ಆ್ಯಪ್ನಗರ

ದಾವೋಸ್‌ ಪ್ರವಾಸ ಪ್ರತಿಫಲ: ಕರ್ನಾಟಕದಲ್ಲಿ ಹೂಡಿಕೆಗೆ ಮುಂದಾದ ಲಾಖೀಡ್ ಮಾರ್ಟಿನ್ ಕಂಪನಿ

​ದಾವೋಸ್ ಭೇಟಿ ನಮ್ಮ ರಾಜ್ಯಕ್ಕೆ ಬಂಡವಾಳ ಹರಿದು ಬರುವಲ್ಲಿ ಮತ್ತು ನವೆಂಬರ್‌ನಲ್ಲಿ ನಡೆಯುವ ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶದಲ್ಲಿ (ಜಿಐಎಂ) ಯಶಸ್ವಿ ಕಾಣುತ್ತೇವೆ ಎಂಬ ನಮ್ಮ ನಂಬಿಕೆ ಗಟ್ಟಿಯಾಗಿದೆ' ಎಂದು ಸಿಎಂ ಯಡಿಯೂರಪ್ಪ ಸ್ಪಷ್ಟಪಡಿಸಿದರು.

Vijaya Karnataka Web 28 Jan 2020, 7:09 pm
ಬೆಂಗಳೂರು: ಏರೋಸ್ಪೇಸ್ ವಲಯದ ಮುಂಚೂಣಿಯ ಕಂಪನಿ ಲಾಖೀಡ್ ಮಾರ್ಟಿನ್ ರಾಜ್ಯದಲ್ಲಿ ಬಂಡವಾಳ ಹೂಡಲು ಮುಂದಾಗಿದೆ.
Vijaya Karnataka Web ಲಾಖೀಡ್‌ ಮಾರ್ಟಿನ್‌
ಲಾಖೀಡ್‌ ಮಾರ್ಟಿನ್‌


ಕಂಪನಿಯ ಉಪಾಧ್ಯಕ್ಷ, ರಿಚರ್ಡ್ ಎಫ್. ಆಂಬ್ರೋಸ್ ಮುಖ್ಯಮಂತ್ರಿ ಜತೆ ಮಾತುಕತೆ ನಡೆಸಿದ ಮಾರನೆ ದಿನವೇ ಈ ನಿರ್ಧಾರ ಕೈಗೊಳ್ಳಲಾಗಿದೆ.

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಈ ಕುರಿತು ಪತ್ರ ಬರೆದು, ತಮ್ಮ ಕಂಪನಿಯ ಭಾರತದ ಮುಖ್ಯಸ್ಥರು ಸಂಪರ್ಕಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ, “ಲಾಖೀಡ್ ಮಾರ್ಟಿನ್ ಕಂಪನಿಯ ಕಾರ್ಯಕಾರಿ ಉಪಾಧ್ಯಕ್ಷ ರಿಚರ್ಡ್ ಎಫ್ ಆಂಬ್ರೋಸ್‌ ಬರೆದ ಪತ್ರ ತಲುಪಿದೆ. ಮೇಲ್ನೊಟಕ್ಕೆ ಇದೊಂದು ಸಾಮಾನ್ಯ ಪತ್ರವೆನಿಸಿದರು ಅದರ ಗಹನತೆಯನ್ನು ನಿಮ್ಮ ಗಮನಕ್ಕೆ ತರಬಯಸುತ್ತೇನೆ. ಲಾಖೀಡ್ ಮಾರ್ಟಿನ್ ಅಮೆರಿಕದ ಏರೋಸ್ಪೇಸ್ ವಲಯದ ಬೃಹತ್ ಕಂಪನಿಯಾಗಿದ್ದು ಅದು ನಮ್ಮ ರಾಜ್ಯದಲ್ಲಿ ಬಂಡವಾಳ ಹೂಡಲು ಉತ್ಸುಕವಾಗಿದೆ ಎಂಬುದನ್ನು ತೋರಿಸುತ್ತದೆ ಎಂದರು.

ನಮ್ಮ ದಾವೋಸ್ ಭೇಟಿ ಫಲಪ್ರದವಾಗಿದೆ ಎಂದು ಹೇಳಲು ಇದು ಒಂದು ಉದಾಹರಣೆ. ಈ ಪತ್ರ ರಾಜ್ಯದಲ್ಲಿ ಹೆಚ್ಚಿನ ಬಂಡವಾಳ ಆಕರ್ಷಿಸುವ ಬಗ್ಗೆ ನಮ್ಮ ನಿರೀಕ್ಷೆಯನ್ನು ಇಮ್ಮಡಿಗೊಳಿಸಿದೆ. ಇದಲ್ಲದೆ ನಮ್ಮ ದಾವೋಸ್ ಭೇಟಿ ಬಗ್ಗೆ ಅನುಮಾನ ವ್ಯಕ್ತಪಡಿಸುವವರಿಗೆ ಇದು ಉತ್ತರವಾಗಿದೆ ಎಂದರು

ದಾವೋಸ್ ಭೇಟಿ ನಮ್ಮ ರಾಜ್ಯಕ್ಕೆ ಬಂಡವಾಳ ಹರಿದು ಬರುವಲ್ಲಿ ಮತ್ತು ನವೆಂಬರ್‌ನಲ್ಲಿ ನಡೆಯುವ ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶದಲ್ಲಿ (ಜಿಐಎಂ) ಯಶಸ್ವಿ ಕಾಣುತ್ತೇವೆ ಎಂಬ ನಮ್ಮ ನಂಬಿಕೆ ಗಟ್ಟಿಯಾಗಿದೆ' ಎಂದು ಸಿಎಂ ಯಡಿಯೂರಪ್ಪ ಸ್ಪಷ್ಟಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ