ಆ್ಯಪ್ನಗರ

ಮಹದಾಯಿ: ಬೆಂಗಳೂರು ಪ್ರತಿಭಟನೆ ವಾಪಸ್‌ ಪಡೆದ ರೈತರು

ಬೇಡಿಕೆ ಈಡೇರದಿದ್ದರೆ ಜನವರಿಯಲ್ಲಿ ಉಗ್ರ ಹೋರಾಟ ನಡೆಸಲು ನಿರ್ಧಾರ

Vijaya Karnataka Web 27 Dec 2017, 7:25 pm
ಬೆಂಗಳೂರು: ಮಹದಾಯಿ ಮತ್ತು ಕಳಸಾ ಬಂಡೂರಿ ಯೋಜನೆಗೆ ಒತ್ತಾಯಿಸಿ ಬೆಂಗಳೂರಿನ ಬಿಜೆಪಿ ಕಚೇರಿ ಎದುರು ಕಳೆದ ಐದು ದಿನಗಳಿಂದ ನಡೆಸುತ್ತಿದ್ದ ಪ್ರತಿಭಟನೆಯನ್ನು ರೈತರು ಹಿಂಪಡೆದಿದ್ದಾರೆ.
Vijaya Karnataka Web mahadayi farmer protest in bangalore called off
ಮಹದಾಯಿ: ಬೆಂಗಳೂರು ಪ್ರತಿಭಟನೆ ವಾಪಸ್‌ ಪಡೆದ ರೈತರು


ಜನವರಿಯೊಳಗೆ ಈ ಮಹದಾಯಿ ವಿವಾದವನ್ನು ಇತ್ಯರ್ಥಪಡಿಸಬೇಕು ಎಂದು ಮೂರು ರಾಜಕೀಯ ಪಕ್ಷಗಳಿಗೆ ರೈತರು ಎಚ್ಚರಿಕೆ ನೀಡಿದ್ದಾರೆ.

ಬುಧವಾರ ಮಹದಾಯಿ ಹೋರಾಟ ಹಲವಾರು ಬೆಳವಣಿಗೆಗಳನ್ನು ಕಂಡಿತು.

ರೈತರು ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲು ಮುಂದಾದರು. ರಾಜ್ಯಪಾಲರ ಭೇಟಿ ಸಾಧ್ಯವಾಗದೇ ಮನವಿ ಪತ್ರವನ್ನು ಕಾರ್ಯದರ್ಶಿಗಳಿಗೆ ಸಲ್ಲಿಸಲಾಯಿತು.

ಇಡೀ ಉತ್ತರ ಕರ್ನಾಟಕದಾದ್ಯಂತ ಮಹದಾಯಿ ಹೋರಾಟದ ಅಂಗವಾಗಿ ಬಂದ್‌ ಆಚರಿಸಲಾಯಿತು.

ಹೋರಾಟದ ಕುರಿತು ಮಾತನಾಡಿದ ರೈತರು, ಮೂರು ಪಕ್ಷಗಳು ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ಅವಕಾಶ ಮಾಡಿಕೊಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ, ಕಲಾವಿದರ ಸಂಘ ಕೂಡ ರೈತರಿಗೆ ಬೆಂಬಲ ವ್ಯಕ್ತಪಡಿಸಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ