ಆ್ಯಪ್ನಗರ

ಮಹದಾಯಿ ಅಂದ್ರೆ ಕಾಫಿ ಕುಡಿಸಿ ಕಳುಹಿಸಿದರು ಪ್ರಧಾನಿ : ದೇವೇಗೌಡ

ಮಹದಾಯಿ ಸಮಸ್ಯೆ ಪರಿಹಾರ ಮಾಡುವಂತೆ ಆಗ್ರಹಿಸಿ ಮನವಿ ಹಿಡಿದುಕೊಂಡು ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಹೋದರೆ ಕಾಫಿ ಕುಡಿಸಿ ಕಳುಹಿಸಿದರು ಎಂದು ಮಾಜಿ ಪ್ರಧಾನಿ ಎಚ್‌. ಡಿ. ದೇವೇಗೌಡ ಹೇಳಿದರು.

Vijaya Karnataka 23 Jan 2018, 6:00 am

ಮಂಗಳೂರು: ಮಹದಾಯಿ ಸಮಸ್ಯೆ ಪರಿಹಾರ ಮಾಡುವಂತೆ ಆಗ್ರಹಿಸಿ ಮನವಿ ಹಿಡಿದುಕೊಂಡು ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಹೋದರೆ ಕಾಫಿ ಕುಡಿಸಿ ಕಳುಹಿಸಿದರು ಎಂದು ಮಾಜಿ ಪ್ರಧಾನಿ ಎಚ್‌. ಡಿ. ದೇವೇಗೌಡ ಹೇಳಿದರು.

ಸೋಮವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, '' ಮಹದಾಯಿ ಪ್ರಕರಣಕ್ಕೆ ಸಂಬಂಧಿಸಿದಂತೆ 1996ರಲ್ಲಿ ದೊರಕಿರುವ ಆದೇಶದ ದಾಖಲೆಗಳನ್ನು ಅವರ ಮುಂದಿಟ್ಟೆ. ನಾನು ಎಷ್ಟೇ ಮಾತನಾಡಿದರೂ ಮೋದಿ ಮೌನವಾಗಿಯೇ ಇದ್ದರು. ಕಾಫಿ ಕೊಟ್ಟರಷ್ಟೇ,'' ಎಂದು ಬೇಸರ ವ್ಯಕ್ತಪಡಿಸಿದರು.

''ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ಕೇಂದ್ರ ಸಚಿವ ಅನಂತಕುಮಾರ್‌ ಹೆಗಡೆ ಅವರ ಬಗ್ಗೆ ಪ್ರಧಾನಿ ಮಾತನಾಡಲಿ. ನಾಲ್ಕು ಬಾರಿ ಮುಖ್ಯಮಂತ್ರಿಯಾಗಿ, ನಾಲ್ಕು ವರ್ಷದಿಂದ ಪ್ರಧಾನಿಯಾಗಿ ಅನುಭವ ಹೊಂದಿದ್ದಾರೆ. ಅವರು ತಮ್ಮ ಸಚಿವರು ಹೇಗೆ ಮಾತನಾಡಬೇಕು ಎಂದು ಸಲಹೆ ಕೊಡಬಹುದು,'' ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ