ಆ್ಯಪ್ನಗರ

ಸುರ್ಜೇವಾಲಾಗೆ ಬೆಳ್ಳಿತಟ್ಟೆಯಲ್ಲಿ ಸಿದ್ದು ಭೋಜನಕೂಟ

ಶಿವಾನಂದ ವೃತ್ತ ಸಮೀಪ ಇರುವ ಸಿದ್ದರಾಮಯ್ಯ ನಿವಾಸಕ್ಕೆ ಸೋಮವಾರ ಭೇಟಿ ಕೊಟ್ಟ ಸುರ್ಜೆವಾಲಾರಿಗೆ ಹೂಗುಚ್ಛ ನೀಡಿ ಬರಮಾಡಿಕೊಂಡರು. ​ರೈತರ ಪ್ರತಿಭಟನೆ ನಡೆದ ದಿನವೇ ಈ ರೀತಿಯ ಭೋಜನಕೂಟ ಆಯೋಜಿಸಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆಗಳು ವ್ಯಕ್ತವಾಗುತ್ತಿವೆ.​

Vijaya Karnataka Web 28 Sep 2020, 10:30 pm
ಬೆಂಗಳೂರು: ಮೊದಲ ಬಾರಿಗೆ ನಿವಾಸಕ್ಕೆ ಭೇಟಿ ನೀಡಿದ್ದ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೆವಾಲಾಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಬೆಳ್ಳಿ ತಟ್ಟೆಯಲ್ಲಿ ಭೋಜನ ವ್ಯವಸ್ಥೆಯ ಆತಿಥ್ಯ ನೀಡಿದ್ದಾರೆ.
Vijaya Karnataka Web ಬೆಳ್ಳಿ ತಟ್ಟೆ ಭೋಜನಕೂಟ
ಬೆಳ್ಳಿ ತಟ್ಟೆ ಭೋಜನಕೂಟ


ಶಿವಾನಂದ ವೃತ್ತ ಸಮೀಪ ಇರುವ ಸಿದ್ದರಾಮಯ್ಯ ನಿವಾಸಕ್ಕೆ ಸೋಮವಾರ ಭೇಟಿ ಕೊಟ್ಟ ಸುರ್ಜೆವಾಲಾರಿಗೆ ಹೂಗುಚ್ಛ ನೀಡಿ ಬರಮಾಡಿಕೊಂಡರು. ಭೋಜನ ಸಮಯದಲ್ಲಿ ಮಾಜಿ ಸಚಿವರಾದ ಪ್ರಿಯಾಂಕ ಖರ್ಗೆ, ಜಮೀರ್‌ಅಹ್ಮದ್‌, ವಿಧಾನಪರಿಷತ್‌ ಸಚೇತಕ ನಾರಾಯಣಸ್ವಾಮಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್‌ ಮೊದಲಾದವರು ಇದ್ದರು.

ರೈತರ ಪ್ರತಿಭಟನೆ ನಡೆದ ದಿನವೇ ಈ ರೀತಿಯ ಭೋಜನಕೂಟ ಆಯೋಜಿಸಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆಗಳು ವ್ಯಕ್ತವಾಗುತ್ತಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ