ಆ್ಯಪ್ನಗರ

ಸಾವಿನಲ್ಲಿ ವಿಕೃತಿ ಮೆರೆದ ಪೋಸ್ಟ್: ಮಂಗಳೂರು ಮುಸ್ಲಿಂ ಪೇಜ್‌ ವಿರುದ್ಧ ಪ್ರಕರಣ

ಮಂಗಳೂರು ನಗರ ಪೊಲೀಸರು ಸೋಮವಾರ ಮಂಗಳೂರು ಮುಸ್ಲಿಮ್ಸ್ ಪೇಜ್ ಅಡ್ಮಿನ್ ವಿರುದ್ಧ ದೂರು ದಾಖಲಿಸಿದ್ದಾರೆ.

Vijaya Karnataka Web 13 Nov 2018, 7:13 am
ಬೆಂಗಳೂರು: ಸಚಿವ ಅನಂತ ಕುಮಾರ್ ಅವರ ಸಾವಿನ ಸುದ್ದಿ ಹರಡುತ್ತಿದ್ದಂತೆ ಅದನ್ನು ವಿಕೃತವಾಗಿ ಬಿಂಬಿಸಿ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿದ್ದ ಮಂಗಳೂರು ಮುಸ್ಲಿಮ್ಸ್ ಫೇಸ್‌ಬುಕ್ ಪೇಜ್ ಅಡ್ಮಿನ್ ವಿರುದ್ಧ ಪ್ರಕರಣ ದಾಖಲಾಗಿದೆ.
Vijaya Karnataka Web Ananth kumar


ಮಂಗಳೂರು ನಗರ ಪೊಲೀಸರು ಸೋಮವಾರ ಮಂಗಳೂರು ಮುಸ್ಲಿಮ್ಸ್ ಪೇಜ್ ಅಡ್ಮಿನ್ ವಿರುದ್ಧ ಮುಸ್ಲಿಂ ಸಮುದಾಯದ ಮುಖಂಡರ ಒತ್ತಾಯದ ಮೇರೆಗೆ ದೂರು ದಾಖಲಿಸಿದ್ದಾರೆ.

ಅನಂತ್‌ ಸಾವಿನಲ್ಲಿ ಖುಷಿ ಕಂಡ ವಿಕೃತರು, ಅವಹೇಳನಕಾರಿ ಫೇಸ್‌ಬುಕ್‌ ಪೋಸ್ಟ್‌ಗೆ ವ್ಯಾಪಕ ಖಂಡನೆ

ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಮತ್ತು ಕೋಮು ದ್ವೇಷ ಸಂದೇಶ ಪಸರಿಸುವ ಪೇಜ್‌ ವಿರುದ್ಧ ಜನರಿಂದ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು.

ಜತೆಗೆ ಈ ಹಿಂದೆಯೂ ಹಲವು ಬಾರಿ ಅವಹೇಳನಕಾರಿ ಪೋಸ್ಟ್ ಹಾಕಿ ವಿಕೃತಿ ಮೆರೆದಿದ್ದ ಮಂಗಳೂರು ಮುಸ್ಲಿಮ್ಸ್ ಪೇಜ್ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರು ವಿಳಂಬ ಮಾಡುತ್ತಿದ್ದಾರೆ ಎಂಬ ದೂರುಗಳೂ ಜನರಿಂದ ಕೇಳಿಬಂದಿದ್ದವು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ