ಆ್ಯಪ್ನಗರ

ವಿಚಾರಣೆಗೆ ಗೈರು: ಸಂಸದ ನಳೀನ್‌ಗೆ ವಾರೆಂಟ್‌

ವಿಚಾರಣೆಗೆ ಗೈರು ಹಾಜರಾದ ಮಂಗಳೂರು ಸಂಸದ ನಳೀನ್‌ ಕುಮಾರ್‌ ಕಟೀಲು ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ರಹಿತ ವಾರೆಂಟ್‌ ಜಾರಿ ...

Vijaya Karnataka 6 Aug 2019, 5:00 am
ಬೆಂಗಳೂರು: ವಿಚಾರಣೆಗೆ ಗೈರು ಹಾಜರಾದ ಮಂಗಳೂರು ಸಂಸದ ನಳೀನ್‌ ಕುಮಾರ್‌ ಕಟೀಲು ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ರಹಿತ ವಾರೆಂಟ್‌ ಜಾರಿ ಮಾಡಿದೆ.
Vijaya Karnataka Web nallenkumar


ಪ್ರಚೋದನಕಾರಿ ಭಾಷಣ ಆರೋಪ ಪ್ರಕರಣದಲ್ಲಿ ಮಂಗಳೂರಿನ ಕೊಣಜೆ ಠಾಣೆಯಲ್ಲಿ ನಳೀನ್‌ ಕುಮಾರ್‌ ವಿರುದ್ಧ ಕಳೆದ ವರ್ಷ ಕೇಸ್‌ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಆರೋಪಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ಸೋಮವಾರ ಇತ್ತು. ಆದರೆ, ಸಂಸದರು ಗೈರು ಹಾಜರಾಗಿದ್ದರು. ಈ ಹಿಂದೆ ಎರಡು ಬಾರಿ ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ವಾರೆಂಟ್‌ ಜಾರಿ ಮಾಡಿ, ವಿಚಾರಣೆಯನ್ನು ಆ.28ಕ್ಕೆ ಮುಂದೂಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ