ಆ್ಯಪ್ನಗರ

ಮಡಿವಾಳ ಸ್ಪೋಟ ಪ್ರಕರಣ: ಶಂಕಿತ ಉಗ್ರನ ಬಂಧನ

2008ರಲ್ಲಿ ನಡೆದಿದ್ದ ಸ್ಪೋಟ ಪ್ರಕರಣದ ಶಂಕಿತ ಆರೋಪಿಯಾಗಿರುವ ಉಗ್ರ ಕಳೆದ 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ.

Vijaya Karnataka Web 11 Oct 2018, 8:02 am
ಬೆಂಗಳೂರು: ನಗರದ ಮಡಿವಾಳದಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಾಚರಣೆ ನಡೆಸುತ್ತಿದ್ದ ಸಿಸಿಬಿ ಪೊಲೀಸರು ಶಂಕಿತ ಉಗ್ರ ಸಲೀಂ ಎಂಬಾತನನ್ನು ಬಂಧಿಸಿದ್ದಾರೆ.
Vijaya Karnataka Web Blast


2008ರಲ್ಲಿ ನಡೆದಿದ್ದ ಸ್ಪೋಟ ಪ್ರಕರಣದ ಪ್ರಮುಖ ಆರೋಪಿ ಸಲೀಂ ಎನ್ನಲಾಗುತ್ತಿದ್ದು, ಕಳೆದ 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ.

ಆತನಿಗಾಗಿ ಶೋಧ ನಡೆಸುತ್ತಿದ್ದ ಪೊಲೀಸರಿಗೆ ಕೊನೆಗೂ ಯಶಸ್ಸು ಸಿಕ್ಕಿದ್ದು ಕೇರಳದಲ್ಲಿ ಆತನನ್ನು ಬಂಧಿಸಲಾಗಿದೆ. ಕಣ್ಣೂರಿನಲ್ಲಿ ತಲೆಮರೆಸಿಕೊಂಡಿದ್ದ ಈತನಿಗೆ ಆಶ್ರಯ ನೀಡಿದ್ದವನ ಬೆನ್ನು ಬಿದ್ದಾಗ ಸುಳಿವು ಸಿಕ್ಕಿತ್ತು.

ಸಿಸಿಬಿ ಎಸಿಪಿ ಸುಬ್ರಮಣಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿತ್ತು.

ಈತ ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ ಶಂಕೆ ಇದ್ದು ಎನ್ಐಎ ಕೂಡ ಸಲೀಂ ಹುಡುಕಾಟದಲ್ಲಿತ್ತು.

2008ರಲ್ಲಿ ನಗರದಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟದ ಮಾಸ್ಟರ್ ಮೈಂಡ್ ಈತನೇ ಎಂಬ ಬಲವಾದ ಅನುಮಾನವಿದೆ.

ಜುಲೈ 25, 2008ರಂದು ಮಡಿವಾಳ ಸೇರಿದಂತೆ ನಗರದ ಹಲವೆಡೆ ಒಟ್ಟು 9 ಬಾಂಬ್ ಸ್ಟೋಟಗೊಂಡಿದ್ದವು. ಸ್ಪೋಟದಲ್ಲಿ ಒಬ್ಬ ಮಹಿಳೆ ಸಾವನ್ನಪ್ಪಿ, 20 ಜನರು ಗಾಯಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ