ಆ್ಯಪ್ನಗರ

ಭೂಹಗರಣ ವಿಚಾರಣೆ ಎದುರಿಸಿ: ಕುಮಾರಸ್ವಾಮಿ, ಪತ್ನಿಗೆ ಸುಪ್ರೀಂ ಕೋರ್ಟ್ ಸೂಚನೆ

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಅವರ ಪತ್ನಿ ವಿರುದ್ಧದ ಕ್ರಿಮಿನಲ್ ವಿಚಾರಣೆಯನ್ನು ರದ್ದುಪಡಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆಯಾಜ್ಞೆ ನೀಡಿದೆ.

ಏಜೆನ್ಸೀಸ್ 27 Sep 2016, 4:22 pm
ಹೊಸದಿಲ್ಲಿ: ಅಕ್ರಮ ಜಮೀನು ಹಂಚಿಕೆ ಮಾಡಿ, ಅದರಲ್ಲಿ ಗಣಿಗಾರಿಕೆ ನಡೆಸಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಅವರ ಪತ್ನಿ ವಿರುದ್ಧದ ಕ್ರಿಮಿನಲ್ ವಿಚಾರಣೆಯನ್ನು ರದ್ದುಪಡಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆಯಾಜ್ಞೆ ನೀಡಿದೆ.
Vijaya Karnataka Web land alottment case supreme court quashes high court order asks hd kumaraswamy to face trial
ಭೂಹಗರಣ ವಿಚಾರಣೆ ಎದುರಿಸಿ: ಕುಮಾರಸ್ವಾಮಿ, ಪತ್ನಿಗೆ ಸುಪ್ರೀಂ ಕೋರ್ಟ್ ಸೂಚನೆ


ಇದರೊಂದಿಗೆ, 2011ರಲ್ಲಿ ಹೈಕೋರ್ಟ್ ಆದೇಶಾನುಸಾರ ನಿರಾಳರಾಗಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ಪತ್ನಿ ವಿಚಾರಣೆ ಎದುರಿಸಲೇಬೇಕಾಗಿದೆ.

ಅರ್ಜಿದಾರ ವಿನೋದ್ ಕುಮಾರ್ ಎಂಬವರು ಸಲ್ಲಿಸಿದ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ವಿಭಾಗೀಯ ಪೀಠವು ಈ ಆದೇಶ ನೀಡಿದೆ.

ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಗೃಹ ನಿರ್ಮಾಣ ಸಹಕಾರ ಸಂಘವೊಂದಕ್ಕೆ ಜಮೀನು ವಿತರಿಸಲಾಗಿತ್ತು. ಈ ಪ್ರಕರಣದಲ್ಲಿ ಕುಮಾರಸ್ವಾಮಿ ಅವರ ಪತ್ನಿಯೂ ಫಲಾನುಭವಿಯಾಗಿದ್ದರು.

ಈ ಕಾರಣಕ್ಕೆ ಕುಮಾರಸ್ವಾಮಿ ಪತ್ನಿಯೂ ವಿಚಾರಣೆ ಎದುರಿಸಬೇಕು ಎಂದು ನ್ಯಾಯಾಲಯವು ಆದೇಶಿಸಿದೆ. 80 ಎಕರೆ ಭೂಮಿಯನ್ನು ವಿತರಿಸಿದ್ದಲ್ಲದೆ, ಅದರಿಂದ ಒಂದು ಲಕ್ಷ ಟನ್ ಕಬ್ಬಿಣದ ಅದಿರು ಗಣಿಗಾರಿಕೆಗೆ ಕಂಪನಿಯೊಂದಕ್ಕೆ ಅವಕಾಶ ಮಾಡಿಕೊಡಲಾಗಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ