ಆ್ಯಪ್ನಗರ

ಮಹದಾಯಿ ತೀರ್ಪು: ಸರ್ವಪಕ್ಷ ಸಭೆಗೆ ರಾಜ್ಯ ನಿರ್ಧಾರ

ಮಹದಾಯಿ ನದಿ ನೀರು ವ್ಯಾಜ್ಯ ಇತ್ಯರ್ಥ ಕುರಿತು 'ಮಹದಾಯಿ ನದಿ ನೀರು ಹಂಚಿಕೆ ನ್ಯಾಯಾಧಿಕರಣ' ನೀಡಿದ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವ ಬಗ್ಗೆ ಚರ್ಚಿಸಲು ಸರಕಾರ ಸದ್ಯದಲ್ಲೇ ಸರ್ವಪಕ್ಷ ಸಭೆ ಕರೆಯಲಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

Vijaya Karnataka 6 Sep 2018, 7:44 am
ಹೊಸದಿಲ್ಲಿ: ಮಹದಾಯಿ ನದಿ ನೀರು ವ್ಯಾಜ್ಯ ಇತ್ಯರ್ಥ ಕುರಿತು 'ಮಹದಾಯಿ ನದಿ ನೀರು ಹಂಚಿಕೆ ನ್ಯಾಯಾಧಿಕರಣ' ನೀಡಿದ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವ ಬಗ್ಗೆ ಚರ್ಚಿಸಲು ಸರಕಾರ ಸದ್ಯದಲ್ಲೇ ಸರ್ವಪಕ್ಷ ಸಭೆ ಕರೆಯಲಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.
Vijaya Karnataka Web Mahadayi


ಸುದ್ದಿಗಾರರ ಜತೆ ಮಾತನಾಡಿದ ಅವರು, ''ನ್ಯಾಯಾಧಿಕರಣದ ತೀರ್ಪು ತೃಪ್ತಿಕರವಾಗಿಲ್ಲ. ರಾಜ್ಯಕ್ಕೆ ಅನ್ಯಾಯವಾಗಿದೆ. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಇಲ್ಲವೇ ನ್ಯಾಯಾಧಿಕರಣದಲ್ಲಿ ಮೇಲ್ಮನವಿ ಸಲ್ಲಿಸುವ ಬಗ್ಗೆ ಚಿಂತನೆ ನಡೆಯುತ್ತಿದೆ. ರಾಜ್ಯಕ್ಕೆ 36.558 ಟಿಎಂಸಿ ನೀರು ಅಗತ್ಯವಾಗಿದೆ. ಆದರೆ ನ್ಯಾಯಾಧಿಕರಣದ ತೀರ್ಪು ಈ ಬೇಡಿಕೆಯನ್ನು ಪೂರ್ಣಗೊಳಿಸಿಲ್ಲ. ಹಾಗಾಗಿ ಕಾನೂನಾತ್ಮಕವಾಗಿ ಹೋರಾಟ ನಡೆಸಲಾಗುವುದು,'' ಎಂದರು.

ತಮಿಳುನಾಡಿನ ಒಪ್ಪಿಗೆ ಬೇಕಿಲ್ಲ:


''ಕಾವೇರಿ ನದಿ ಪಾತ್ರದ ಮೇಕೆದಾಟುವಿನಲ್ಲಿ ಜಲಾಶಯ ನಿರ್ಮಾಣ ಮಾಡುವುದರಿಂದ ನ್ಯಾಯಾಧಿಕರಣ ಅಥವಾ ಸುಪ್ರೀಂ ಕೋರ್ಟ್‌ ತೀರ್ಪಿನ ಉಲ್ಲಂಘನೆಯಾಗುವುದಿಲ್ಲ. ತಮಿಳುನಾಡಿಗೆ ಹರಿಯುವ ನೀರಿನಲ್ಲೂ ಯಾವುದೇ ತೊಡಕುಂಟಾಗದು,'' ಎಂದು ಶಿವಕುಮಾರ್‌ ಪ್ರತಿಪಾದಿಸಿದರು.

'' ಜಲಾಶಯಕ್ಕೆ ತಮಿಳುನಾಡಿನ ಒಪ್ಪಿಗೆ ಪಡೆಯುವ ಅಗತ್ಯವಿಲ್ಲ. ಆದರೆ ಅದು ಎತ್ತಿರುವ ಆತಂಕಗಳನ್ನು ಸೌಹಾರ್ದಯುತವಾಗಿ ಚರ್ಚಿಸಲು ಸರಕಾರ ರಾಜ್ಯ ಸಿದ್ಧವಿದೆ. ಈ ಬಗ್ಗೆ ತಮಿಳುನಾಡು ಸಿಎಂ ಕೆ.ಪಳನಿಸ್ವಾಮಿ ಅವರಿಗೆ ಭರವಸೆ ನೀಡಲಾಗಿದೆ,'' ಎಂದು ಅವರು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ