ಆ್ಯಪ್ನಗರ

ಸ್ಥಳೀಯ ಸಂಸ್ಥೆಯ ಅಧ್ಯಕ್ಷ-ಉಪಾಧ್ಯಕ್ಷ ಮೀಸಲು ಸಲ್ಲಿಕೆಗೆ ಆ.28 ಗಡುವು

ಮೈಸೂರು, ತುಮಕೂರು, ಶಿವಮೊಗ್ಗ ಮಹಾನಗರ ಪಾಲಿಕೆ ಸೇರಿದಂತೆ ಇದೀಗ ಚುನಾವಣೆ ನಡೆಯುತ್ತಿರುವ ನಗರ ಸ್ಥಳೀಯ ಸಂಸ್ಥೆಗಳ ಮೇಯರ್‌, ಉಪಮೇಯರ್‌ ಹಾಗೂ ...

Vijaya Karnataka 14 Aug 2018, 5:00 am
ಬೆಂಗಳೂರು: ಮೈಸೂರು, ತುಮಕೂರು, ಶಿವಮೊಗ್ಗ ಮಹಾನಗರ ಪಾಲಿಕೆ ಸೇರಿದಂತೆ ಇದೀಗ ಚುನಾವಣೆ ನಡೆಯುತ್ತಿರುವ ನಗರ ಸ್ಥಳೀಯ ಸಂಸ್ಥೆಗಳ ಮೇಯರ್‌, ಉಪಮೇಯರ್‌ ಹಾಗೂ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲು ಪಟ್ಟಿಯನ್ನು ಆಗಸ್ಟ್‌ 28ರೊಳಗೆ ಚುನಾವಣಾ ಆಯೋಗಕ್ಕೆ ಸಲ್ಲಿಸುವಂತೆ ಹೈಕೋರ್ಟ್‌ ಸರಕಾರಕ್ಕೆ ಗಡವು ನೀಡಿದೆ.
Vijaya Karnataka Web highcourt


ಚುನಾವಣಾ ಆಯೋಗ ಸಲ್ಲಿಸಿದ್ದ ಅರ್ಜಿಯ ಹಿನ್ನೆಲೆಯಲ್ಲಿ ಮುಖ್ಯ ನ್ಯಾಯಮೂರ್ತಿ ದಿನೇಶ್‌ ಮಹೇಶ್ವರಿ ಹಾಗೂ ನ್ಯಾಯಮೂರ್ತಿ ಆರ್‌.ದೇವದಾಸ್‌ ಅವರಿದ್ದ ವಿಭಾಗೀಯ ಪೀಠ ಸೋಮವಾರ ಈ ಆದೇಶ ನೀಡಿದೆ.

ಸರಕಾರಿ ವಕೀಲ ಪ್ರಶಾಂತ್‌ ''ಮೈಸೂರು, ತುಮಕೂರು, ಶಿವಮೊಗ್ಗ ಹೊರತುಪಡಿಸಿದರೆ ಉಳಿದ ಮಂಗಳೂರು, ಬಳ್ಳಾರಿ ಹಾಗೂ ಇನ್ನಿತರ ಏಳು ಮಹಾನಗರ ಪಾಲಿಕೆಗಳ ವಾರ್ಡ್‌ವಾರು ಮೀಸಲು ಪಟ್ಟಿಯನ್ನು ಸರಕಾರ ಅಂತಿಮಗೊಳಿಸಿದೆ. ಅದನ್ನು ಅಧಿಕೃತವಾಗಿ ರಾಜ್ಯಪತ್ರದಲ್ಲಿ ಪ್ರಕಟಿಸಲು ಪತ್ರಾಗಾರ ಇಲಾಖೆಗೆ ಕಳುಹಿಸಲಾಗಿದೆ. ಯಾವುದೇ ಕ್ಷಣದಲ್ಲಿ ಗೆಜೆಟ್‌ ಆಗಲಿದೆ. ಉಳಿದ ಸ್ಥಳೀಯ ಸಂಸ್ಥೆಗಳ ಮೇಯರ್‌, ಉಪಮೇಯರ್‌, ಅಧ್ಯಕ್ಷ ಮತ್ತು ಉಪಾಧ್ಯಕ್ಷ ಮೀಸಲು ಅಂತಿಮಗೊಳಿಸುವ ಕಾರ‍್ಯ ಪ್ರಗತಿಯಲ್ಲಿದ್ದು, ಆದಷ್ಟು ಬೇಗ ಅದನ್ನು ಆಯೋಗಕ್ಕೆ ಸಲ್ಲಿಸಲಾಗುವುದು,'' ಎಂದರು.

ಆಯೋಗದ ಪರ ವಕೀಲ ಕೆ.ಎನ್‌.ಫಣೀಂದ್ರ ''ಇದೇ 29ರಂದು ಸ್ಥಳೀಯ ಸಂಸ್ಥೆಗಳ ಚುನಾವಣೆ ಮತದಾನ ಇದೆ. ಅಷ್ಟರಲ್ಲಿ ಮೀಸಲು ಪಟ್ಟಿ ಒದಗಿಸುವಂತೆ ಸರಕಾರಕ್ಕೆ ನಿರ್ದೇಶನ ನೀಡಬೇಕು''ಎಂದು ಕೋರಿದರು.

ನ್ಯಾಯಪೀಠ, ''29ರಂದು ಚುನಾವಣೆ ನಡೆಯುವುದರಿಂದ 28ರಂದೇ ನೀವು(ಸರಕಾರ) ಮೀಸಲು ಪಟ್ಟಿಯನ್ನು ಸರಕಾರಕ್ಕೆ ಒದಗಿಸಬೇಕು. ಇದೇ ಕೊನೆಯ ಗಡುವು, ಇಲ್ಲವಾದರೆ ತೊಂದರೆ ಆಗಲಿದೆ,''ಎಂದು ಎಚ್ಚರಿಸಿ ವಿಚಾರಣೆಯನ್ನೂ ಆ.28ಕ್ಕೆ ಮುಂದೂಡಿತು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ