ಆ್ಯಪ್ನಗರ

ಪಕ್ಷೇತರರಾಗಿಯೇ ಮುಂದುವರಿಯಲು ಸುಮಲತಾ ನಿರ್ಧಾರ

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಸುಮಲತಾ ಅಂಬರೀಷ್‌ ಅವರು ಬಿಜೆಪಿ ಇಲ್ಲವೇ ಕಾಂಗ್ರೆಸ್‌ ಪಕ್ಷಕ್ಕೆ ...

Vijaya Karnataka 6 Jun 2019, 5:00 am
ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಸುಮಲತಾ ಅಂಬರೀಷ್‌ ಅವರು ಬಿಜೆಪಿ ಇಲ್ಲವೇ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗದೇ ಪಕ್ಷೇತರರಾಗಿಯೇ ಮುಂದುವರಿಯಲು ನಿರ್ಧರಿಸಿದ್ದಾರೆ. ಆದರೆ ವಿಷಯಾಧಾರಿತದ ಮೇಲೆ ಕೇಂದ್ರ ಸರಕಾರಕ್ಕೆ ಬೆಂಬಲ ಕೊಡಲು ನಿರ್ಧರಿಸಿದ್ದಾರೆ.
Vijaya Karnataka Web sumalatha


ಮಂಡ್ಯದಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಪಕ್ಷೇತರ ಅಭ್ಯರ್ಥಿಯಾಗಿದ್ದ ಸುಮಲತಾ ಅವರಿಗೆ ಬಿಜೆಪಿ ಬೆಂಬಲ ವ್ಯಕ್ತಪಡಿಸಿತ್ತು. ಚುನಾವಣೆಯಲ್ಲಿ ಗೆದ್ದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ,''ನಾವಾಗಿಯೇ ಸುಮಲತಾ ಅವರನ್ನು ಪಕ್ಷಕ್ಕೆ ಆಹ್ವಾನಿಸುವುದಿಲ್ಲ, ಆದರೆ ಅವರಾಗಿಯೇ ಬಂದರೆ ಸ್ವಾಗತಿಸಲಾಗುವುದು,'' ಎಂದು ಹೇಳಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ