ಆ್ಯಪ್ನಗರ

ಕುರುಬ ಸಮುದಾಯವನ್ನು ಎಸ್‌ಟಿಗೆ ಸೇರಿಸಲು ಬಿಎಸ್‌ವೈಗೆ ಮಠಾಧೀಶರ ನಿಯೋಗ ಮನವಿ

ಸಮುದಾಯದ ಬಹುಕಾಲದ ಬೇಡಿಕೆಯಂತೆ ಎಸ್‌.ಟಿ.ಗೆ ಸೇರ್ಪಡೆಗೊಳಿಸಲು ಕೇಂದ್ರಕ್ಕೆ ಶಿಫಾರಸು ಮಾಡಬೇಕು, ಕುರುಬ ಅಭಿವೃದ್ಧಿ ಪ್ರಾಧಿಕಾರ ರಚಿಸಿ 500 ಕೋಟಿ ರೂ. ಅನುದಾನ ನೀಡಬೇಕು ಹಾಗೂ ಈ ಸರಕಾರ ರಚನೆಗೆ ಕಾರಣಕರ್ತರಾದ ಕುರುಬ ಸಮಾಜದ ಮೂವರಿಗೆ ಸಚಿವ ಸ್ಥಾನ ನೀಡಬೇಕೆಂಬ ಮೂರು ಬೇಡಿಕೆಗಳನ್ನು ಈ ಸಮಾಜದ ಮಠಾಧೀಶರು ಹಾಗೂ ನಾಯಕರು ಸರಕಾರದ ಮುಂದಿಟ್ಟಿದ್ದಾರೆ.

Vijaya Karnataka Web 28 Nov 2020, 7:40 am
ಬೆಂಗಳೂರು: ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡ (ಎಸ್‌ಟಿ) ಕ್ಕೆ ಸೇರ್ಪಡೆಗೊಳಿಸುವುದು ಸೇರಿದಂತೆ ಪ್ರಮುಖ ಮೂರು ಬೇಡಿಕೆಗಳನ್ನು ಈ ಸಮಾಜದ ಮಠಾಧೀಶರು ಹಾಗೂ ನಾಯಕರು ಸರಕಾರದ ಮುಂದಿಟ್ಟಿದ್ದಾರೆ.
Vijaya Karnataka Web kuruba community


‘ನಮ್ಮನ್ನು ಯಾವಾಗ ಮಂತ್ರಿ ಮಾಡ್ತೀರಿ?’; ಸಿಎಂ ಮುಂದೆ ಮೂವರು ವಲಸಿಗರ ಅಸಮಾಧಾನ..!

ಕುರುಬರ ಎಸ್‌.ಟಿ. ಹೋರಾಟ ಸಮಿತಿಯ ನೇತೃತ್ವದಲ್ಲಿ ಸಿಎಂ ಯಡಿಯೂರಪ್ಪ ಅವರನ್ನು ಶುಕ್ರವಾರ ಭೇಟಿಯಾದ ನಿಯೋಗವು ಈ ಸಂಬಂಧ ಮನವಿ ಸಲ್ಲಿಸಿದೆ. ಸಮುದಾಯದ ಬಹುಕಾಲದ ಬೇಡಿಕೆಯಂತೆ ಎಸ್‌.ಟಿ.ಗೆ ಸೇರ್ಪಡೆಗೊಳಿಸಲು ಕೇಂದ್ರಕ್ಕೆ ಶಿಫಾರಸು ಮಾಡಬೇಕು, ಕುರುಬ ಅಭಿವೃದ್ಧಿ ಪ್ರಾಧಿಕಾರ ರಚಿಸಿ 500 ಕೋಟಿ ರೂ. ಅನುದಾನ ನೀಡಬೇಕು ಹಾಗೂ ಈ ಸರಕಾರ ರಚನೆಗೆ ಕಾರಣಕರ್ತರಾದ ಕುರುಬ ಸಮಾಜದ ಮೂವರಿಗೆ ಸಚಿವ ಸ್ಥಾನ ನೀಡಬೇಕೆಂದು ಕೋರಲಾಗಿದೆ.

ಕಚೇರಿ ಪೂಜೆ ನೆಪದಲ್ಲಿ ರಾಜ್ಯ ನಾಯಕರ ಮೀಟಿಂಗ್‌; ಬಿಎಸ್‌ವೈಗೆ ಬ್ರೇಕ್‌ ಹಾಕಲು ಬಿಜೆಪಿಯಲ್ಲೇ ಸೈಲೆಂಟ್‌ ‘ಸ್ಕೆಚ್‌’?

ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ, ಹೊಸದುರ್ಗದ ಕನಕಗುರುಪೀಠ ಶಾಖಾಮಠದ ಈಶ್ವರಾನಂದಪುರಿ ಸ್ವಾಮೀಜಿ, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು, ಮಾಜಿ ಸಚಿವರಾದ ಎಂ.ಟಿ.ಬಿ.ನಾಗರಾಜ್‌, ಎಚ್‌.ವಿಶ್ವನಾಥ್‌, ಆರ್‌.ಶಂಕರ್‌, ಎಚ್‌.ಎಂ.ರೇವಣ್ಣ, ಹೋರಾಟ ಸಮಿತಿ ಅಧ್ಯಕ್ಷ ಕೆ.ವಿರೂಪಾಕ್ಷಪ್ಪ, ಕಾರ್ಯಾಧ್ಯಕ್ಷ ಕೆ.ಮುಕುಡಪ್ಪ ಮತ್ತಿತರರು ನಿಯೋಗದಲ್ಲಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ