ಆ್ಯಪ್ನಗರ

ನಾಯಕರ ಅಹಂಭಾವ ಕಾಂಗ್ರೆಸ್‌ ದುಸ್ಥಿತಿಗೆ ಕಾರಣ - ಕಾಗೋಡು ತಿಮ್ಮಪ್ಪ

"ಹೈಕಮಾಂಡ್‌ ಅಧಿಕಾರ ಇದ್ದಾಗ ಒಂದು ರೀತಿ, ಅಧಿಕಾರ ಇಲ್ಲದಾಗ ಮತ್ತೊಂದು ರೀತಿ ನಡೆದುಕೊಳ್ಳುತ್ತೆ. ಅಧಿಕಾರ ಇರುವಾಗ ಕಾಣುವ ಉತ್ಸಾಹ ನಂತರ ಕಾಣುವುದಿಲ್ಲ," ಎಂದು ವರಿಷ್ಠರ ಬಗ್ಗೆಯೂ ಕಾಗೋಡು ತಿಮ್ಮಪ್ಪ ಬೇಸರ ವ್ಯಕ್ತಪಡಿಸಿದರು.

Vijaya Karnataka 29 Jan 2020, 8:37 pm
ಬೆಂಗಳೂರು: ಪಕ್ಷದ ನಾಯಕರಲ್ಲಿಅಹಂ ಪ್ರವೃತ್ತಿ ಬೆಳೆದು, ಹಿರಿಯರನ್ನು ಕಡೆಗಣಿಸಿರುವುದೇ ಕಾಂಗ್ರೆಸ್‌ನ ಈಗಿನ ಸ್ಥಿತಿಗೆ ಕಾರಣ ಎಂದು ಹಿರಿಯ ಕಾಂಗ್ರೆಸಿಗ ಹಾಗೂ ಮಾಜಿ ಸ್ಪೀಕರ್‌ ಕಾಗೋಡು ತಿಮ್ಮಪ್ಪ ನೇರವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Vijaya Karnataka Web Kagodu Thimmappa


ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, "ಹೈಕಮಾಂಡ್‌ ಅಧಿಕಾರ ಇದ್ದಾಗ ಒಂದು ರೀತಿ, ಅಧಿಕಾರ ಇಲ್ಲದಾಗ ಮತ್ತೊಂದು ರೀತಿ ನಡೆದುಕೊಳ್ಳುತ್ತೆ. ಅಧಿಕಾರ ಇರುವಾಗ ಕಾಣುವ ಉತ್ಸಾಹ ನಂತರ ಕಾಣುವುದಿಲ್ಲ," ಎಂದು ವರಿಷ್ಠರ ಬಗ್ಗೆಯೂ ಬೇಸರ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಬಣ ರಾಜಕೀಯ ಹೆಚ್ಚಿದೆ ಎಂಬ ಕುರಿತು ಪ್ರತಿಕ್ರಿಯಿಸಿ "ಸಿದ್ದರಾಮಯ್ಯ ಅವರೇನೂ ದಿಢೀರ್‌ ಬೆಳೆದು ನಿಂತವರಲ್ಲ, ಎಲ್ಲರಿಂದಾಗಿ ಅವರು ಅಧಿಕಾರ ಪಡೆದುಕೊಂಡರು. ಪರಮೇಶ್ವರ್‌ ಕೂಡ ಸಂಸ್ಥೆಯೊಂದನ್ನು ಕಟ್ಟಿ ಆ ಮೂಲಕ ರಾಜಕೀಯಕ್ಕೆ ಬಂದವರು. ಅಹಂ ಭಾವ ತೊರೆದು, ಹಿರಿಯರೆಲ್ಲರ ಸಲಹೆಯೊಂದಿಗೆ ಪಕ್ಷ ಕಟ್ಟುವ ಕೆಲಸ ಆಗಬೇಕು. ಪದೇ ಪದೇ ದಿಲ್ಲಿ ವರಿಷ್ಠರನ್ನು ಎಡತಾಕುವ ಬದಲು ರಾಜ್ಯ ನಾಯಕರೇ ಗೊಂದಲ ಬಗೆಹರಿಸಿಕೊಂಡು ಮುಂದೆ ಸಾಗಬೇಕು. ಪಕ್ಷ ಸಂಘಟನೆ ಚುರುಕುಗೊಳಿಸುವ ಕೆಲಸ ಆಗಬೇಕು," ಎಂದರು.

"ರಾಜ್ಯ ಬಿಜೆಪಿ ಸರಕಾರ ಸರಿದಾರಿಯಲ್ಲಿ ಸಾಗುತ್ತಿಲ್ಲ. ಪ್ರವಾಹ ಪರಿಸ್ಥಿತಿಯಿಂದ ನೊಂದು ಹೋಗಿರುವ ಜನರಿಗೆ ನೆರವಾಗುವ ಕೆಲಸ ಇನ್ನೂ ಆಗಿಲ್ಲ. ಹಣ ಇಲ್ಲ ಎಂದು ಕೂರುವುದು ಮತ್ತು ಸಬೂಬು ಹೇಳುವುದು ಸರಕಾರಕ್ಕೆ ಶೋಭೆ ತರಲ್ಲ. ಹೇಗಾದರೂ ಸಂಪನ್ಮೂಲ ಹೊಂದಿಸಿಕೊಂಡು ಜನರ ಸಮಸ್ಯೆ ಬಗೆಹರಿಸುವ ಕೆಲಸ ಆಗಬೇಕು," ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ