ಆ್ಯಪ್ನಗರ

ಮಹಾರಾಷ್ಟ್ರ ರಸ್ತೆನೋ ಕರ್ನಾಟಕ ರಸ್ತೆನೋ? ಟ್ವಿಟ್ಟರ್‌ನಲ್ಲಿ ಸಿದ್ದು v/s ಸಿಟಿ ರವಿ

ಮಹಾರಾಷ್ಟ್ರದ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ಸಮೀಕ್ಷೆಗಳು ಭವಿಷ್ಯ ನುಡಿದಿರುವ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಮತದಾರರ ನಡೆ ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ.

Vijaya Karnataka Web 22 Oct 2019, 7:22 pm
ಬೆಂಗಳೂರು: ಮಹಾರಾಷ್ಟ್ರ ಹಾಗೂ ಹರಿಯಾಣದಲ್ಲಿ ಬಿಜೆಪಿ ಮತ್ತೆ ಅಧಿಕಾರದ ಗದ್ದುಗೆ ಏರುತ್ತೆ ಎಂದು ಸಮೀಕ್ಷೆಗಳು ಭವಿಷ್ಯ ನುಡಿದಿರುವ ಬೆನ್ನಲ್ಲೇ ಕಾಂಗ್ರೆಸ್ ಇವಿಎಂನತ್ತ ಬೊಟ್ಟು ಮಾಡಲು ಶುರುಮಾಡಿದೆ. ಸಮೀಕ್ಷೆ ಮರುದಿನವೇ ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಮಹಾರಾಷ್ಟ್ರದ ರಸ್ತೆಗಳ ಬಗ್ಗೆ ತಗಾದೆ ಎತ್ತಿ ಜನ ಯಾಕೆ ಮತ ನೀಡುತ್ತಾರೆ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಟ್ವಿಟ್ಟರ್‌ನಲ್ಲೇ ಪ್ರತಿಕ್ರಿಯಿಸಿರೋ ಸಚಿವ ಸಿಟಿ ರವಿ, ಕರ್ನಾಟಕದ ರಸ್ತೆಯ ದುಸ್ಥಿತಿಯಿಂದ ಪರದಾಡಿದ ಜನ ಕಾಂಗ್ರೆಸ್ ತಿರಸ್ಕಾರ ಮಾಡಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.
Vijaya Karnataka Web siddaramayha and ct ravi


ಮಹಾರಾಷ್ಟ್ರ ಚುನಾವಣಾ ಪ್ರಚಾರಕ್ಕೆಂದು ಹೋದಾಗ ಅಲ್ಲಿನ ಸರಕಾರ ಐದು ವರ್ಷ ಏನು ಅಭಿವೃದ್ಧಿ ಮಾಡಿದೆ ಎಂಬ ಬಗ್ಗೆ ಅನುಮಾನ ಮೂಡಿತು. ಹೈದರಾಬಾದ್- ಪೂನಾ ಹೆದ್ದಾರಿಯಲ್ಲಿ ವಾಹನ ಸಂಚರಿಸಲು ಪರದಾಡಬೇಕಿದೆ. ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರ ತವರು ರಾಜ್ಯದ ಸ್ಥಿತಿಯೇ ಹೀಗೆ. ಆದರೂ ಜನ ಬಿಜೆಪಿಗೆ ಮತ ನೀಡುತ್ತಾರೆಯೇ? ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.


ಮಹಾರಾಷ್ಟ್ರ ಚುನಾವಣೆ: ಸಿಎಂ ಬಿಎಸ್‌ವೈ ಭರ್ಜರಿ ಪ್ರಚಾರ

ಇದಕ್ಕೆ ತಿರುಗೇಟು ನೀಡಿರುವ ಸಚಿವ ಸಿಟಿ ರವಿ, ದೂರದ ಮಹಾರಾಷ್ಟ್ರ ಬಿಡಿ, ಬೆಂಗಳೂರಿನಿಂದ 220 ಕಿ.ಮೀ. ಹತ್ತಿರದ ಸಕಲೇಶಪುರದಿಂದ ಗುಂಡ್ಯದವರೆಗೆ ಪ್ರಯಾಣ ಮಾಡೋಣ ಬನ್ನಿ. ಪ್ರಪಾತಗಳೇ ತುಂಬಿರುವ ಈ ರಸ್ತೆಯಲ್ಲಿ ಪ್ರಯಾಣ ಮಾಡಿದಾಗ ತಿಳಿಯುತ್ತದೆ ನಿಮಗೆ ಸಂಚಾರ ಮಾಡುವ ಜನತೆ ಎಷ್ಟು ಪರದಾಡುತ್ತಾರೆ ಮತ್ತು ಕಾಂಗ್ರೆಸ್ ಪಕ್ಷವನ್ನು ಏಕೆ ತಿರಸ್ಕರಿಸಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.


ಸಿದ್ದರಾಮಯ್ಯ ಮಹಾರಾಷ್ಟ್ರದ ಸಾಂಗ್ಲಿ ವಿಧಾನಸಭೆ ಕ್ಷೇತ್ರದಲ್ಲಿ ಆಯೋಜಿಸಿರುವ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದರು. ಜೊತೆಗೆ ಕನ್ನಡಿಗರು ಹೆಚ್ಚಿರುವ ಪ್ರದೇಶಗಳಲ್ಲಿ ಸಿದ್ದರಾಮಯ್ಯ ಕಾಂಗ್ರೆಸ್ ಪರವಾಗಿ ಪ್ರಚಾರ ನಡೆಸಿದ್ದರು.

ಕಾಂಗ್ರೆಸ್‌ನಿಂದಲೂ ಮಹಾರಾಷ್ಟ್ರದಲ್ಲಿ ಪ್ರಚಾರ! ‘ಕೈ’ ಇಬ್ಬಗೆ ನೀತಿಗೆ ವಿರೋಧ

ಸೋಮವಾರ ನಡೆದ ಮಹಾರಾಷ್ಟ್ರ ಹಾಗೂ ಹರಿಯಾಣ ಮತದಾನದ ಬಳಿಕ ಪ್ರಕಟಗೊಂಡಿರುವ ಚುನಾವಣೋತ್ತರ ಸಮೀಕ್ಷೆಗಳು ಬಿಜೆಪಿ ಅಧಿಕಾರಕ್ಕೆ ಮತ್ತೆ ಬರುತ್ತದೆ ಎಂದು ಭವಿಷ್ಯ ನುಡಿದಿವೆ. ಅಕ್ಟೋಬರ್ 24 ರಂದು ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ