ಆ್ಯಪ್ನಗರ

ಸಿದ್ದರಾಮಯ್ಯನವರಿಗೆ ಕುಮಾರಸ್ವಾಮಿ ''ಯಾರು'' ಪ್ರಶ್ನೆಗಳ ಸವಾಲು

ಮತ್ತೆ ಜೆಡಿಎಸ್ ಜತೆ ಸೇರಲ್ಲ ಎಂದಿರುವ ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ನಿರ್ಗಮಿತ ಮುಖ್ಯಮಂತ್ರಿ ಕುಮಾರಸ್ವಾಮಿ ಭರ್ಜರಿ ತಿರುಗೇಟು ನೀಡಿದ್ದಾರೆ..

Vijaya Karnataka 25 Oct 2019, 7:46 am
ಬೆಂಗಳೂರು: ಮಹಾರಾಷ್ಟ್ರ ಮತ್ತು ಹರಿಯಾಣ ರಾಜ್ಯಗಳ ಚುನಾವಣೆ ಫಲಿತಾಂಶ ಬೆನ್ನಲ್ಲೇ ರಾಜ್ಯದಲ್ಲಿಕಾಂಗ್ರೆಸ್‌ನ ಸಿದ್ದರಾಮಯ್ಯ ಮತ್ತು ಜೆಡಿಎಸ್‌ನ ಎಚ್‌.ಡಿ.ಕುಮಾರಸ್ವಾಮಿ ನಡುವಿನ ಮಾತಿನ ಸಮರ ತೀವ್ರಗೊಂಡಿದೆ.
Vijaya Karnataka Web KumaraSwamy- Siddu



''ಬೈ ಎಲೆಕ್ಷನ್‌ನಲ್ಲಿ ಕಾಂಗ್ರೆಸ್‌ 15 ಸ್ಥಾನ ಗೆದ್ದರೆ ಬಿಎಸ್‌ವೈ ರಾಜೀನಾಮೆ ನೀಡಬೇಕು. ನಂತರ ನೇರವಾಗಿ ಚುನಾವಣೆಗೆ ಹೋಗುತ್ತೇವೆ. ಜೆಡಿಎಸ್‌ ಜೊತೆ ಸೇರಲ್ಲ. ಅವರ ಜೊತೆ ಸೇರಿ ಅನುಭವಿಸಿದ್ದು ಸಾಕು ಎಂದಿದ್ದಾರೆ ಸಿದ್ದರಾಮಯ್ಯ. ಸಿದ್ದರಾಮಯ್ಯನವರೇ, ಯಾರ ಸಹವಾಸದಿಂದ ಯಾರು ಕೆಟ್ಟರು? ಯಾರು ಯಾರಿಗೆ ಕೇಡು ಬಗೆದರು ಎಂದು ಆತ್ಮವಂಚನೆ ಇಲ್ಲದೇ ಹೇಳುವಿರಾ?'' ಎಂದು ಕುಮಾರಸ್ವಾಮಿ ಟ್ವಿಟರ್‌ನಲ್ಲಿಕುಟುಕಿದ್ದಾರೆ. ''ನಮ್ಮ ಸಹವಾಸವನ್ನು ಮಾಡಿ ಎಂದು ಸಿದ್ದರಾಮಯ್ಯ ಅವರನ್ನು ಬೇಡಿದ್ದು ಯಾರು? ಅವರ ಮನೆ ಬಾಗಿಲಿಗೆ ಹೋಗಿದ್ದು ಯಾರು? ಸಹಕಾರ(?) ಕೊಟ್ಟವರು ಯಾರು? ಪ್ರಕೃತಿ ಚಿಕಿತ್ಸೆ ಕೂತು ಕತ್ತಿ ಮಸೆದಿದ್ದು ಯಾರು? ದಿನಕ್ಕೊಬ್ಬರಂತೆ ನನ್ನನ್ನು ಟೀಕಿಸಿದ್ದು ಯಾರು?'' ಎಂದು ಎಚ್‌ಡಿಕೆ ನೇರವಾಗಿ ಪ್ರಶ್ನಿಸಿದ್ದಾರೆ.


ಲೋಕಸಭೆ ಚುನಾವಣೆಯಲ್ಲಿ ನೀವು ಕೊಟ್ಟ ಸಹಕಾರ ಎಂಥದ್ದು? ಸರಕಾರ ಬೀಳಿಸಲು ಶಾಸಕರ ಎದೆ ಬಗೆದರೆ ಅಲ್ಲಿಕಾಣುತ್ತಿದ್ದವರು ಯಾರು? ಈ 'ಯಾರು' ಎಂಬ ಪ್ರಶ್ನೆಗೆ ನೀವು ಪ್ರಾಮಾಣಿಕವಾಗಿ ಉತ್ತರಿಸುವಿರಾ? ನೀವು ಕೊಟ್ಟ ಸಹಕಾರಕ್ಕೆ, ಬೆಂಬಲಕ್ಕೆ ನಾನು ಚಿರಋುಣಿ. ಈ ಜನ್ಮದಲ್ಲಿನಾನು ಮರೆಯಲಾರೆ. ನಿಮ್ಮ ಸಹವಾಸ ನಮಗೂ ಬೇಡ ಎಂದು ಟ್ವೀಟ್‌ ಮಾಡಿದ್ದಾರೆ ಕುಮಾರಸ್ವಾಮಿ.


ಏತನ್ಮಧ್ಯೆ, ''ಏಪ್ರಿಲ್‌ನಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೇರಲಿದೆ,'' ಎಂಬ ಸಿದ್ದರಾಮಯ್ಯ ಹೇಳಿಕೆಗೆ ಸುದ್ದಿಗೋಷ್ಠಿ ನಡೆಸಿದ್ದ ಸಂದರ್ಭದಲ್ಲೂ ಪ್ರತಿ ಕ್ರಿಯಿಸಿದ್ದ ಕುಮಾರಸ್ವಾಮಿ, ''ತಾನು ಎಲ್ಲರಗಿಂತ ದೊಡ್ಡವರು ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯನವರ ಮನಸ್ಥಿತಿಯ ಹಾಗೇ ಈಗಿನ ಪರಿಸ್ಥಿತಿ ಇಲ್ಲ. ಚುನಾವಣೆ ಎದುರಾಗುವುದು ಸಿದ್ದರಾಮಯ್ಯ ಹೇಳಿದಷ್ಟೂ ಸುಲಭವೂ ಅಲ್ಲ'' ಎಂದು ವ್ಯಂಗ್ಯವಾಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ