ಆ್ಯಪ್ನಗರ

ನಾಳೆ ರಾಜ್ಯಕ್ಕೆ ಹಿಂಗಾರು ಆಗಮನ

ಹತ್ತು ದಿನ ಮೊದಲೇ ಹಿಂಗಾರು ರಾಜ್ಯ ಪ್ರವೇಶಿಸುವ ನಿರೀಕ್ಷೆ .

Vijaya Karnataka 7 Oct 2018, 7:31 am
ಬೆಂಗಳೂರು: ರಾಜ್ಯದಿಂದ ನೈಋುತ್ಯ ಮುಂಗಾರು ಹಿಂದೆ ಸರಿಯುತ್ತಿದೆ. ಅ.8 ಅಥವಾ ನಂತರದ ದಿನಗಳಲ್ಲಿ ಕರ್ನಾಟಕ, ತಮಿಳುನಾಡು, ಕೇರಳಕ್ಕೆ ಹಿಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ವಾಡಿಕೆಯಂತೆ ಪ್ರತಿ ವರ್ಷ ಅ.20 ರಂದು ಅಥವಾ ನಂತರದ ದಿನಗಳಲ್ಲಿ ಹಿಂಗಾರು ಪ್ರವೇಶವಾಗುತ್ತದೆ. ಈ ವರ್ಷ ವಾಡಿಕೆಗೆ ಮುನ್ನವೇ ಹಿಂಗಾರು ಪ್ರವೇಶಿಸುವ ಸಾಧ್ಯತೆ ಕಂಡುಬಂದಿದೆ. ಅ.8 ಕ್ಕೆ ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ಸೃಷ್ಟಿಯಾಗಲಿದೆ. ಇದು ಹಿಂಗಾರು ಆಗಮನಕ್ಕೆ ಪೂರಕ ವಾತಾವರಣ ನಿರ್ಮಿಸಲಿದೆ. ಹಿಂಗಾರು ಸಾಮಾನ್ಯವಾಗಿ ದಕ್ಷಿಣ ಒಳನಾಡಿನಲ್ಲಿ ಹೆಚ್ಚು ಮಳೆ ಸುರಿಸುತ್ತದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ, ಕೋಲಾರ, ಚಾಮರಾಜನಗರ, ಕೊಡಗು, ಮಂಡ್ಯ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ.
Vijaya Karnataka Web Rain


ಅಕ್ಟೋಬರ್‌ನಿಂದ ಡಿಸೆಂಬರ್‌ವರೆಗೆ ಹಿಂಗಾರು ಅವಧಿಯಲ್ಲಿ 188 ಮಿ.ಮೀ. ಮಳೆ ಸುರಿಯುತ್ತದೆ. ಈ ವರ್ಷ ಹಿಂಗಾರಿನಲ್ಲಿ ವಾಡಿಕೆಯಂತೆ ಮಳೆಯಾಗಲಿದೆ. ಕಳೆದ ವರ್ಷ ವಾಡಿಕೆಯಂತೆಯೇ ಮಳೆಯಾಗಿತ್ತು. ಅದಕ್ಕಿಂತ ಹಿಂದಿನ ವರ್ಷದಲ್ಲಿ ಮಳೆ ಕೊರತೆ ಉಂಟಾಗಿತ್ತು.

ಕರಾವಳಿಯಲ್ಲಿ ಮಳೆ


ಅರಬ್ಬಿ ಸಮುದ್ರದಲ್ಲಾಗಿರುವ ವಾಯುಭಾರ ಕುಸಿತದಿಂದ ಕರಾವಳಿಯಲ್ಲಿ ಉತ್ತಮ ಮಳೆಯಾಗಿದೆ. ಉಡುಪಿಯ ಕೊಲ್ಲೂರಿನಲ್ಲಿ 80 ಮಿ.ಮೀ., ಗೇರುಸೊಪ್ಪ, ಲಿಂಗನಮಕ್ಕಿಯಲ್ಲಿ 70 ಮಿ.ಮೀ., ಬಂಟ್ವಾಳ, ಹೊನ್ನಾವರದಲ್ಲಿ 50 ಮಿ.ಮೀ. ಮಳೆ ಬಂದಿದೆ. ಸಮುದ್ರದಲ್ಲಿ ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿದ್ದು, 60 ಕಿ.ಮೀ. ವೇಗ ಪಡೆದುಕೊಳ್ಳಬಹುದು. ಆದ್ದರಿಂದ ಮೀನುಗಾರರು ಸದ್ಯಕ್ಕೆ ಸಮುದ್ರಕ್ಕಿಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ