ಆ್ಯಪ್ನಗರ

ಕೆರೆ ಒತ್ತುವರಿ, ಒಂದು ವರ್ಷ ಜೈಲು ಶಿಕ್ಷೆ

ದಾವಣಗೆರೆ ಜಿಲ್ಲೆ ಜಗಳೂರು ತಾಲೂಕು ಜಮ್ಮಾಪುರ ಗ್ರಾಮದಲ್ಲಿನ ಒಂದು ಎಕರೆ ಕೆರೆ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದ ಲಕ್ಷ್ಮಣಪ್ಪ (55) ಎಂಬಾತನಿಗೆ ...

Vijaya Karnataka 27 Mar 2019, 5:00 am
ಬೆಂಗಳೂರು: ದಾವಣಗೆರೆ ಜಿಲ್ಲೆ ಜಗಳೂರು ತಾಲೂಕು ಜಮ್ಮಾಪುರ ಗ್ರಾಮದಲ್ಲಿನ ಒಂದು ಎಕರೆ ಕೆರೆ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದ ಲಕ್ಷ್ಮಣಪ್ಪ (55) ಎಂಬಾತನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ಕರ್ನಾಟಕ ಭೂಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
Vijaya Karnataka Web hamer


ಜಮ್ಮಾಪುರ ಗ್ರಾಮದ ಸರ್ವೇ ನಂಬರ್‌ 146ರ ರಲ್ಲಿನ ಸರಕಾರಿ ಕೆರೆ ಜಮೀನು ಒತ್ತುವರಿ ಮಾಡಿರುವ ಕುರಿತು ಜಗಳೂರು ತಹಸೀಲ್ದಾರ್‌, ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಲಕ್ಷ್ಮಣಪ್ಪ ಅವರಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ನ್ಯಾಯಾಧೀಶ ಎಚ್‌.ಎನ್‌ ನಾರಾಯಣ ಹಾಗೂ ನ್ಯಾಯಾಂಗ ಸದಸ್ಯರಾದ ಬಾಲಕೃಷ್ಣ ಮಂಗಳವಾರ ಆದೇಶ ನೀಡಿದ್ದಾರೆ.

ಒತ್ತುವರಿಯಾಗಿದ್ದ ಜಮೀನು ಸರಕಾರದ ವಶಕ್ಕೆ ತೆಗೆದುಕೊಳ್ಳುವಂತೆ ಆದೇಶದಲ್ಲಿ ತಿಳಿಸಲಾಗಿದೆ ಎಂದು ಸರಕಾರಿ ಅಭಿಯೋಜಕ ಬಿ.ಎಸ್‌ ಪಾಟೀಲ್‌ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ