ಆ್ಯಪ್ನಗರ

ಸಾಲ ಮನ್ನಾ, ಸಿಎಂರಿಂದ ಸ್ಪಷ್ಟ ಕ್ರಮ : ರೇವಣ್ಣ

ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ ರೈತರ ಸಾಲ ಮನ್ನಾ ಮಾಡುವ ಬಗ್ಗೆ ಸಿಎಂ ಇನ್ನೊಂದು ವಾರದಲ್ಲಿ ಸ್ಪಷ್ಟ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಲೋಕೋಪಯೋಗಿ ಸಚಿವ ಎಚ್‌ಡಿ...

Vijaya Karnataka 18 Oct 2018, 5:00 am
ಬೆಂಗಳೂರು : ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ ರೈತರ ಸಾಲ ಮನ್ನಾ ಮಾಡುವ ಬಗ್ಗೆ ಸಿಎಂ ಇನ್ನೊಂದು ವಾರದಲ್ಲಿ ಸ್ಪಷ್ಟ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಲೋಕೋಪಯೋಗಿ ಸಚಿವ ಎಚ್‌.ಡಿ. ರೇವಣ್ಣ ತಿಳಿಸಿದ್ದಾರೆ.
Vijaya Karnataka Web HDrevanna


ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದ ಅವರು, ''ಕೆಲವು ಬ್ಯಾಂಕ್‌ಗಳು ಈ ಸಂಬಂಧ ಮಾಹಿತಿ ಒದಗಿಸಿವೆ. ಇನ್ನು ಕೆಲವು ಬ್ಯಾಂಕ್‌ಗಳಿಂದ ವಿವರ ಪಡೆದುಕೊಳ್ಳಬೇಕಿದೆ. ಹಾಗಾಗಿ ಸ್ವಲ್ಪ ತೊಂದರೆಯಾಗಿದೆ. ಆದರೆ, ಈ ಎಲ್ಲ ಗೊಂದಲವನ್ನೂ ಸಿಎಂ ಬಗೆಹರಿಸುತ್ತಾರೆ,'' ಎಂಬ ವಿಶ್ವಾಸ ವ್ಯಕ್ತಪಡಿಸಿದರು.

''ನಾಯಕ ಸಮಾಜಕ್ಕೆ ಮಾಜಿ ಪ್ರಧಾನಿ ದೇವೇಗೌಡರು ಕೊಡುಗೆ ನೀಡಿದ್ದಾರೆ. ಅವರ ಬಗ್ಗೆ ಹಗುರ ಮಾತಾಡುವ ನೈತಿಕತೆ ಬಿಜೆಪಿಯ ಶ್ರೀರಾಮುಲು ಅವರಿಗೆ ಇಲ್ಲ. ಉಪ ಚುನಾವಣೆ ನಡೆಯುತ್ತಿರುವ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಜಯ ಗಳಿಸಲಿದೆ ಎನ್ನುತ್ತಿರುವ ಯಡಿಯೂರಪ್ಪ ಅವರಿಗೆ ಅರುಳೋ ಮರಳೋ ಎಂಬಂತಾಗಿದೆ,'' ಎಂದು ಲೇವಡಿ ಮಾಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ