ಆ್ಯಪ್ನಗರ

Siddaramaiah | ಜೀವ ಬೆದರಿಕೆ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರಿಗೆ ಸೂಕ್ತ ಭದ್ರತೆ: ಬಸವರಾಜ ಬೊಮ್ಮಾಯಿ

Egg pelting: ಈಗಾಗಲೇ ವಿರೋಧ ಪಕ್ಷದ ನಾಯಕರಾದ ಸಿದ್ದರಾಮುಯ್ಯ ಅವರ ಬಳಿ ಮಾತನಾಡಿದ್ಧೇನೆ. ಅವರಿಗೆ ಜೀವ ಬೆದರಿಗೆ ಇದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ನಿಟ್ಟಿನಲ್ಲಿ ಈ ಘಟನೆಯನ್ನು ಗಂಭೀರವಾಗಿ ತೆಗೆದುಕೊಳ್ಳುತ್ತೇವೆ, ಸಂಪೂರ್ಣವಾಗಿ ತನಿಖೆ ಮಾಡುತ್ತೇವೆ. ಡಿಜಿ ಅವರ ಬಳಿಯೂ ಮಾತನಾಡಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಕಾನೂನು ಕೈಗೆ ಯಾರೂ ತೆಗೆದುಕೊಳ್ಳಬಾರದು. ಆದರೆ, ಇದು ಎರಡೂ ಕಡೆಯಲ್ಲೂ ನಡೆಯುತ್ತಿದೆ. ಯಾರೂ ಮತ್ತೊಬ್ಬರ ಮನಸ್ಸು ಕೆರಳಿಸುವ ಪ್ರಚೋದನಕಾರಿ ಹೇಳಿಕೆ ನೀಡಬಾರದು.

Edited byಹೇಮಂತ್ ಕುಮಾರ್ ಎಸ್ | Reported byಇರ್ಷಾದ್ ಉಪ್ಪಿನಂಗಡಿ | Vijaya Karnataka Web 19 Aug 2022, 7:54 pm

ಹೈಲೈಟ್ಸ್‌:


  • ಈಗಾಗಲೇ ವಿರೋಧ ಪಕ್ಷದ ನಾಯಕರಾದ ಸಿದ್ದರಾಮುಯ್ಯ ಅವರ ಬಳಿ ಮಾತನಾಡಿದ್ಧೇನೆ
  • ಕಾನೂನು ಕೈಗೆ ಯಾರೂ ತೆಗೆದುಕೊಳ್ಳಬಾರದು. ಆದರೆ, ಇದು ಎರಡೂ ಕಡೆಯಲ್ಲೂ ನಡೆಯುತ್ತಿದೆ.
  • ಆಗಸ್ಟ್ 26ರಂದು ಮಡಿಕೇರಿ ಎಸ್‌ಪಿ ಕಚೇರಿಗೂ ಮುತ್ತಿಗೆ ಹಾಕಲು ಕಾಂಗ್ರೆಸ್ ನಿರ್ಧಾರ ಮಾಡಿದೆ.

ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web siddaramaiah
ಸಿದ್ದರಾಮಯ್ಯ
ಬೆಂಗಳೂರು: ಕೊಡಗು ಜಿಲ್ಲೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಘಟನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು ಸೂಕ್ತ ಭದ್ರತೆಯನ್ನು ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಬೆಂಗಳೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, ಈ ವಿಚಾರವಾಗಿ ಈಗಾಗಲೇ ವಿರೋಧ ಪಕ್ಷದ ನಾಯಕರಾದ ಸಿದ್ದರಾಮುಯ್ಯ ಅವರ ಬಳಿ ಮಾತನಾಡಿದ್ಧೇನೆ. ಅವರಿಗೆ ಜೀವ ಬೆದರಿಗೆ ಇದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ನಿಟ್ಟಿನಲ್ಲಿ ಈ ಘಟನೆಯನ್ನು ಗಂಭೀರವಾಗಿ ತೆಗೆದುಕೊಳ್ಳುತ್ತೇವೆ, ಸಂಪೂರ್ಣವಾಗಿ ತನಿಖೆ ಮಾಡುತ್ತೇವೆ. ಡಿಜಿ ಅವರ ಬಳಿಯೂ ಮಾತನಾಡಿದ್ದೇನೆ ಎಂದರು.
Siddaramaiah |'ಮೊಟ್ಟೆ ಎಸೆದರೆ, ಕಲ್ಲು ತೂರುವೆ': ಸೇರಿಗೆ ಸವಾಸೇರು-ಏನ್‌ ನಡೀತಿದೆ ಸ್ವಾಮಿ ನಮ್ಮ ಶಾಂತಿಯ ತೋಟದಲ್ಲಿ?
ಕಾನೂನು ಕೈಗೆ ಯಾರೂ ತೆಗೆದುಕೊಳ್ಳಬಾರದು. ಆದರೆ, ಇದು ಎರಡೂ ಕಡೆಯಲ್ಲೂ ನಡೆಯುತ್ತಿದೆ. ಯಾರೂ ಮತ್ತೊಬ್ಬರ ಮನಸ್ಸು ಕೆರಳಿಸುವ ಪ್ರಚೋದನಕಾರಿ ಹೇಳಿಕೆ ನೀಡಬಾರದು. ಈ ನಿಟ್ಟಿನಲ್ಲಿ ಕಟ್ಟುನಿಟ್ಟಾದ ಸೂಚನೆಯನ್ನು ಎಸ್‌ಪಿಗಳಿಗೂ ನೀಡಲಾಗಿದೆ ಎಂದರು.

ಗುರುವಾರ ಕೊಡಗು ಜಿಲ್ಲೆಯ ಪ್ರವಾಸ ಮಾಡಿದ್ದ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿತ್ತು. ಈ ಸಂದರ್ಭದಲ್ಲಿ ಕಿಡಿಗೇಡಿಗಳು ಅವರ ಕಾರಿನ ಮೇಲೆ ಮೊಟ್ಟೆ ಎಸೆದಿದ್ದರು. ಅಷ್ಟೇ ಅಲ್ಲದೆ ಕಾರಿನ ಒಳಗಡೆ ಪೋಸ್ಟರ್‌ ಹಾಕಿದ್ದರು. ಈ ಘಟನೆಯನ್ನು ಖಂಡಿಸಿ ಕಾಂಗ್ರೆಸ್ ಶುಕ್ರವಾರ ಪ್ರತಿಭಟನೆ ನಡೆಸಿದೆ.
Siddaramaiah | ಕೊಪ್ಪಳ: ಮೊಟ್ಟೆ ಎಸೆದರೆ ನಾವು ಕಲ್ಲು ಎಸೆಯುವೆವು-ಕಾಂಗ್ರೆಸ್‌ನ ಶಿವರಾಜ್ ತಂಗಡಗಿ
ನಗರದ ಫ್ರೀಡಂ ಪಾರ್ಕ್‌ನಲ್ಲಿ ಕಾಂಗ್ರೆಸ್ ಪ್ರತಿಭಟನೆಯನ್ನು ನಡೆಸಿದ್ದು, ಇದು ಹೀಗೆ ಮುಂದುವರಿದರೆ ನಾವೂ ಕೂಡಾ ಇದೇ ರೀತಿಯಲ್ಲಿ ಉತ್ತರ ನೀಡುತ್ತೇವೆ ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ ಕಾಂಗ್ರೆಸ್ ಶಾಸಕರು. ಈ ನಡುವೆ ಆಗಸ್ಟ್ 26 ರಂದು ಮಡಿಕೇರಿ ಎಸ್‌ಪಿ ಕಚೇರಿಗೂ ಮುತ್ತಿಗೆ ಹಾಕಲು ಕಾಂಗ್ರೆಸ್ ನಿರ್ಧಾರ ಮಾಡಿದೆ. ಈ ಹಿನ್ನೆಲೆಯಲ್ಲಿ ಸಿಎಂ ಪ್ರತಿಕ್ರಿಯೆ ನೀಡಿ ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು ಎಂದು ಮನವಿ ಮಾಡಿದ್ದಾರೆ.
'ಮೊಟ್ಟೆ ಎಸೆದರೆ ನಾವು ಕಲ್ಲು ಎಸೆಯುವೆವು':

ಕೊಪ್ಪಳ: ಮೊಟ್ಟೆ ಎಸೆಯುವ ಸಂಸ್ಕೃತಿ ಬಿಜೆಪಿಯವರು ಆರಂಭಿಸಿದ್ದಾರೆ. ಹೀಗೆ ಮುಂದುವರೆದರೆ ಮುಖ್ಯಮಂತ್ರಿ, ಮಂತ್ರಿಗಳು ಓಡಾಡುವುದು ಕಷ್ಟವಾಗಲಿದೆ. ಅವರು ಮೊಟ್ಟೆ ಎಸೆದರೆ ನಾವು ಕಲ್ಲು ಎಸೆಯುತ್ತೇವೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಿವರಾಜ್ ತಂಗಡಗಿ ಎಚ್ಚರಿಕೆ ನೀಡಿದರು.
Siddaramaiah vs CT Ravi:'ಮುಸ್ಲಿಂ ಏರಿಯಾ ಅಂದ್ರೆ ಅದೇನು ಪಾಕಿಸ್ತಾನನ?'-ಸಿದ್ದರಾಮಯ್ಯಗೆ ಸಿ.ಟಿ.ರವಿ ಪ್ರಶ್ನೆ
ಮಡಿಕೇರಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಭೇಟಿ ನೀಡಿದಾಗ ಮೊಟ್ಟೆ ಎಸೆದಿದ್ದಾರೆ. ಮೊಟ್ಟೆ ಎಸೆದಿದ್ದರಿಂದ ಕಾಂಗ್ರೆಸ್ ಕುಗ್ಗಲ್ಲ. ನಮಗೂ ಕಲ್ಲು ಎಸೆಯಲು ಬರುವುದಿಲ್ಲವೇ ಎಂದು ಪ್ರಶ್ನಿಸಿದರು.

ಗೋ ಬ್ಯಾಕ್ ಸಿದ್ದರಾಮಯ್ಯ ಎಂದು ಚಿಕ್ಕಮಗಳೂರಲ್ಲಿ ಘೇರಾವ್ ಹಾಕಿದ್ದಾರೆ. ನಾವು ಬಿಜೆಪಿ ಮಂತ್ರಿಗಳು ಬಂದರೆ ಗೋ ಬ್ಯಾಕ್ ಬಿಜೆಪಿ ಎನ್ನುತ್ತೇವೆ. ಕಾಂಗ್ರೆಸ್‌ನಿಂದ ಆಗಸ್ಟ್‌ 26ರಂದು ಮಡಿಕೇರಿ ಚಲೋ ನಡೆಸಲಾಗುವುದು. ಸ್ಥಳೀಯ ಶಾಸಕ ಅಪ್ಪಚ್ಚು ರಂಜನ್‌ಗೆ ಧೈರ್ಯ ಇದ್ದರೆ ನಮ್ಮನ್ನು ತಡೆಯಲಿ ನೋಡೋಣ ಎಂದು ಸವಾಲು ಹಾಕಿದರು.
Savarkar | ಸಾರ್ವಜನಿಕ ಗಣೇಶೋತ್ಸವದಲ್ಲಿ 'ಸಾವರ್ಕರ್ ಉತ್ಸವ' ಆಚರಣೆ: ಪ್ರಮೋದ್ ಮುತಾಲಿಕ್
ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆತ:

ಅತಿವೃಷ್ಟಿಯಿಂದ ಹಾನಿಗೊಳಗಾದ ಕೊಡಗು ಜಿಲ್ಲೆಯ ಪ್ರದೇಶಗಳಿಗೆ ಗುರುವಾರ ಸಿದ್ದರಾಮಯ್ಯ ಭೇಟಿ ನೀಡಿದ್ದರು. ಈ ವೇಳೆ ಸಾವರ್ಕರ್‌ ಫ್ಲೆಕ್ಸ್ ವಿವಾದದ ಕುರಿತಾಗಿ ಸಿದ್ದರಾಮಯ್ಯ ನೀಡಿದ್ದ ಹೇಳಿಕೆಯನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದರು. ಸಿದ್ದರಾಮಯ್ಯ ಗೋಬ್ಯಾಕ್ ಎಂದು ಕಪ್ಪು ಬಾವುಟ ಪ್ರದರ್ಶನ ಮಾಡಿದ್ದರು. ಈ ವೇಳೆ ಕಿಡಿಗೇಡಿಗಳು ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದಿದ್ದರು.
ಲೇಖಕರ ಬಗ್ಗೆ
ಹೇಮಂತ್ ಕುಮಾರ್ ಎಸ್
ವಿಜಯ ಕರ್ನಾಟಕ ಡಿಜಿಟಲ್‌ ವಿಭಾಗದಲ್ಲಿ ಪತ್ರಕರ್ತನಾಗಿ 2022ರಿಂದ ಕಾರ್ಯನಿರ್ವಹಿಸುತ್ತಿರುವ ಹೇಮಂತ್ ಮಾಧ್ಯಮ ರಂಗಕ್ಕೆ ಅಧಿಕೃತ ಪ್ರವೇಶ ಆಗಿದ್ದು 2011ರಲ್ಲಿ ನ್ಯೂಸ್ ಚಾನೆಲ್ ಮೂಲಕ. ಅದಕ್ಕೂ ಹಿಂದಿನಿಂದ ವಾರಪತ್ರಿಕೆಗಳಿಗೆ ಪ್ರಚಲಿತ ವಿಜ್ಞಾನ-ತಂತ್ರಜ್ಞಾನಕ್ಕೆ ಸಂಬಂಧಿಸಿದ ಲೇಖನಗಳ ಬರವಣಿಗೆಯಿಂದ ಬರಹದ ನಂಟು ಬೆಳೆಸಿಕೊಂಡಿದ್ದರು. ಸಿನಿಮಾ, ಕ್ರೈಂ, ರಾಜಕೀಯ, ಮೆಟ್ರೊ, ಕನ್ನಡ ಮತ್ತು ಸಂಸ್ಕೃತಿ, ಶಿಕ್ಷಣ, ರಾಷ್ಟ್ರ-ಅಂತಾರಾಷ್ಟ್ರೀಯ ವಿದ್ಯಮಾನಗಳು ಹಾಗೂ ಜಿಲ್ಲೆಗಳಲ್ಲಿನ ಬೆಳವಣಿಗೆಗಳ ಬಗ್ಗೆ ಆಸಕ್ತಿ ವಿಸ್ತರಿಸಿಕೊಂಡಿದ್ದಾರೆ. ಟಿವಿ, ಪತ್ರಿಕೆ, ಡಿಜಿಟಲ್‌/ ವೆಬ್‌, ಕೆಲ ಸಮಯ ರೇಡಿಯೊ ಚಾನೆಲ್‌ನಲ್ಲೂ ತೊಡಗಿಸಿಕೊಂಡ ಅನುಭವಿರುವ ಇವರ ಮಂತ್ರ 'ಬದುಕು ನಿರಂತರ'. ಚಾರಣ, ರಂಗಭೂಮಿ, ಪ್ರವಾಸ, ಓದು,...ಹೀಗೆ ಒಂದಷ್ಟು ಅಭ್ಯಾಸ-ಹವ್ಯಾಸಗಳು ಜೊತೆಗಿವೆ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ