ಆ್ಯಪ್ನಗರ

Madal Virupakshappa Bail : ಮಾಡಾಳ್ ವಿರೂಪಾಕ್ಷಪ್ಪಗೆ ಹೈಕೋರ್ಟ್‌ನಿಂದ ಮಧ್ಯಂತರ ನಿರೀಕ್ಷಣಾ ಜಾಮೀನು!

Madal Virupakshappa Bail : ಕೆಎಸ್‌ಡಿಎಲ್‌ ಟೆಂಡರ್ ಪ್ರಕ್ರಿಯೆಯಲ್ಲಿ ಲಂಚಪಡೆದ ಆರೋಪ ಎದುರಿಸುತ್ತಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ರಾಜ್ಯ ಹೈಕೋರ್ಟ್‌ ನಿರೀಕ್ಷಣಾ ಜಾಮೀನು ಜಾರಿ ಮಾಡಿದೆ. ಲೋಕಾಯುಕ್ತ ದಾಳಿ ಬಳಿಕ ಮಾಡಾಳ್‌ ವಿರೂಪಾಕ್ಷಪ್ಪ ತಲೆಮರೆಸಿಕೊಂಡಿದ್ದರು.

ಹೈಲೈಟ್ಸ್‌:

  • ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಆರೋಪ: ಮಾಡಾಳ್ ವಿರೂಪಾಕ್ಷಪ್ಪಗೆ ಹೈಕೋರ್ಟ್ ನಿಂದ ಮಧ್ಯಂತರ ನಿರೀಕ್ಷಣಾ ಜಾಮೀನು.
  • ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆಎಸ್‌ಡಿಎಲ್) ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿಂತೆ ಬಂಧನ ಭೀತಿಯಲ್ಲಿದ್ದ ಮಾಡಾಳ್‌.
  • ನಾಲ್ಕೈದು ದಿನದಿಂದ ನಾಪತ್ತೆಯಾಗಿದ್ದ ಅವರಿಗೆ ಹೈಕೋರ್ಟ್ ಮಂಗಳವಾರ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು.
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Madal Virupakshappa
ಮಾಡಾಳ್‌ ವಿರೂಪಾಕ್ಷಪ್ಪ
ಬೆಂಗಳೂರು: ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ದಾಳಿಯ ಬಳಿಕ ನಾಪತ್ತೆಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಹೈಕೋರ್ಟ್ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿದೆ.
ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆಎಸ್‌ಡಿಎಲ್) ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿಂತೆ ಚನ್ನಗಿರಿ ವಿಧಾನಸಭೆ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧನದ ಭೀತಿಯಲ್ಲಿದ್ದಾರೆ.

ಸದ್ಯ ನಾಪತ್ತೆಯಾಗಿದ್ದ ಅವರಿಗೆ ಹೈಕೋರ್ಟ್ ಮಂಗಳವಾರ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಮಾಡಾಳ್ ವಿರೂಪಾಕ್ಷಪ್ಪ ಅವರು ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತುರ್ತಾಗಿ ವಿಚಾರಣೆ ಮಾಡುವಂತೆ ಅವರ ಪರ ವಕೀಲರು ಮನವಿ ಮಾಡಿದ್ದರು.

Madal Virupakshappa: ಬಿಜೆಪಿಯಿಂದ ಮಾಡಾಳ್‌ ವಿರೂಪಾಕ್ಷಪ್ಪ ಉಚ್ಚಾಟನೆ? ಕುಟುಂಬಕ್ಕೂ ಕೈತಪ್ಪಲಿದೆ ಟಿಕೆಟ್‌!

ಬಂಧಿಸಿದರೇ ಐದು ಲಕ್ಷ ಬಾಂಡ್‌ ಪಡೆದು ಬಿಡುಗಡೆ ಮಾಡಬೇಕು

ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಂಧನ‌ ಮಾಡಿದರೆ, ಐದು ಲಕ್ಷ ರೂಪಾಯಿ ವೈಯಕ್ತಿಕ ಬಾಂಡ್ ಹಾಗೂ ಅಷ್ಟೇ ಮೊತ್ತಕ್ಕೆ ಇಬ್ಬರ ಭದ್ರತಾ ಖಾತರಿ ಪಡೆದು ಬಿಡುಗಡೆ ಮಾಡಬೇಕು‌ ಎಂದು ನ್ಯಾಯಾಲಯ ಆದೇಶದಲ್ಲಿ ಉಲ್ಲೇಖ ಮಾಡಿದೆ.

ಮಾರ್ಚ್‌ 17ಕ್ಕೆ ವಿಚಾರಣೆ ಮುಂದೂಡಿಕೆ

ನಿರೀಕ್ಷಣಾ ಜಾಮೀನು ಆದೇಶ ಪ್ರತಿ ದೊರೆತ 48 ಗಂಟೆಯೊಳಗೆ ಮಾಡಾಳ್ ವಿರೂಪಾಕ್ಷಪ್ಪ ಅವರು ತನಿಖಾಧಿಕಾರಿ ಮುಂದೆ ಶರಣಾಗತಿಯಾಗಬೇಕು. ಸಾಕ್ಷ್ಯಗಳನ್ನು ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಬೆದರಿಸಬಾರದು ಎಂದೂ ಸೂಚಿಸಿದೆ. ತನಿಖಾಧಿಕಾರಿಗಳು ತನಿಖಾ ವರದಿಯನ್ನು ಸಲ್ಲಿಸಬೇಕು ಎಂದು ನಿರ್ದೇಶಿಸಿ ವಿಚಾರಣೆಯನ್ನು ಮಾ.17ಕ್ಕೆ ಮುಂದೂಡಿದೆ.

ಐದು ದಿನಗಳಿಂದ ತಲೆಮರೆಸಿಕೊಂಡಿರುವ ಮಾಡಾಳ್‌ ವಿರೂಪಾಕ್ಷಪ್ಪ
ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ನಿಗಮ (ಕೆಎಸ್‌ಡಿಎಲ್‌) ಟೆಂಡರ್‌ ಸಂಬಂಧಿಸಿದಂತೆ ಗುರುವಾರ ಮಾಡಾಳ್‌ ಪುತ್ರ ಪ್ರಶಾಂತ್‌ ಮಾಡಾಳ್‌ ಅವರು ಲಂಚ ಸ್ವೀಕರಿಸುವ ಸಂದರ್ಭದಲ್ಲಿ ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದರು. ಆ ಬಳಿಕ ವಿರೂಪಾಕ್ಷಪ್ಪ ತಲೆ ಮರೆಸಿಕೊಂಡಿದ್ದರು. ಮನೆ, ಕಚೇರಿಗೆ ನೋಟಿಸ್‌ ಕಳಿಸಿದ್ದರು. ಮಾತ್ರವಲ್ಲದೇ ಎಲ್ಲೆಡೆ ಲೋಕಾಯುಕ್ತ ಪೊಲೀಸ್‌ ಶಾಸಕರನ್ನು ಬಂಧಿಸಲು ಕಾರ್ಯಾಚರಣೆ ನಡೆಸುತ್ತಿದ್ದರು.

Madal Virupakshappa: ಶಾಸಕ ಮಾಡಾಳ್‌ ವಿದೇಶಕ್ಕೆ ಪರಾರಿಯಾಗಲು ಸಿದ್ಧತೆ; ಎಲ್ಲಾ ವಿಮಾನ ನಿಲ್ದಾಣಗಳಿಗೆ ಲೋಕಾಯುಕ್ತ ಮಾಹಿತಿ
ಬೇಲ್‌ಗಾಗಿ ಕಾದುಕುಳಿದ್ದ ಮಾಡಾಳ್‌
ಒಂದು ವೇಳೆ ಬಂಧನವಾಗಿ ಬೇಲ್‌ ಸಿಗದಿದ್ದರೆ ಜೈಲು ಸೇರಬೇಕಾಗುತ್ತದೆ ಎಂಬ ಭಯದಿಂದ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಹೈಕೋರ್ಟ್‌ಗೆ ತನ್ನ ವಕೀಲರ ಮೂಲಕ ಸೋಮವಾರ ಜಾಮೀನು ಅರ್ಜಿ ಸಲ್ಲಿಸಿದ್ದರು. ಸದ್ಯ ಜಾಮೀನು ಮಂಜುರಾಗಿದ್ದು, ಮಂಗಳವಾರ ಅಥವಾ ಬುಧವಾರದೊಳಗೆ ಶಾಸಕ ಮಾಡಾಳ್‌ ಲೋಕಾಯುಕ್ತ ಪೊಲೀಸರ ಮುಂದೆ ಹಾಜರಾಗುವಸಾಧ್ಯತೆ ಇದೆ.


ಮಾಡಾಳ್‌ ಕುಟುಂಬ ಸದಸ್ಯರ ತನಿಖೆ; 2ನೇ ಮಗ ನ್ಯಾಯಾಂಗ ಬಂಧನ
ಸದ್ಯ ಮಾಡಾಳ್‌ ವಿರೂಪಾಕ್ಷಪ್ಪ ಅವರ ಎರಡನೇ ಮಗ ಪ್ರಶಾಂತ್‌ ಮಾಡಾಳ್‌ ಮತ್ತು ಆತನ ಪತ್ನಿ, ಮೊದಲ ಮಗ ಮಲ್ಲಿಕಾರ್ಜುನ ಮಾಡಾಳ್‌ ಅವರನ್ನು ಲೋಕಾಯುಕ್ತ ಪೊಲೀಸರು ತನಿಖೆಗೊಳಪಡಿಸಿದ್ದಾರೆ. ಎರಡನೇ ಮಗ ಪ್ರಶಾಂತ್‌ ಅವರು ಕೋರ್ಟ್‌ ಸೂಚನೆ ಮೇರೆಗೆ ನ್ಯಾಯಾಂಗ ಬಂಧನದಲ್ಲಿದ್ದಾರೆ. ಮಾಡಾಳ್‌ ವಿರೂಪಾಕ್ಷಪ್ಪ ಅವರ ಮೇಲೆ ಲಂಚ ಸ್ವೀಕಾರ, ಅಕ್ರಮ ಆಸ್ತಿ ಸಂಪಾದನೆ ಎರಡು ಪ್ರಕರಣಗಳು ದಾಖಲಾಗಿವೆ.
ಲೇಖಕರ ಬಗ್ಗೆ
ಇರ್ಷಾದ್ ಉಪ್ಪಿನಂಗಡಿ
ವಿಜಯ ಕರ್ನಾಟಕ ಡಿಜಿಟಲ್ ವಿಭಾಗದಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ದೃಶ್ಯ ಹಾಗೂ ಡಿಜಿಟಲ್ ಮಾಧ್ಯಮ ವರದಿಗಾರಿಕೆಯಲ್ಲಿ 12 ವರ್ಷಗಳ ಅನುಭವ ಹೊಂದಿದ್ದಾರೆ. ಸಿನಿಮಾ ನೋಡುವುದು, ಪುಸ್ತಕ ಓದುವುದು, ಸಮಯ ಸಿಕ್ಕಾಗ ಸುತ್ತಾಟ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ