ಆ್ಯಪ್ನಗರ

ಆದಾಯ ಹೆಚ್ಚಳಕ್ಕೆ ಕೆಎಸ್ಸಾರ್ಟಿಸಿಯಿಂದ ವಾಣಿಜ್ಯ ಸಂಕೀರ್ಣ, ಸೌರ ವಿದ್ಯುತ್‌ ಘಟಕದ ಚಿಂತನೆ

ಕೆಎಸ್‌ಆರ್‌ಟಿಸಿ ಸಂಸ್ಥೆಯ ಆದಾಯ ಹೆಚ್ಚಿಸಲು ನಿಲ್ದಾಣಗಳ ಆವರಣದಲ್ಲಿ ವಾಣಿಜ್ಯ ಸಂಕೀರ್ಣ ಹಾಗೂ ಘಟಕಗಳಲ್ಲಿ 500 ಮೆಗಾವ್ಯಾಟ್‌ ಸೌರ ವಿದ್ಯುತ್‌ ಉತ್ಪಾದನೆಗೆ ಚಿಂತನೆ ನಡೆಸಲಾಗಿದೆ ಎಂದು ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಹೇಳಿದರು.

Vijaya Karnataka 3 Sep 2018, 8:06 am
ಬೆಂಗಳೂರು: ಕೆಎಸ್‌ಆರ್‌ಟಿಸಿ ಸಂಸ್ಥೆಯ ಆದಾಯ ಹೆಚ್ಚಿಸಲು ನಿಲ್ದಾಣಗಳ ಆವರಣದಲ್ಲಿ ವಾಣಿಜ್ಯ ಸಂಕೀರ್ಣ ಹಾಗೂ ಘಟಕಗಳಲ್ಲಿ 500 ಮೆಗಾವ್ಯಾಟ್‌ ಸೌರ ವಿದ್ಯುತ್‌ ಉತ್ಪಾದನೆಗೆ ಚಿಂತನೆ ನಡೆಸಲಾಗಿದೆ ಎಂದು ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಹೇಳಿದರು.
Vijaya Karnataka Web dc tammanna


ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಪತ್ತಿನ ಸಹಕಾರ ಸಂಘದ ವತಿಯಿಂದ ಆಯೋಜಿಸಿದ್ದ 2017-18ನೇ ಸಾಲಿನ ವಾರ್ಷಿಕ ಸಭೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಿ ಮಾತನಾಡಿ,''ರಾಜ್ಯದಲ್ಲಿ ಅತೀ ಹೆಚ್ಚು ಉದ್ಯೋಗ ಅವಕಾಶ ಕಲ್ಪಿಸುವ ಏಕೈಕ ಸಂಸ್ಥೆ ಸಾರಿಗೆ ಸಂಸ್ಥೆ ಆಗಿದೆ. ಹೆಚ್ಚಾಗಿ ಗ್ರಾಮೀಣ ಭಾಗದ ಕನ್ನಡಿಗರೇ ಉದ್ಯೋಗದಲ್ಲಿದ್ದಾರೆ,''ಎಂದು ತಿಳಿಸಿದರು.

''ಭ್ರಷ್ಟಾಚಾರಕ್ಕೆ ಅವಕಾಶ ನೀಡಿದರೆ ಸಂಸ್ಥೆಗೆ ನಷ್ಟವಾಗುತ್ತದೆ. ಆಗ ಸಂಸ್ಥೆಯನ್ನು ಖಾಸಗೀಕರಣಗೊಳಿಸುವ ನಿರ್ಧಾರಗಳು ಬರಬಹುದು,''ಎಂದು ಎಚ್ಚರಿಕೆ ನೀಡಿದರು.

ಇದೇ ವೇಳೆ ಕೊಡಗಿನ ಸಂತ್ರಸ್ತರಿಗೆ ನೌಕರರ ಪತ್ತಿನ ಸಹಕಾರ ಸಂಘವು ಒಂದು ದಿನದ ವೇತನ 17, 97, 507 ರೂ. ಸಂಗ್ರಹಿಸಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ವಿತರಿಸಿದರು.

ಕಾರ್ಯಕ್ರಮದಲ್ಲಿ 2017-18ನೇ ಸಾಲಿನ ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ, ಡಿಪ್ಲೋಮಾ ಮತ್ತು ಸ್ನಾತಕೋತ್ತರ ಪದವಿಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.

ಶಾಸಕಿ ಸೌಮ್ಯ ರೆಡ್ಡಿ, ಕೆಎಸ್‌ಆರ್‌ಟಿಸಿ ಎಂಡಿ ಎಸ್‌.ಆರ್‌. ಉಮಾಶಂಕರ್‌, ಎಐಟಿಯುಸಿ ಅಧ್ಯಕ್ಷ ಅನಂತ್‌ ಸುಬ್ಬರಾವ್‌, ಸಾರಿಗೆ ನೌಕರರ ಮಹಾಮಂಡಳದ ಅಧ್ಯಕ್ಷ ಪ್ರೊ.ಕೆ.ಎಸ್‌.ಶರ್ಮಾ, ಸಂಘದ ಅಧ್ಯಕ್ಷ ಮಂಜುನಾಥ್‌ ಮೊದಲಾದವರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ