ಆ್ಯಪ್ನಗರ

ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಹೊಂದಾಣಿಕೆ

ಬೆಂಗಳೂರು : ಅತಂತ್ರ ಪರಿಸ್ಥಿತಿಯಿರುವ ಸ್ಥಳೀಯ ಸಂಸ್ಥೆಗಳಲ್ಲಿ ಜೆಡಿಎಸ್‌ಗೆ ಬೆಂಬಲಿಸಿ ಅಧಿಕಾರ ಹಂಚಿಕೊಳ್ಳುವಂತೆ ಕಾಂಗ್ರೆಸ್‌ನ ಸ್ಥಳೀಯ ಘಟಕಗಳಿಗೆ ಕೆಪಿಸಿಸಿ ಸೂಚನೆ ನೀಡಿದೆ.

Vijaya Karnataka 4 Jun 2019, 5:00 am
ಬೆಂಗಳೂರು : ಅತಂತ್ರ ಪರಿಸ್ಥಿತಿಯಿರುವ ಸ್ಥಳೀಯ ಸಂಸ್ಥೆಗಳಲ್ಲಿ ಜೆಡಿಎಸ್‌ಗೆ ಬೆಂಬಲಿಸಿ ಅಧಿಕಾರ ಹಂಚಿಕೊಳ್ಳುವಂತೆ ಕಾಂಗ್ರೆಸ್‌ನ ಸ್ಥಳೀಯ ಘಟಕಗಳಿಗೆ ಕೆಪಿಸಿಸಿ ಸೂಚನೆ ನೀಡಿದೆ.
Vijaya Karnataka Web local boday coalition
ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಹೊಂದಾಣಿಕೆ


ಈ ಸಂಬಂಧ ಜಿಲ್ಲಾ ಮತ್ತು ತಾಲೂಕು ಕಾಂಗ್ರೆಸ್‌ ಘಟಕಗಳಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ನಿರ್ದೇಶನ ನೀಡಿದ್ದು, ''ಕಾಂಗ್ರೆಸ್‌ಗೆ ಹೆಚ್ಚು ಸ್ಥಾನ ಬಂದಿರುವ ಕಡೆ ಜೆಡಿಎಸ್‌ ಬೆಂಬಲ ಪಡೆದು ಅಧಿಕಾರ ಸೂತ್ರ ಹಿಡಿಯಬೇಕು. ಹಾಗೆಯೇ ಜೆಡಿಎಸ್‌ಗೆ ಹೆಚ್ಚು ಸ್ಥಾನ ಬಂದಿರುವ ಸ್ಥಳೀಯ ಸಂಸ್ಥೆಗಳಲ್ಲಿ ಆ ಪಕ್ಷದವರು ಅಧಿಕಾರ ರಚಿಸಲು ನಾವು ಸಹಕರಿಸಬೇಕು,'' ಎಂದು ಹೇಳಿದ್ದಾರೆ.

''ಕಾಂಗ್ರೆಸ್‌, ಜೆಡಿಎಸ್‌ ಎರಡೂ ಪಕ್ಷಗಳು ಸೇರಿದರೂ ಸಂಖ್ಯೆ ಕಡಿಮೆಯಾದ ಸಂಸ್ಥೆಗಳಲ್ಲಿ ಪಕ್ಷೇತರರ ಬೆಂಬಲ ಪಡೆಯಬೇಕು. ಯಾವುದೇ ಕಾರಣಕ್ಕೂ ಬಿಜೆಪಿಯೊಂದಿಗೆ ಹೊಂದಾಣಿಕೆಗೆ ಅವಕಾಶ ನೀಡಬಾರದು. ಅಂತಹ ಬಿಕ್ಕಟ್ಟಿನ ಪರಿಸ್ಥಿತಿ ನಿರ್ಮಾಣವಾದರೆ ಕೆಪಿಸಿಸಿ ಗಮನಕ್ಕೆ ತಂದು ಇತ್ಯರ್ಥ ಪಡಿಸಿಕೊಳ್ಳಬೇಕು,'' ಎಂಬ ಸೂಚನೆ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ