataka Web HD Kumarswamy


''ಈಗಾಗಲೇ ಬೆಲೆ ಏರಿಕೆಯಿಂದಾಗಿ ದೈನಂದಿನ ಜೀವನ ನಿರ್ವಾಹಣೆ ಮಾಡುವುದು ದುಸ್ತರವಾಗಿರುವಾಗಲೇ ಬಸ್ ದರ ಹೆಚ್ಚಳ ಮಾಡುವ ಅಗತ್ಯವಾದರೂ ಇತ್ತೇ?'' ಎಂದು ಪ್ರಶ್ನಿಸಿದ್ದಾರೆ.

''ಸಾರಿಗೆ ನಿಗಮಗಳು ನಷ್ಟದಲ್ಲಿರುವುದರಿಂದ ಸರಿದೂಗಿಸಲು ದರ ಹೆಚ್ಚಳ ಮಾಡಲಾಗಿದೆ ಎಂಬುದು ಸಮರ್ಥನಿಯ ಕಾರಣವಲ್ಲ. ಸಂಸ್ಥೆಗಳಲ್ಲಿ ಸೋರಿಕೆ ತಡೆಗಟ್ಟಲು ಸರ್ಕಾರ ಬಿಗಿ ಕ್ರಮ ತೆಗೆದುಕೊಳ್ಳಬೇಕು'' ಎಂದು ಕುಮಾರಸ್ವಾಮಿ ಸಲಹೆ ಮಾಡಿದ್ದಾರೆ.

ಬಸ್‌ ಟಿಕೆಟ್‌ ದರ ಏರಿಕೆ: ಗ್ರಾಮೀಣ ಪ್ರದೇಶಕ್ಕೆ ವಿನಾಯಿತಿ, ಇಲ್ಲಿದೆ ಪರಿಷ್ಕೃತ ದರ ಪಟ್ಟಿ

''ನಾನು ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ನಾಲ್ಕು ನಿಗಮಗಳ ಬಸ್ ದರ ಹೆಚ್ಚಳ ಮಾಡಬೇಕೆಂಬ ಪ್ರಸ್ತಾವನೆ ಬಂದಿತ್ತು. ಆದರೆ, ಜನಸಾಮಾನ್ಯರಿಗೆ ಹೊರಯಾಗಬಾರದೆಂಬ ಕಾರಣಕ್ಕಾಗಿ ನಾನು ಇದಕ್ಕೆ ಅನುಮತಿ ನೀಡಿರಲಿಲ್ಲ. ಬಜೆಟ್ ಮಂಡನೆಗೂ ಮುನ್ನವೇ ಬಸ್ ದರ ಹೆಚ್ಚಳ ಮಾಡಿರುವುದನ್ನು ಗಮನಿಸಿದರೆ, ಈ ಬಾರಿ ಬಿಜೆಪಿ ಸರ್ಕಾರ ಅಯವ್ಯಯದಲ್ಲಿ ಬೆಲೆ ಏರಿಕೆ ಉಡುಗೊರೆ ನೀಡುವ ಮುನ್ಸೂಚನೆ ನೀಡಿದೆ'' ಎಂದು ಕುಮಾರಸ್ವಾಮಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯ ಸಾರಿಗೆ ಸಂಸ್ಥೆಗಳ ಬಸ್‌ ಪ್ರಯಾಣ ದರವನ್ನು ಶೇ.12ರಷ್ಟು ಹೆಚ್ಚಳ ಮಾಡಲಾಗಿದೆ. ಮಂಗಳವಾರ ಮಧ್ಯರಾತ್ರಿಯಿಂದಲೇ ದರ ಪರಿಷ್ಕರಣೆ ಜಾರಿಗೆ ಬಂದಿದೆ.

ಬಸ್‌ ಟಿಕೆಟ್‌ ದರ ಏರಿಕೆ: ಬೆಂಗಳೂರಿಂದ ಶಿವಮೊಗ್ಗಕ್ಕೆ 32 ರೂ., ಮಡಿಕೆರಿಗೆ 36 ರೂ., ಹಾಸನಕ್ಕೆ 20 ರೂ. ಏರಿಕೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ