ಆ್ಯಪ್ನಗರ

ಪಂಚಭೂತಗಳಲ್ಲಿ ಲೀನರಾದ ಖಡಕ್ ಆಫೀಸರ್ ಮಧುಕರ್ ಶೆಟ್ಟಿ

ಸ್ವಗ್ರಾಮವಾದ ಕುಂದಾಪುರ ತಾಲೂಕಿನ ಯಡಾಡಿ ಗ್ರಾಮದಲ್ಲಿ ಸಕಲ ಸರಕಾರಿ ಗೌರವದೊಂದಿಗೆ ಖಡಕ್ ಅಧಿಕಾರಿ ಶೆಟ್ಟಿ ಅವರ ಅಂತ್ಯಸಂಸ್ಕಾರ ನೆರವೇರಿದ್ದು, ಅವರ ಸಹೋದರ ಮುರಳೀ ಶೆಟ್ಟಿ ಅಗ್ನಿಸ್ಪರ್ಶ ಮಾಡಿದರು.

Vijaya Karnataka Web 30 Dec 2018, 2:32 pm
ಬೆಂಗಳೂರು: ಎಚ್1 ಎನ್ 1 ಸೋಂಕಿನಿಂದ ಮೃತಪಟ್ಟ ರಾಜ್ಯದ ಖಡಕ್ ಐಪಿಎಸ್ ಅಧಿಕಾರಿ ಡಿಐಜಿ ಮಧುಕರ್ ಶೆಟ್ಟಿ (47) ಅವರ ಅಂತ್ಯಸಂಸ್ಕಾರ ಧಾರ್ಮಿಕ ವಿಧಿವಿಧಾನಗಳ ಪ್ರಕಾರ ನೆರವೇರಿತು.
Vijaya Karnataka Web shetty


ಸ್ವಗ್ರಾಮವಾದ ಕುಂದಾಪುರ ತಾಲೂಕಿನ ಯಡಾಡಿ ಗ್ರಾಮದಲ್ಲಿ ಸಕಲ ಸರಕಾರಿ ಗೌರವದೊಂದಿಗೆ ಖಡಕ್ ಅಧಿಕಾರಿ ಶೆಟ್ಟಿ ಅವರ ಅಂತ್ಯಸಂಸ್ಕಾರ ನೆರವೇರಿದ್ದು, ಅವರ ಸಹೋದರ ಮುರಳಿ ಶೆಟ್ಟಿ ಅಗ್ನಿ ಸ್ಪರ್ಶ ಮಾಡಿದರು.

ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಸಾವಿರಾರು ಮಂದಿ ಆಗಮಿಸಿದ್ದು, ಅಮೆರಿಕದಲ್ಲಿರುವ ಅವರ ಸಹೋದರನ ಆಗಮನ ಹಿನ್ನೆಲೆಯಲ್ಲಿ ಅಂತ್ಯಸಂಸ್ಕಾರ ಕೊಂಚ ವಿಳಂಬವಾಯಿತು.

ಸಚಿವ ಯು.ಟಿ.ಖಾದರ್ ಹಾಗೂ ಶಾಕರ ಹಾಲಾಡಿ ಶ್ರೀನಿವಾಸ ಶೆಟ್ಟಿ ಸೇರಿದಂತೆ ರಾಜಕೀಯ ಗಣ್ಯರು ಮಧುಕರ್ ಶೆಟ್ಟಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.

ಅಂತಿಮ ದರ್ಶನಕ್ಕೆ ಧಾವಿಸಿದ ಗುಪ್ತಶೆಟ್ಟಿಹಳ್ಳಿ ಗ್ರಾಮಸ್ಥರು

ಚಿಕ್ಕಮಗಳೂರು: ದಕ್ಷ ಹಾಗೂ ಪ್ರಾಮಾಣಿಕ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಅವರ ಅಂತಿಯ ದರ್ಶನ ಪಡೆಯಲು ಗುಪ್ತಶೆಟ್ಟಿಹಳ್ಳಿ ಗ್ರಾಮದ ಮಹಿಳೆಯರು, ಮಕ್ಕಳು ಹಾಗೂ ವೃದ್ದರು ಸೇರಿದಂತೆ 50ಕ್ಕೂ ಹೆಚ್ಚು ಜನರು ಕುಂದಾಪುರ ತಾಲೂಕಿನ ಯಡಾಡಿ ಗ್ರಾಮಕ್ಕೆ ತೆರಳಿದ್ದಾರೆ.

ಮಧುಕರ್ ಶೆಟ್ಟಿ ಅವರು ಚಿಕ್ಕಮಗಳೂರು ಜಿಲ್ಲೆಯ ಎಸ್‌ಪಿಯಾಗಿದ್ದ ಸಂದರ್ಭದಲ್ಲಿ ನಿರಾಶ್ರಿತರಾದ ಅರಣ್ಯವಾಸಿಗಳಿಗೆ ಸಹಾಯ ಹಸ್ತ ಚಾಚಿದ್ದರು. ವಸತಿ ಸೌಲಭ್ಯ ಕಲ್ಪಿಸಿಕೊಟ್ಟಿದ್ದರು. ಮಧಕರ್ ಶೆಟ್ಟಿ ಬಗ್ಗೆ ಅಪಾರ ಅಭಿಮಾನವಿಟ್ಟಿದ್ದ ಗ್ರಾಮಸ್ಥರು, ತಮ್ಮೂರಿಗೆ ಅವರ ಹೆಸರನ್ನೇ ಇಟ್ಟಿದ್ದರು. ನೆಚ್ಚಿನ ಅಧಿಕಾರಿಯನ್ನು ಕೊನೆಯ ಬಾರಿ ಕಣ್ತುಂಬಿಕೊಳ್ಳಲು ಗ್ರಾಮಸ್ಥರು ಯಡಾಡಿಗೆ ತೆರಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ