ಆ್ಯಪ್ನಗರ

‘ಕುಣಿಯೋಕ್ ಆಗದವರು ನೆಲ ಡೊಂಕೆಂದರು’ ಮಹಾ ಡ್ರಾಮಕ್ಕೆ ಪ್ರಕಾಶ್ ರಾಜ್ ವ್ಯಾಖ್ಯಾನ

ಮಹಾರಾಷ್ಟ್ರ ರಾಜಕೀಯ ಕುತೂಹಲದ ಘಟ್ಟಕ್ಕೆ ಬಂದು ತಲುಪಿದ್ದು ಹಲವು ರಾಜಕೀಯ ಪಕ್ಷದ ಮುಖಂಡರು ಪ್ರತಿಕ್ರಿಯೆ ನೀಡಿದ್ದಾರೆ. ನಟ ಹಾಗೂ ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಟ್ವಿಟ್ಟರ್‌ನಲ್ಲಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Vijaya Karnataka Web 26 Nov 2019, 6:58 pm
ಬೆಂಗಳೂರು: ಮಹಾರಾಷ್ಟ್ರದ ರಾಜಕೀಯ ಮಹಾ ಡ್ರಾಮ ಕುತೂಹಲಕಾರಿ ಘಟ್ಟಕ್ಕೆ ಬಂದು ತಲುಪಿದ್ದು ಸಾಮಾಜಿಕ ಜಾಲತಾಣಗಳಲ್ಲೂ ಸದ್ದಾಗುತ್ತಿದೆ. ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ರಾಜ್ ಟ್ವಿಟ್ಟರ್‌ನಲ್ಲಿ ಮಹಾರಾಷ್ಟ್ರ ರಾಜಕೀಯ ಸರ್ಕಸ್ ಕುರಿತಾಗಿ ಪ್ರತಿಕ್ರಿಯೆ ನೀಡಿದ್ದು ಕುಣಿಯೋಕ್ ಆಗದವರು ನೆಲ ಡೊಂಕೆಂದರು, ನಾಚಿಕೆ ಆಗಲ್ವೇ ಎಂದು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
Vijaya Karnataka Web maharashtra politics political leaders reaction
‘ಕುಣಿಯೋಕ್ ಆಗದವರು ನೆಲ ಡೊಂಕೆಂದರು’ ಮಹಾ ಡ್ರಾಮಕ್ಕೆ ಪ್ರಕಾಶ್ ರಾಜ್ ವ್ಯಾಖ್ಯಾನ


ನೃತ್ಯಗಾರ ವೇದಿಕೆಯಲ್ಲಿ ಕುಣಿಯಲು ಸಾಧ್ಯವಿಲ್ಲ ಎಂದಾದರೆ ವೇದಿಕೆಯಿಂದ ಕೆಳಗೆ ಇಳಿಯಬೇಕು ಎಂದು ಟ್ವೀಟ್ ಮಾಡಿದ್ದಾರೆ. ಇದಕ್ಕೂ ಮುನ್ನ ಮಹಾರಾಷ್ಟ್ರ ಬೆಳವಣಿಗೆಗಳ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಜೊತೆಗೆ ಮಾಧ್ಯಮಗಳನ್ನು ಪರೋಕ್ಷವಾಗಿ ತರಾಟೆಗೆ ತೆಗೆದುಕೊಂಡಿದ್ದರು. ಪ್ರಕಾಶ್ ರಾಜ್ ಟ್ವೀಟ್‌ಗೆ ಹಲವು ನೆಟ್ಟಿಗರು ಪರ ಹಾಗೂ ವಿರೋಧವಾದ ಪ್ರತಿಕ್ರಿಯೆ ನೀಡಿದ್ದಾರೆ.


ಕಾಂಗ್ರೆಸ್ ಕೂಡಾ ಮಹಾರಾಷ್ಟ್ರ ರಾಜಕೀಯ ಬೆಳವಣಿಗೆಗಳ ಕುರಿತಾಗಿ ಪ್ರತಿಕ್ರಿಯೆ ನೀಡಿದ್ದು ಮಹಾರಾಷ್ಟ್ರದಲ್ಲಿ ನಾಳೆಯೇ ವಿಶ್ವಾಸಮತ ಯಾಚಿಸುವಂತೆ ಸುಪ್ರೀಂಕೋರ್ಟ್ ಸೂಚಿಸಿರುವುದು,ಮಹಾರಾಷ್ಟ್ರ ರಾಜ್ಯಪಾಲರು, ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಗೆ ಮಾಡಿದ ಕಪಾಳ ಮೋಕ್ಷವಾಗಿದೆ.ರಾತ್ರೋರಾತ್ರಿ ಸಭೆ ನಡೆಸಿ, ಸರ್ಕಾರ ರಚಿಸಿ, ಪ್ರಮಾಣ ವಚನ ಸ್ವೀಕರಿಸುವಂತಹ ತುರ್ತು ಏನಿತ್ತು ಎಂದು ಟ್ವಿಟ್ಟರ್‌ನಲ್ಲಿ ಪ್ರಶ್ನಿಸಿದ ಕರ್ನಾಟಕ ಕಾಂಗ್ರೆಸ್ ಬಿಜೆಪಿ ವಿರುದ್ಧ ಹರಿಹಾಯ್ದು ನೈತಿಕತೆ ಕಳೆದುಕೊಂಡಿದೆ ಎಂದಿದೆ.

'ಮಹಾ' ಬೃಹನ್ನಾಟಕ್ಕೆ ಬೊಂಬಾಟ್ ಟ್ವಿಸ್ಟ್! ಬಾಲಿವುಡ್‌ನ ಎಲ್ಲಾ ಟ್ರಿಕ್ಸ್‌ ಮೀರಿಸಿದ ಪಾಲಿ'ಟ್ರಿಕ್ಸ್'..!


ಇದೇ ವಿಚಾರವಾಗಿ ಮಾಜಿ ಸಿಎಂ ಎಚ್‌. ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, ದೇವೇಂದ್ರ ಫಡ್ನವೀಸ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು ತಿಳಿದು ಬೇಸರವಾಯಿತು. ಹಾಗೆ ನೋಡಿದರೆ ಅವರ ಪದತ್ಯಾಗ ನನಗೆ ಖುಷಿ ಕೊಡಬೇಕಿತ್ತು. ಯಾಕೆಂದರೆ ನನ್ನ ಸರ್ಕಾರ ಕೆಡವಲು ಎಲ್ಲ ರೀತಿಯ ವ್ಯವಸ್ಥೆ ಮಾಡಿದ್ದು ಅವರೇ ಅಲ್ಲವೇ? ಅನರ್ಹರಿಗೆ ಆತಿಥ್ಯ ಕೊಟ್ಟವರೂ ಅವರೇ. ಈಗ ಅವರಿಗೆ ಕಾಲ ಎಂಥ ಉತ್ತರ ಕೊಟ್ಟಿತು ಎಂದು ಬೇಸರವಾಗುತ್ತಿದೆ.



2007ರ ಕುಮಾರಣ್ಣ ಆಗಲಿಲ್ಲ ಅಜಿತ್ ಪವಾರ್! 2018ರ ಯಡಿಯೂರಪ್ಪ ಆಗಿಬಿಟ್ರು ಫಡ್ನವಿಸ್!

ಮಾಡಿದ್ದುಣ್ಣೊ ಮಹರಾಯ ಎಂಬುದು ಲೋಕ ರೂಢಿ. ಮಾಡಿದ್ದರ ಪ್ರತಿಫಲವನ್ನು ಫಡ್ನವೀಸ್ ಉಣ್ಣುತ್ತಿದ್ದಾರೆ. (BSY ಕೂಡ ಉಣ್ಣುತ್ತಾರೆ) ಕಾಲಚಕ್ರಕ್ಕೆ ಸಿಲುಕಿ ನಲುಗಿದ್ದಾರೆ. ಅಧಿಕಾರ ದಾಹಿ ಬಿಜೆಪಿ ತನ್ನ ಕೃತ್ಯಗಳಿಗೆ ತಾನೇ ಬೆಲೆ ತೆರುತ್ತಿದೆ. ಅಧಿಕಾರದ ಹಪಹಪಿ, ಸರ್ಕಾರಗಳನ್ನು ಕೆಡವುವುದು, ಚುನಾವಣೆ ತರುವುದನ್ನು ಬಿಜೆಪಿ ಇನ್ನಾದರೂ ಬಿಡಲಿ ಎಂದಿದ್ದಾರೆ.


ಮಂಗಳವಾರ ನಡೆದ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಸಿಎಂ ದೇವೇಂದ್ರ ಫಡ್ನವೀಸ್ ಹಾಗೂ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ರಾಜೀನಾಮೆ ಸಲ್ಲಿಸಿದ್ದಾರೆ. ಸರಕಾರ ರಚನೆಗೆ ಶಿವಸೇನೆ, ಎನ್‌ಸಿಪಿ ಹಾಗೂ ಕಾಂಗ್ರೆಸ್ ಹಕ್ಕು ಮಂಡನೆ ಮಾಡಲಿದ್ದು ಬುಧವಾರ ಬೆಳಗ್ಗೆ ಎಂಟು ಗಂಟೆಗೆ ಮಹಾರಾಷ್ಟ್ರ ವಿಧಾನಸಭಾ ಅಧಿವೇಶನ ನಡೆಯಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ