ಆ್ಯಪ್ನಗರ

ಬಿಎಸ್‌ವೈ ಮುಂದಿನ ಸಿಎಂ ಆಗುತ್ತಿರುವುದು ಖುಷಿಯ ವಿಚಾರ: ಸುಮಲತಾ ಅಂಬರೀಷ್‌

ಬೆಂಗಳೂರಿನ ಡಾಲರ್ಸ್‌ ಕಾಲೋನಿಯ ಯಡಿಯೂರಪ್ಪ ನಿವಾಸಕ್ಕೆ ಬುಧವಾರ ಬೆಳಗ್ಗೆಯಿಂದಲೇ ಅಭಿಮಾನಿಗಳು, ಕಾರ್ಯಕರ್ತರು, ನಾಯಕರ ಆಗಮನ ಹೆಚ್ಚಾಗಿದೆ. ಯಡಿಯೂರಪ್ಪಗೆ ಹಲವಾರು ಶುಭಾಶಯ ಕೋರಿದ್ದಾರೆ.

Vijaya Karnataka Web 24 Jul 2019, 4:23 pm
ಬೆಂಗಳೂರು: ದೋಸ್ತಿ ಸರಕಾರ ವಿಶ್ವಾಸಮತಯಾಚನೆ ಪರೀಕ್ಷೆಯಲ್ಲಿ ಫೇಲ್‌ ಆದ ನಂತರ ಈಗ ಸರಕಾರ ರಚನೆ ಮಾಡಲು ಬಿಜೆಪಿಗೆ ಅವಕಾಶ ಒದಗಿಬಂದಿದೆ.
Vijaya Karnataka Web ಸುಮಲತಾ
ಸುಮಲತಾ


ಸ್ವಾಭಾವಿಕವಾಗಿ ಬಿ.ಎಸ್‌. ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಹೀಗಾಗಿ ಯಡಿಯೂರಪ್ಪ ಅವರಿಗೆ ಶುಭಾಶಯ ಕೋರುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಲೇ ಇದೆ.

ಮಂಡ್ಯ ಸಂಸದೆ ಸುಮಲತಾ ಅಂಬರೀಷ್‌ ಕೂಡ ಶುಭಾಶಯ ಕೋರಿದ್ದಾರೆ.

ಈ ಕುರಿತು ಫೇಸ್‌ಬುಕ್‌ನ ಗೋಡೆಯ ಮೇಲೆ ಸುಮಲತಾ ಅಂಬರೀಷ್‌ ಬರೆದುಕೊಂಡಿದ್ದು, ತಮ್ಮದೇ ರೀತಿಯಲ್ಲಿ ಶುಭಾಶಯ ಕೋರಿದ್ದಾರೆ.

ನನ್ನ ಗೆಲುವಿಗೆ ಬೆನ್ನಿಗೆ ನಿಂತ ನಾಯಕ ಇಂದು ಮುಖ್ಯಮಂತ್ರಿ ಕುರ್ಚಿ ಅಲಂಕರಿಸುತ್ತಿದ್ದಾರೆ ಎಂಬುದು ಖುಷಿಯ ವಿಚಾರ ಎಂದು ಸುಮಲತಾ ಅಂಬರೀಷ್‌ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.


ಸಮ್ಮಿಶ್ರ ಸರಕಾರ ವಿಶ್ವಾಸಮತಯಾಚನೆ ಪರೀಕ್ಷೆಯಲ್ಲಿ 99-105 ಅಂತರದಲ್ಲಿ ಪತನಗೊಂಡ ನಂತರ ಬಿಜೆಪಿ ಸರಕಾರ ರಚನೆಗೆ ಕ್ಷಣಗಣನೆ ಆರಂಭವಾಗಿದೆ.

ಬಿಎಸ್‌ ಯಡಿಯೂರಪ್ಪ ಆಗುವುದು ಬಹುತೇಕ ಖಚಿತವಾಗಿದ್ದು, ಹೀಗಾಗಿ ಅವರ ನಿವಾಸಕ್ಕೆ ನೂರಾರು ನಾಯಕರು, ಕಾರ್ಯಕರ್ತರು, ಅಭಿಮಾನಿಗಳು ಬಂದು ಶುಭಾಶಯ ಕೋರಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ