ಆ್ಯಪ್ನಗರ

ಮಂಗಳೂರಿಗೆ ತೆರಳಿದ್ದ ಸಿದ್ದರಾಮಯ್ಯ; ವಿಮಾನ ಇಳಿಯಲು ಅನುಮತಿ ನಿರಾಕರಣೆ

ಪೌರತ್ವ ಕಾಯ್ದೆ ಪ್ರತಿಭಟನೆಯಲ್ಲಿ ಗೋಲಿಬಾರ್ ನಡೆದ ಹಿನ್ನೆಲೆಯಲ್ಲಿ ಮಂಗಳೂರಿಗೆ ವಿಶೇಷ ವಿಮಾನದಲ್ಲಿ ತೆರಳಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ವಿಮಾನ ಇಳಿಯಲು ಅವಕಾಶ ನಿರಾಕರಿಸಲಾಗಿದೆ.

Vijaya Karnataka Web 20 Dec 2019, 3:36 pm
ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ 2019 ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯ ವೇಳೆ ಗೋಲಿಬಾರ್‌ ನಡೆದು ಇಬ್ಬರು ಮೃತಪಟ್ಟಿದ್ದಾರೆ. ಘಟನೆಯ ಹಿನ್ನೆಲೆಯಲ್ಲಿ ಮಂಗಳೂರಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿಶೇಷ ವಿಮಾನದಲ್ಲಿ ತೆರಳಿದ್ದು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯಲು ಅವಕಾಶವನ್ನು ನಿರಾಕರಿಸಲಾಗಿದೆ.
Vijaya Karnataka Web mangalore police firing siddaramaiah flight denied to landing
ಮಂಗಳೂರಿಗೆ ತೆರಳಿದ್ದ ಸಿದ್ದರಾಮಯ್ಯ; ವಿಮಾನ ಇಳಿಯಲು ಅನುಮತಿ ನಿರಾಕರಣೆ


ಘಟನೆಯ ಹಿನ್ನೆಲೆಯಲ್ಲಿ ಈಗಾಗಲೇ ಕಾಂಗ್ರೆಸ್ ನಿಯೋಗ ಮಂಗಳೂರು ತೆರಳಿತ್ತು. ಮಾಜಿ ಸ್ಪೀಕರ್ ರಮೇಶ್ ಕುಮಾರ್, ಎಂಬಿ ಪಾಟೀಲ್, ಎಸ್‌ ಆರ್ ಪಾಟೀಲ್ ಹಾಗೂ ವಿ.ಎಸ್ ಉಗ್ರಪ್ಪ ನೇತೃತ್ವದ ತಂಡ ಮಂಗಳೂರಿಗೆ ಹೋಗಿತ್ತು. ಆದರೆ ಮೃತರ ಕುಟುಂಬದವರನ್ನು ಭೇಟಿಯಾಗಲು ಪೊಲೀಸರು ಅವಕಾಶ ನೀಡದೆ ವಶಕ್ಕೆ ಪಡೆದುಕೊಂಡಿದ್ದಾರೆ.

ಇದರ ಬೆನ್ನಲ್ಲೇ ವಿಶೇಷ ವಿಮಾನದಲ್ಲಿ ಮಂಗಳೂರಿಗೆ ಸಿದ್ದರಾಮಯ್ಯ ಹೊರಟಿದ್ದು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಇಳಿಯೋದಕ್ಕೆ ಅವಕಾಶ ನಿರಾಕರಿಸಲಾಗಿದೆ.

ಮಂಗಳೂರಿನಲ್ಲಿ 2 ಪ್ರಾಣ ಬಲಿಗೆ, ಖಾದರ್ ಚಿತಾವಣೆಯೇ ಕಾರಣ: ಪ್ರತಾಪ್ ಸಿಂಹ

ಸರಕಾರದ ನಡೆಗೆ ಸಿದ್ದರಾಮಯ್ಯ ಕಿಡಿಕಾರಿದ್ದು ಟ್ವೀಟ್ ಮಾಡುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ನನ್ನ ಆರೋಗ್ಯಸ್ಥಿತಿಯನ್ನೂ ಲೆಕ್ಕಿಸದೆ, ವೈದ್ಯರ ಸಲಹೆಯನ್ನೂ ನಿರ್ಲಕ್ಷಿಸಿ ಗಲಭೆಗ್ರಸ್ತ ಮಂಗಳೂರಿಗೆ ಹೊರಟಿದ್ದೆ. ಪೊಲೀಸರು ವಿಮಾನ ನಿಲ್ದಾಣದಲ್ಲಿ ವಿಶೇಷ ವಿಮಾನ ಇಳಿಯಲು ಅನುಮತಿ ನಿರಾಕರಿಸಿ ನನ್ನ ಪ್ರವಾಸಕ್ಕೆ ತಡೆಯೊಡ್ಡಿದ್ದಾರೆ.ಬಿಜೆಪಿ ಸರ್ಕಾರ ಏನನ್ನು ಬಚ್ಚಿಡಲು ಹೊರಟಿದೆ? ಎಂದು ಪ್ರಶ್ನಿಸಿದ್ದಾರೆ.


ಮಂಗಳೂರು ಗೋಲಿಬಾರ್‌ ಪ್ರಕರಣ: ಹಿಟ್ಲರ್‌ ಮಾದರಿ ಆಡಳಿತ ಎಂದ ಸಿದ್ದರಾಮಯ್ಯ

ಈ ನಡುವೆ ಮಂಗಳೂರಿನಲ್ಲಿ ನಡೆದ ಗೋಲಿಬಾರ್‌ನಲ್ಲಿ ಮೃತಪಟ್ಟ ಇಬ್ಬರ ಮರಣೋತ್ತರ ಪರೀಕ್ಷೆ ಮುಗಿದಿದ್ದು ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ. ಮೃತರ ಅಂತ್ಯ ಸಂಸ್ಕಾರ ಅವರ ಜಮಾತ್ ವ್ಯಾಪ್ತಿಯ ಮಸೀದಿಯಲ್ಲಿ ನಡೆಯಲಿದೆ. ಮುಂಜಾಗರೂಕತಾ ಕ್ರಮವಾಗಿ ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ