ಬೆಂಗಳೂರು: ಸಾಲ ಮನ್ನಾ ತೀರ್ಮಾನದಂತೆ ರೈತರ ಖಾತೆಗಳಿಗೆ ಹಣ ಬಿಡುಗಡೆ ಮಾಡಲು ಚುನಾವಣಾ ಆಯೋಗ ತಡೆಯೊಡ್ಡಿರುವುದಕ್ಕೆ ಸಿಎಂ ಎಚ್.ಡಿ.ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರಕಾರದ 'ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ' ಯೋಜನೆಯಡಿ ಹಣ ಬಿಡುಗಡೆಗೆ ಅವಕಾಶ ಕಲ್ಪಿಸಿರುವ ಆಯೋಗವು, ಸದ್ಯ ಚಾಲ್ತಿಯಲ್ಲಿದ್ದ ರಾಜ್ಯದ ರೈತ ಸಾಲ ಮನ್ನಾ ಯೋಜನೆಗೆ ತಾತ್ಕಾಲಿಕ ತಡೆ ನೀಡಿರುವುದಕ್ಕೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಬುಧವಾರ ಟ್ವೀಟ್ ಮಾಡಿರುವ ಸಿಎಂ ''ಫಲಾನುಭವಿ ರೈತರ ಖಾತೆಗಳಿಗೆ ಹಣ ಬಿಡುಗಡೆ ಮಾಡುವ ಪ್ರಕ್ರಿಯೆ ಮುಂದುವರಿಕೆಗೆ ಅವಕಾಶ ಕಲ್ಪಿಸುವಂತೆ ಮನವಿ ಮಾಡಿ ರಾಜ್ಯ ಮುಖ್ಯ ಕಾರ್ಯದರ್ಶಿಗಳು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಕಿಸಾನ್ ಸಮ್ಮಾನ್ ಯೋಜನೆ ಮುಂದುವರಿಕೆಗೆ ಅವಕಾಶ ಕಲ್ಪಿಸಿರುವಂತೆ ರಾಜ್ಯ ಸರಕಾರದ ಸಾಲ ಮನ್ನಾ ಯೋಜನೆ ಮುಂದುವರಿಕೆಗೂ ಅನುವು ಮಾಡಿಕೊಡುವಂತೆ ಮನವಿ ಮಾಡಲಾಗಿದೆ. ಚುನಾವಣಾ ಆಯೋಗದಿಂದ ಸಕಾರಾತ್ಮಕ ಸ್ಪಂದನೆ ಸಿಗುವ ನಿರೀಕ್ಷೆಯಿದೆ'' ಎಂದಿದ್ದಾರೆ.
ನೀತಿ ಸಂಹಿತೆ ಕಾರಣಕ್ಕೆ ಸಾಲ ಮನ್ನಾ ಯೋಜನೆಗೆ ಚುನಾವಣಾ ಆಯೋಗ ತಾತ್ಕಾಲಿಕ ತಡೆ ನೀಡಿರುವ ಬಗ್ಗೆ 'ಸಾಲಮನ್ನಾಗೆ ನೀತಿ ಸಂಹಿತೆ ರೆಡ್ಸಿಗ್ನಲ್' ಶೀರ್ಷಿಕೆಯಡಿ ವಿಜಯ ಕರ್ನಾಟಕ ಪತ್ರಿಕೆ ವಿಶೇಷ ವರದಿ ಪ್ರಕಟಿಸಿತ್ತು.
ಕೇಂದ್ರ ಸರಕಾರದ 'ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ' ಯೋಜನೆಯಡಿ ಹಣ ಬಿಡುಗಡೆಗೆ ಅವಕಾಶ ಕಲ್ಪಿಸಿರುವ ಆಯೋಗವು, ಸದ್ಯ ಚಾಲ್ತಿಯಲ್ಲಿದ್ದ ರಾಜ್ಯದ ರೈತ ಸಾಲ ಮನ್ನಾ ಯೋಜನೆಗೆ ತಾತ್ಕಾಲಿಕ ತಡೆ ನೀಡಿರುವುದಕ್ಕೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಬುಧವಾರ ಟ್ವೀಟ್ ಮಾಡಿರುವ ಸಿಎಂ ''ಫಲಾನುಭವಿ ರೈತರ ಖಾತೆಗಳಿಗೆ ಹಣ ಬಿಡುಗಡೆ ಮಾಡುವ ಪ್ರಕ್ರಿಯೆ ಮುಂದುವರಿಕೆಗೆ ಅವಕಾಶ ಕಲ್ಪಿಸುವಂತೆ ಮನವಿ ಮಾಡಿ ರಾಜ್ಯ ಮುಖ್ಯ ಕಾರ್ಯದರ್ಶಿಗಳು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಕಿಸಾನ್ ಸಮ್ಮಾನ್ ಯೋಜನೆ ಮುಂದುವರಿಕೆಗೆ ಅವಕಾಶ ಕಲ್ಪಿಸಿರುವಂತೆ ರಾಜ್ಯ ಸರಕಾರದ ಸಾಲ ಮನ್ನಾ ಯೋಜನೆ ಮುಂದುವರಿಕೆಗೂ ಅನುವು ಮಾಡಿಕೊಡುವಂತೆ ಮನವಿ ಮಾಡಲಾಗಿದೆ. ಚುನಾವಣಾ ಆಯೋಗದಿಂದ ಸಕಾರಾತ್ಮಕ ಸ್ಪಂದನೆ ಸಿಗುವ ನಿರೀಕ್ಷೆಯಿದೆ'' ಎಂದಿದ್ದಾರೆ.
ನೀತಿ ಸಂಹಿತೆ ಕಾರಣಕ್ಕೆ ಸಾಲ ಮನ್ನಾ ಯೋಜನೆಗೆ ಚುನಾವಣಾ ಆಯೋಗ ತಾತ್ಕಾಲಿಕ ತಡೆ ನೀಡಿರುವ ಬಗ್ಗೆ 'ಸಾಲಮನ್ನಾಗೆ ನೀತಿ ಸಂಹಿತೆ ರೆಡ್ಸಿಗ್ನಲ್' ಶೀರ್ಷಿಕೆಯಡಿ ವಿಜಯ ಕರ್ನಾಟಕ ಪತ್ರಿಕೆ ವಿಶೇಷ ವರದಿ ಪ್ರಕಟಿಸಿತ್ತು.