ಆ್ಯಪ್ನಗರ

ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಸಿದ್ಧಗಂಗಾ ಶ್ರೀ ಸಮ್ಮತಿ: ಸಚಿವ ಪಾಟೀಲ್‌

ಪ್ರತ್ಯೇಕ ಧರ್ಮದ ವಿಚಾರವನ್ನು ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಸ್ವಾಗತಿಸಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದರು.

Vijaya Karnataka Web 29 Mar 2018, 9:24 am
ತುಮಕೂರು: ಪ್ರತ್ಯೇಕ ಧರ್ಮದ ವಿಚಾರವನ್ನು ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಸ್ವಾಗತಿಸಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದರು.
Vijaya Karnataka Web lingayata separate religion
ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಸಿದ್ಧಗಂಗಾ ಶ್ರೀ ಸಮ್ಮತಿ: ಸಚಿವ ಪಾಟೀಲ್‌


ಸಿದ್ಧಗಂಗಾ ಮಠಕ್ಕೆ ಬುಧವಾರ ಭೇಟಿ ನೀಡಿ, ಡಾ.ಶಿವಕುಮಾರ ಸ್ವಾಮೀಜಿಯವರ ಆಶೀರ್ವಾದ ಪಡೆದು ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ''ಪ್ರತ್ಯೇಕ ಲಿಂಗಾಯತ ಧರ್ಮದ ಬಗ್ಗೆ ಬಹುತೇಕ ಮಠಾಧೀಶರು ಬೆಂಬಲ ಸೂಚಿಸಿದ್ದು, ಪ್ರಮುಖವಾಗಿ ಸಿದ್ಧಗಂಗಾ ಮಠಾಧ್ಯಕ್ಷ ರು ಸಮ್ಮತಿಸಿದ್ದಾರೆ. ಅವರೊಂದಿಗೆ ಈಗಾಗಲೇ ಮಾತುಕತೆ ನಡೆಸಿದ್ದೇನೆ. ಶ್ರೀಗಳ ನೇತೃತ್ವದಲ್ಲಿಯೇ ಧರ್ಮದ ವಿಚಾರವಾಗಿ ಪ್ರತಿ ಹೆಜ್ಜೆ ಇಡಲಾಗುವುದು,'' ಎಂದು ಹೇಳಿದರು.

''ಕೇಂದ್ರ ಸರಕಾರಕ್ಕೆ ಪ್ರತ್ಯೇಕ ಧರ್ಮದ ಬಗ್ಗೆ ರಾಜ್ಯ ಸರಕಾರ ಶಿಫಾರಸು ಮಾಡಿದೆ. ಲಿಂಗಾಯತ ಧರ್ಮ ಪ್ರತ್ಯೇಕವಾದ ಮಾತ್ರಕ್ಕೆ ಹಿಂದೂ ಧರ್ಮ ಒಡೆಯುವುದಿಲ್ಲ. ಇದನ್ನು ಅಮಿತ್‌ ಶಾ ಅರ್ಥಮಾಡಿಕೊಂಡು ಪ್ರತ್ಯೇಕ ಧರ್ಮದ ವಿರುದ್ಧ ಮಾತನಾಡುವುದನ್ನು ನಿಲ್ಲಿಸಲಿ,'' ಎಂದು ತಿರುಗೇಟು ನೀಡಿದರು.

''ಜೈನ ಸಮುದಾಯಕ್ಕೆ ಪ್ರತ್ಯೇಕ ಧರ್ಮದ ಸ್ಥಾನಮಾನ ನೀಡಿದಾಗ ಒಡೆಯದ ಸಮಾಜ, ಲಿಂಗಾಯತ ಧರ್ಮಕ್ಕೆ ಪ್ರತ್ಯೇಕ ಸ್ಥಾನಮಾನ ನೀಡಿದರೆ ಹೇಗೆ ಒಡೆಯುತ್ತದೆ. ಲಿಂಗಾಯತ ಧರ್ಮ ಸ್ವತಂತ್ರ ಧರ್ಮವಾದರೆ ಲಿಂಗಾಯತ ಸಮುದಾಯದ ಅಭಿವೃದ್ಧಿಗೆ ಹೆಚ್ಚು ಸಹಕಾರಿಯಾಗಲಿದೆ. ಹಾಗಾಗಿ ಕೇಂದ್ರ ಸರಕಾರ ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಕ್ರಮ ಕೈಗೊಳ್ಳುವುದು ಅಗತ್ಯ,'' ಎಂದರು.

''ಅಮಿತ್‌ ಶಾ ಅವರು ಜೈನ ಧರ್ಮಕ್ಕೆ ಸೇರಿದವರಾಗಿದ್ದಾರೆ. ಒಂದೇ ಧರ್ಮದಡಿಯಲ್ಲಿದ್ದ ಜೈನ, ಬೌದ್ಧ, ಸಿಖ್‌ ಸಮಾಜಗಳು ಜೈನ ಧರ್ಮ ಪ್ರತ್ಯೇಕಗೊಂಡಾಗ ಒಡೆಯಲಿಲ್ಲವೇ? ಇದನ್ನು ಅಮಿತ್‌ ಶಾ ಗಮದಲ್ಲಿಟ್ಟುಕೊಂಡು ಲಿಂಗಾಯತ ಧರ್ಮವನ್ನು ಪ್ರತ್ಯೇಕ ಧರ್ಮ ಮಾಡುವತ್ತ ಗಮನ ಹರಿಸಬೇಕು,''ಎಂದು ಒತ್ತಾಯಿಸಿದರು.

ರಹಸ್ಯ ಮಾತುಕತೆ

ಸಚಿವ ಎಂ.ಬಿ.ಪಾಟೀಲ್‌ ಸಿದ್ಧಗಂಗಾ ಮಠಾಧೀಶ ಸಿದ್ಧಲಿಂಗ ಸ್ವಾಮೀಜಿ ಅವರ ಆಶೀರ್ವಾದ ಪಡೆದ ಬಳಿಕ ಸುಮಾರು 20 ನಿಮಿಷಗಳ ಕಾಲ ಕಚೇರಿಯ ಬಾಗಿಲು ಹಾಕಿಕೊಂಡು ರಹಸ್ಯ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ನಿವೃತ್ತ ಐಎಎಸ್‌ ಅಧಿಕಾರಿ ಎಂ.ಎಸ್‌.ಜಾಮದಾರ, ಡಾ.ಜಯಣ್ಣ, ಪುಟ್ಟರಾಜು ಮತ್ತಿತರರು ಭಾಗವಹಿಸಿದ್ದರು.

ಸಚಿವ ಎಂ.ಬಿ.ಪಾಟೀಲ್‌ ಬುಧವಾರ ಡಾ.ಶಿವಕುಮಾರ ಸ್ವಾಮೀಜಿಗಳಿಂದ ಆಶೀರ್ವಾದ ಪಡೆದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ