ಆ್ಯಪ್ನಗರ

ಸರಕಾರ ತನ್ನ ಪ್ರತಿಷ್ಠೆ ಬದಿಗಿಟ್ಟು ಸಾರಿಗೆ ನೌಕರರ ಜೊತೆಗೆ ಮಾತುಕತೆ ನಡೆಸಲಿ - ಸಿದ್ದರಾಮಯ್ಯ

ಮುಷ್ಕರ ನಿರತ ಸಾರಿಗೆ ನೌಕರರ ಸಮಸ್ಯೆಯನ್ನು ಸೌಹಾರ್ದತೆಯಿಂದ ಬಗೆಹರಿಸಿ, ಸಾರಿಗೆ ವ್ಯವಸ್ಥೆಯಿಲ್ಲದೆ ಕಷ್ಟನಷ್ಟಕ್ಕೀಡಾಗಿರುವ ಜನತೆಯನ್ನು ರಕ್ಷಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Authored byಇರ್ಷಾದ್ ಉಪ್ಪಿನಂಗಡಿ | Agencies 8 Apr 2021, 2:15 pm

ಹೈಲೈಟ್ಸ್‌:

  • ಮುಷ್ಕರ ನಿರತ ಸಾರಿಗೆ ನೌಕರರ ಸಮಸ್ಯೆಯನ್ನು ಸೌಹಾರ್ದತೆಯಿಂದ ಬಗೆಹರಿಸುವಂತೆ ಸಿದ್ದರಾಮಯ್ಯ ಆಗ್ರಹ
  • ಸಾರಿಗೆ ವ್ಯವಸ್ಥೆಯಿಲ್ಲದೆ ಕಷ್ಟನಷ್ಟಕ್ಕೀಡಾಗಿರುವ ಜನತೆಯನ್ನು ರಕ್ಷಿಸಬೇಕು ಎಂದು ಮಾಜಿ ಸಿಎಂ ಮನವಿ
  • ರಾಜ್ಯ ಸರಕಾರ ತನ್ನ ಪ್ರತಿಷ್ಠೆಯನ್ನು ಬದಿಗಿಟ್ಟು ತಕ್ಷಣ ಕೆಎಸ್‌ಆರ್‌ಟಿಸಿ ಕಾರ್ಮಿಕರ ಜೊತೆ ಮಾತುಕತೆ ನಡೆಸಬೇಕು ಎಂದು ಆಗ್ರಹಿಸಿದ ವಿಪಕ್ಷ ನಾಯಕ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web KSRTC Bus
ಬೆಂಗಳೂರು: ರಾಜ್ಯ ಸರಕಾರ ತನ್ನ ಪ್ರತಿಷ್ಠೆಯನ್ನು ಬದಿಗಿಟ್ಟು ತಕ್ಷಣ ಕೆಎಸ್‌ಆರ್‌ಟಿಸಿ ಕಾರ್ಮಿಕರ ಜೊತೆ ಮಾತುಕತೆ ನಡೆಸಬೇಕು. ಈ ಮೂಲಕ ಸಮಸ್ಯೆಯನ್ನು ಸೌಹಾರ್ದತೆಯಿಂದ ಬಗೆಹರಿಸಿ, ಸಾರಿಗೆ ವ್ಯವಸ್ಥೆಯಿಲ್ಲದೆ ಕಷ್ಟನಷ್ಟಕ್ಕಿಡಾಗಿರುವ ಜನತೆಯನ್ನು ರಕ್ಷಿಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ..
ಈ ಕುರಿತಾಗಿ ಸರಣಿ ಟ್ವೀಟ್‌ಗಳನ್ನು ಮಾಡಿರುವ ಅವರು, ಕೆಎಸ್‌ಆರ್‌ಟಿಸಿ ನೌಕರರ ಬೇಡಿಕೆಗಳನ್ನು ಈಡೇರಿಸಲಾಗದಿರುವುದಕ್ಕೆ ರಾಜ್ಯ ಸರಕಾರ ನೀಡುತ್ತಿರುವ ಆರ್ಥಿಕ ಸಂಕಷ್ಟ ಸ್ವಯಂಕೃತ ಅಪರಾಧ. ತನ್ನ ದುರಾಡಳಿತ ಮತ್ತು ಕೇಂದ್ರದ ಗುಲಾಮಗಿರಿಯಿಂದಾಗಿ ರಾಜ್ಯ ಸರಕಾರ ದಿವಾಳಿಯಾಗಿದೆ ಎಂದು ದೂರಿದ್ದಾರೆ.

ಕಾರ್ಮಿಕ‌ ಸಂಘದ ನಾಯಕರ ಜೊತೆ ಕೂತು ಅವರ ಮ‌ನವೊಲಿಸಿ ಸಮಸ್ಯೆಯನ್ನು ಬಗೆಹರಿಸಬೇಕಾದ ರಾಜ್ಯ ಸರಕಾರ ಖಾಸಗಿ ಬಸ್ ಓಡಿಸುವ, ಎಸ್ಮಾ ಜಾರಿಗೊಳಿಸುವ ಬೆದರಿಕೆಯೊಡ್ಡಿ‌‌ ಸಂಘರ್ಷಕ್ಕೆ ದಾರಿಮಾಡಿಕೊಡುತ್ತಿರುವುದು ದುರದೃಷ್ಟಕರ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ತವ್ಯಕ್ಕೆ ಹಾಜರಾಗುವ ಸಾರಿಗೆ ಸಿಬ್ಬಂದಿಗೆ ರಕ್ಷಣೆ, ಬಸವರಾಜ ಬೊಮ್ಮಾಯಿ ಭರವಸೆ
ಕಳೆದ ಬಾರಿ ಕೆಎಸ್‌ಆರ್‌ಟಿಸಿ‌ ನೌಕರರ‌ ಮುಷ್ಕರದ ಸಂದರ್ಭದಲ್ಲಿ ಅವರ ಬೇಡಿಕೆಗಳ ಬಗ್ಗೆ ಸಮ್ಮತಿಸಿದಾಗಲೇ ಅದರ ಪರಿಣಾಮವನ್ನು ರಾಜ್ಯ ಸರಕಾರ ಯೋಚಿಸಿ ನಿರ್ಧಾರ ಕೈಗೊಳ್ಳಬೇಕಿತ್ತು. ಆ‌ ಕ್ಷಣದಲ್ಲಿ ಸುಳ್ಳು ಆಶ್ವಾಸನೆ ನೀಡಿ ನಂತರ ಮಾತು ತಪ್ಪಿರುವುದೇ ಈಗಿನ ಸಂಘರ್ಷಕ್ಕೆ ಕಾರಣ ಎಂದು ಆರೋಪಿಸಿದ್ದಾರೆ.

ಕೊರೊನಾ ರೋಗದಿಂದ ತತ್ತರಿಸಿಹೋಗಿರುವ ರಾಜ್ಯದ ಜನತೆ ಕೆಎಸ್‌ಆರ್‌ಟಿಸಿ‌ ನೌಕರರ ಮುಷ್ಕರದಿಂದಾಗಿ ದುಪ್ಪಟ್ಟು ಕಷ್ಟ-ನಷ್ಟಕ್ಕೀಡಾಗುತ್ತಿರುವುದಕ್ಕೆ ರಾಜ್ಯದ ಅಸಮರ್ಥ-ಭ್ರಷ್ಟ ಬಿಜೆಪಿ ಸರಕಾರವೇ ಹೊಣೆಯಾಗಿದೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಆರನೇ ವೇತನ ಆಯೋಗದ ಅನ್ವಯ ಸಂಬಳ ಮತ್ತು ಭತ್ಯೆ ಜಾರಿಗೊಳಿಸಲು ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ಸಾರಿಗೆ ನೌಕರರ ಮುಷ್ಕರ ಗುರುವಾರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮುಷ್ಕರದಿಂದ ಜನಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದಾರೆ.
ಲೇಖಕರ ಬಗ್ಗೆ
ಇರ್ಷಾದ್ ಉಪ್ಪಿನಂಗಡಿ
ವಿಜಯ ಕರ್ನಾಟಕ ಡಿಜಿಟಲ್ ವಿಭಾಗದಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ದೃಶ್ಯ ಹಾಗೂ ಡಿಜಿಟಲ್ ಮಾಧ್ಯಮ ವರದಿಗಾರಿಕೆಯಲ್ಲಿ 12 ವರ್ಷಗಳ ಅನುಭವ ಹೊಂದಿದ್ದಾರೆ. ಸಿನಿಮಾ ನೋಡುವುದು, ಪುಸ್ತಕ ಓದುವುದು, ಸಮಯ ಸಿಕ್ಕಾಗ ಸುತ್ತಾಟ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ