ಆ್ಯಪ್ನಗರ

‘ನಾಯಕತ್ವ ಬದಲಾವಣೆ ಸುದ್ದಿ ಸತ್ಯಕ್ಕೆ ದೂರವಾದ ವಿಚಾರ’; ಕ್ಯಾ.ಗಣೇಶ್ ಕಾರ್ಣಿಕ್ ಸ್ಪಷ್ಟನೆ

ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಬಿಜೆಪಿ ವಕ್ತಾರ ಕ್ಯಾ.ಗಣೇಶ್ ಕಾರ್ಣಿಕ್ ಅವರು, ನಾಯಕತ್ವ ಬದಲಾವಣೆ ಸುದ್ದಿ ಸತ್ಯಕ್ಕೆ ದೂರವಾಗಿದೆ. ಇಂತಹ ಯಾವುದೇ ಬೆಳವಣಿಗೆ ಪಕ್ಷದಲ್ಲಿ ನಡೆದಿಲ್ಲ. ಹೀಗಿದ್ದರೂ ಕೆಲವು ಮಾಧ್ಯಮಗಳಲ್ಲಿ ಪದೇ ಪದೇ ಸುದ್ದಿ ಪ್ರಸಾರ ಆಗುತ್ತಿದೆ. ಬಿಜೆಪಿ ಈ ವರದಿಗಳನ್ನು ಖಡಾಖಂಡಿತವಾಗಿ ಅಲ್ಲಗಳೆಯುತ್ತದೆ ಎಂದು ಹೇಳಿದ್ದಾರೆ.

Vijaya Karnataka Web 22 Sep 2020, 3:58 pm
ಬೆಂಗಳೂರು: ಕಳೆದ ಕೆಲ ವಾರಗಳಿಂದ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಆಗುತ್ತೆ, ಸಿಎಂ ಬಿಎಸ್‌ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ ಬೇರೆಯವರಿಗೆ ಸಿಎಂ ಸ್ಥಾನ ನೀಡಲಾಗುತ್ತೆ ಅನ್ನೋ ಸುದ್ದಿಗಳು ಹರಿದಾಡಿದ್ದವು.
Vijaya Karnataka Web Ganesh karnik


ಈ ವಿಚಾರವಾಗಿ ರಾಜ್ಯ ಮತ್ತು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿ ಕೂಡ ಪ್ರಸಾರ ಆಗಿದ್ದವು. ಮುಖ್ಯಮಂತ್ರಿ ಸ್ಥಾನ ಬದಲಾವಣೆ ವಿಚಾರ ಪ್ರಸ್ತಾಪ ಆಗುತ್ತಿದ್ದಂತೆ ಸಿಎಂ ಬೆನ್ನಿಗೆ ನಿಂತಿದ್ದ ಅನೇಕರು ಈ ಪೂರ್ಣಾವಧಿಯಲ್ಲಿ ಬಿಎಸ್‌ವೈ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ. ಯಾವುದೇ ಕಾರಣಕ್ಕೂ ಸಿಎಂ ಸ್ಥಾನ ಬದಲಾವಣೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಕಂದಾಯ ಸಚಿವ ಆರ್ ಅಶೋಕ್, ಎಸ್‌ಟಿ ಸೋಮಶೇಖರ್ ಸೇರಿದಂತೆ ಅನೇಕರು ಬಿಎಸ್‌ವೈ ಅವರ ನಾಯಕತ್ವವೇ ಮುಂದುವರಿಯುತ್ತೆ ಎಂದು ಹೇಳಿದ್ದರು.

ಭೂ ಸುಧಾರಣೆ ತಿದ್ದುಪಡಿ, ಲೋಕಾಯುಕ್ತ ಸೇರಿದಂತೆ ಸದನದಲ್ಲಿ ಹಲವು ವಿಧೇಯಕಗಳ ಮಂಡನೆ

ಇದೀಗ ಈ ಎಲ್ಲಾ ಊಹಾಪೋಹಗಳಿಗೆ ಬಿಜೆಪಿ ವಕ್ತಾರ ಕ್ಯಾ.ಗಣೇಶ್ ಕಾರ್ಣಿಕ್ ತೆರೆ ಎಳೆದಿದ್ದಾರೆ. ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ನಾಯಕತ್ವ ಬದಲಾವಣೆ ಸುದ್ದಿ ಸತ್ಯಕ್ಕೆ ದೂರವಾಗಿದೆ. ಇಂತಹ ಯಾವುದೇ ಬೆಳವಣಿಗೆ ಪಕ್ಷದಲ್ಲಿ ನಡೆದಿಲ್ಲ. ಹೀಗಿದ್ದರೂ ಕೆಲವು ಮಾಧ್ಯಮಗಳಲ್ಲಿ ಪದೇ ಪದೇ ಸುದ್ದಿ ಪ್ರಸಾರ ಆಗುತ್ತಿದೆ. ಬಿಜೆಪಿ ಈ ವರದಿಗಳನ್ನು ಖಡಾಖಂಡಿತವಾಗಿ ಅಲ್ಲಗಳೆಯುತ್ತದೆ. ಈ ವರದಿಗಳು ನಿರಾಧಾರವಾಗಿದ್ದು, ಜನರನ್ನು ದಾರಿ ತಪ್ಪಿಸುವಂತಾಗಿದೆ ಎಂದು ಹೇಳಿದ್ದಾರೆ.

'ಸರ್ಕಾರ ಘೋಷಿಸಿದ ಸಹಾಯಧನ 10% ಜನರಿಗೂ ತಲುಪಿಲ್ಲ' ; ಸದನದಲ್ಲಿ ಡಿಕೆ ಶಿವಕುಮಾರ್ ಕಿಡಿ..!

ವಿಪಕ್ಷಗಳ ವಿರುದ್ಧ ಪ್ರಹ್ಲಾದ್ ಜೋಷಿ ಟ್ವೀಟ್:

ಇತ್ತ ಕೇಂದ್ರ ಸರ್ಕಾರಕ್ಕೆ ಸಂಖ್ಯೆಯ ಕೊರತೆ ಇದೆ ಎಂಬ ವಿಪಕ್ಷಗಳ ಆರೋಪಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕೇಂದ್ರದಲ್ಲಿ ಎನ್‌ಡಿಎ ಕೂಟದ ಶಕ್ತಿಯ ಕುರಿತು ನಂಬರ್‌ಗಳೇ ಮಾತಾಡುತ್ತವೆ. ಎನ್‌ಡಿಎ 109 ಮತ್ತು ಯುಪಿಎ 68 ಇತರೆ 16 ಸಂಖ್ಯಾಬಲವಿದೆ. ಅದಾಗ್ಯೂ ಸೆಪ್ಟೆಂಬರ್ 20ರಂದು ರಾಜ್ಯಸಭೆಯಲ್ಲಿ ವಿರೋಧ ಪಕ್ಷಗಳು ಸಂಖ್ಯಾಬಲದ ಕೊರತೆಯಿದೆ ಎಂದು ವಾದಿಸಿದೆ. ಇದು ಸತ್ಯಕ್ಕೆ ದೂರವಾದುದು ಅನ್ನೋದು ಬಹಿರಂಗವಾಗಿದೆ. ಅಲ್ಲದೇ ಆ ದಿನ ಯುಪಿಎ ಕೂಟದ 29 ಮತ್ತು ಇತರೆ ಪಕ್ಷದ 2 ಸದಸ್ಯರು ಗೈರಾಗಿದ್ದರು. ಇದು ರಾಜ್ಯಸಭೆಯ ಹಾಜರಾತಿಯ ದಾಖಲೆಯಲ್ಲಿದೆ ಎಂದು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ