ಆ್ಯಪ್ನಗರ

ವಿಧಾನಸೌಧದಲ್ಲಿ ಕತ್ತು ಕುಯ್ದುಕೊಂಡು ವ್ಯಕ್ತಿ ಆತ್ಮಹತ್ಯೆ ಯತ್ನ

ವ್ಯಕ್ತಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

Vijaya Karnataka Web 24 Jun 2019, 2:20 pm
ಬೆಂಗಳೂರು: ವಿಧಾನಸೌಧದಲ್ಲಿಯೇ ವ್ಯಕ್ತಿಯೊಬ್ಬರು ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ನಡೆದಿದೆ.
Vijaya Karnataka Web man


ಆರ್ ರೇವಣ್ಣ ಕುಮಾರ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ.

ಸೌಧದ ಮೂರನೇ ಮಹಡಿಯಲ್ಲಿರು ಶೌಚಾಲಯ ಕೊಠಡಿ ಸಂಖ್ಯೆ 332ರಲ್ಲಿ ಈ ದುರ್ಘಟನೆ ಸಂಭವಿಸಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.


ವಿಧಾನಸೌಧಕ್ಕೆ ಪ್ಲಾಸ್ಟಿಕ್ ಚೀಲಗಳಲ್ಲಿ ಕೆಲ ದಾಖಲೆಗಳನ್ನು ತಂದಿದ್ದರು. ಕತ್ತು ಕುಯ್ದುಕೊಂಡ ಬಳಿಕ ಕುಸಿದು ಬಿದ್ದ ಜಾಗದಲ್ಲಿ ಕೆಲ ಮಾತ್ರೆಗಳು ಸಹ ಪತ್ತೆಯಾಗಿವೆ. ಗಂಭೀರ ಗಾಯಗೊಂಡಿರುವ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ವಿಧಾನಸೌಧ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾಕಷ್ಟು ಭದ್ರತೆಯ ನಡುವೆಯೂ ವಿಧಾನಸೌಧದಲ್ಲಿ ಈ ಘಟನೆ ಸಂಭವಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ