ಆ್ಯಪ್ನಗರ

ಪರಿಷತ್‌ ಚುನಾವಣೆ: 7 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ, ಅವಿರೋಧ ಆಯ್ಕೆ ಖಚಿತ

ಪರಿಷತ್‌ನ 7 ಸ್ಥಾನಗಳಿಗೆ 7 ಅಭ್ಯರ್ಥಿಗಳು ಮಾತ್ರ ನಾಮಪತ್ರ ಸಲ್ಲಿಸಿರುವುದರಿಂದ ಅವಿರೋಧ ಆಯ್ಕೆ ಖಚಿತವಾಗಿದೆ. ನಾಮಪತ್ರ ಪರಿಶೀಲನೆ, ಹಿಂತೆಗೆದುಕೊಳ್ಳುವ ಪ್ರಕ್ರಿಯೆ ಮುಗಿದ ಬಳಿಕ ಅವಿರೋಧ ಆಯ್ಕೆ ಬಗ್ಗೆ ಪ್ರಕಟಣೆ ಹೊರಬೀಳಲಿದೆ.

Vijaya Karnataka 18 Jun 2020, 8:29 pm

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್‌ನ 7 ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಬಿಜೆಪಿಯ ಸುನೀಲ್‌ ವಲ್ಯಾಪುರೆ, ಪ್ರತಾಪ್‌ ಸಿಂಹ ನಾಯಕ್‌, ಎಂ.ಟಿ.ಬಿ. ನಾಗರಾಜ್‌, ಆರ್‌. ಶಂಕರ್‌, ಕಾಂಗ್ರೆಸ್‌ನ ಬಿ.ಕೆ. ಹರಿಪ್ರಸಾದ್‌, ನಜೀರ್‌ ಅಹ್ಮದ್‌ ಹಾಗೂ ಜೆಡಿಎಸ್‌ನಿಂದ ಇಂಚರ ಗೋವಿಂದರಾಜು ಅಭ್ಯರ್ಥಿಗಳಾಗಿ ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ.
Vijaya Karnataka Web Legislative council election


ಬಿಜೆಪಿಯ ಅಭ್ಯರ್ಥಿಗಳು ಡಿಸಿಎಂ ಗೋವಿಂದ ಕಾರಜೋಳ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ಪಕ್ಷದ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಹಾಗೂ ಸಚಿವರಾದ ಎಸ್‌.ಟಿ. ಸೋಮಶೇಖರ್‌, ಬೈರತಿ ಬಸವರಾಜು ಅವರೊಂದಿಗೆ ವಿಧಾನಸಭೆ ಕಾರ್ಯದರ್ಶಿ ಅವರಿಗೆ ನಾಮಪತ್ರ ಸಲ್ಲಿಸಿದರು.

ಮೇಲ್ಮನೆ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿಗಳು, ಎಂಟಿಬಿ ಮುಖದಲ್ಲಿ ಮೂಡಿದ ನಗು!

ಕಾಂಗ್ರೆಸ್‌ ಅಭ್ಯರ್ಥಿಗಳೊಂದಿಗೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಪಕ್ಷದ ಮುಖಂಡರಾದ ದಿನೇಶ್‌ ಗುಂಡೂರಾವ್‌, ರಾಮಲಿಂಗಾರೆಡ್ಡಿ ಇದ್ದರು. ಜೆಡಿಎಸ್‌ ಅಭ್ಯರ್ಥಿಯೊಂದಿಗೆ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಬಸವರಾಜ ಹೊರಟ್ಟಿ ಇದ್ದರು.

ಇದಕ್ಕೂ ಮೊದಲು ಬಿಜೆಪಿ ಅಭ್ಯರ್ಥಿಗಳು ಪಕ್ಷದ ಕಚೇರಿ ಜಗನ್ನಾಥ ಭವನಕ್ಕೆ ತೆರಳಿ ಪಕ್ಷದ ಅಧ್ಯಕ್ಷರಿಂದ ಬಿ-ಫಾರಂ ಸ್ವೀಕರಿಸಿದರು. ಕಾಂಗ್ರೆಸ್‌ ಕಚೇರಿಯಲ್ಲಿ ಪ್ರಮುಖರ ಸಭೆ ನಡೆಸಿ ಅಭ್ಯರ್ಥಿಗಳಿಗೆ ಬಿ-ಫಾರಂ ನೀಡಲಾಯಿತು.

ಮೇಲ್ಮನೆ ಚುನಾವಣೆ: ಬಿ.ಕೆ ಹರಿಪ್ರಸಾದ್‌, ನಝೀರ್‌ ಅಹಮ್ಮದ್ ನಾಮಪತ್ರ ಸಲ್ಲಿಕೆ

ಅವಿರೋಧ ಆಯ್ಕೆ ಖಚಿತಪರಿಷತ್‌ನ 7 ಸ್ಥಾನಗಳಿಗೆ 7 ಅಭ್ಯರ್ಥಿಗಳು ಮಾತ್ರ ನಾಮಪತ್ರ ಸಲ್ಲಿಸಿರುವುದರಿಂದ ಅವಿರೋಧ ಆಯ್ಕೆ ಖಚಿತ. ನಾಮಪತ್ರ ಪರಿಶೀಲನೆ ಕಾರ್ಯ ಶುಕ್ರವಾರ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಜೂನ್‌ 22 ಕಡೆಯ ದಿನವಾಗಿದೆ. ಈ ಪ್ರಕ್ರಿಯೆ ಬಳಿಕ ಅವಿರೋಧ ಆಯ್ಕೆ ಬಗ್ಗೆ ಪ್ರಕಟಣೆ ಹೊರಬೀಳಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ