ಆ್ಯಪ್ನಗರ

ಸಂಕ್ರಾಂತಿ ಸಂಭ್ರಮ: ಗೋಪೂಜೆ ನೆರವೇರಿಸಿದ ಬಿಎಸ್‌ವೈ

ಸಂಕ್ರಾಂತಿ ಹಬ್ಬದ ಪ್ರಯುಕ್ತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ತಮ್ಮ ಕಾವೇರಿ ನಿವಾಸದಲ್ಲಿ ಗೋಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ ಕೂಡಾ ಉಪಸ್ಥಿತರಿದ್ದರು.

Vijaya Karnataka Web 14 Jan 2021, 10:22 am
ಬೆಂಗಳೂರು: ಇಂದು ಎಲ್ಲೆಡೆ ಮಕರ ಸಂಕ್ರಾಂತಿ ಸಂಭ್ರಮ. ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಗೋಪೂಜೆ ಮಾಡುವ ಮೂಲಕ ಆಚರಣೆ ಮಾಡಿದರು. ಅಲ್ಲದೆ ನಾಡಿನ ಜನತೆಗೆ ಸಂಕ್ರಾಂತಿ ಶುಭಾಶಯವನ್ನೂ ಕೋರಿದರು.
Vijaya Karnataka Web bsy


ಗುರುವಾರ ಸಂಕ್ರಾಂತಿ ಪ್ರಯುಕ್ತ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಬಿಎಸ್‌ ಯಡಿಯೂರಪ್ಪ ಗೋಪೂಜೆ ನೆರವೇರಿಸಿದರು. ಪ್ರತಿ ವರ್ಷ ಬಿಎಸ್‌ವೈ ಸಂಕ್ರಾಂತಿ ಹಬ್ಬದಂದು ಗೂಪೂಜೆ ನೆರವೇರಿಸುತ್ತಾರೆ. ಈ ವರ್ಷವೂ ರಾಜಕೀಯ ಜಂಜಾಟಗಳ ನಡುವೆ ಹಬ್ಬವನ್ನು ಆಚರಿಸಿದರು. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಾ:ಸಿ.ಎನ್.ಅಶ್ವತ್ಥ್ ನಾರಾಯಣ್ ಉಪಸ್ಥಿತರಿದ್ದರು.

ಹಗುರವಾಗಿ ಮಾತನಾಡಬೇಡಿ, ಅತೃಪ್ತ ಶಾಸಕರಿಗೆ ಬಿಎಸ್‌ವೈ ವಾರ್ನಿಂಗ್

ಹೊಸ ಬೆಳೆ, ಹೊಸ ಭರವಸೆಗಳನ್ನು ಹೊತ್ತುತರುವ ಸುಗ್ಗಿಕಾಲ ಸಂಕ್ರಾಂತಿಗೆ, ನಾಡಿನ ರೈತರ ಜೀವನದಲ್ಲಿ ವಿಶಿಷ್ಟವಾದ ಸ್ಥಾನವಿದೆ. ರೈತರ ಬಾಳಿನಲ್ಲಿ ಸುಗ್ಗಿ ಸದಾ ಇರಬೇಕು ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೆ ತಂದಿವೆ. ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಮುನ್ನಡೆಯುತ್ತಿದೆ ಎಂದು ಸಂಕ್ರಾಂತಿ ಶುಭಾಶಯವನ್ನು ಬಿಎಸ್‌ವೈ ಕೋರಿದ್ದಾರೆ.


ಇನ್ನು ಗೃಹ ಸಚಿವ ಅಮಿತ್‌ ಶಾ ಕೂಡಾ ಕರ್ನಾಟಕದ ಜನತೆಗೆ ಸಂಕ್ರಾಂತಿ ಹಬ್ಬದ ಶುಭಾಶಯವನ್ನು ಕೋರಿದ್ದಾರೆ. ಕರ್ನಾಟಕದ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು. ಈ ಪವಿತ್ರ ಹಬ್ಬ ಎಲ್ಲರ ಜೀವನದಲ್ಲೂ ಸುಖ, ಸಮೃದ್ಧಿ ಮತ್ತು ಆರೋಗ್ಯವನ್ನು ಕರುಣಿಸಲಿ ಎಂದು ಟ್ವೀಟ್ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ