ಆ್ಯಪ್ನಗರ

ಮಂಗಳೂರಿನಲ್ಲಿ ಕಾಶ್ಮೀರ ಮಾದರಿಯ ದಾಳಿ ! ನಳಿನ್ ಕುಮಾರ್ ಕಟೀಲ್ ಆರೋಪ

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯ ಹಿಂದೆ ವ್ಯವಸ್ಥಿತ ಸಂಚು ಇದೆ ಹಾಗೂ ಪ್ರತಿಭಟನೆ ಕಾಶ್ಮೀರ ಮಾದರಿಯಲ್ಲೇ ನಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ.

Vijaya Karnataka Web 24 Dec 2019, 3:45 pm
ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಗಲಭೆ ಹಾಗೂ ಕಲ್ಲು ತೂರಾಟ ಕಾಶ್ಮೀರ ಮಾದರಿಯಲ್ಲೇ ನಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ ಅರಿವು ಕಾರ್ಯಾಗಾರದಲ್ಲಿ ಮಾತನಾಡಿದ ಅವರು ಗಲಭೆಯ ಹಿಂದೆ ವ್ಯವಸ್ಥಿತ ಪಿತೂರಿ ಇದೆ ಎಂದಿದ್ದಾರೆ.
Vijaya Karnataka Web mangaluru police firing bjp state president nalin kumar kateel says protest held like kashmir
ಮಂಗಳೂರಿನಲ್ಲಿ ಕಾಶ್ಮೀರ ಮಾದರಿಯ ದಾಳಿ ! ನಳಿನ್ ಕುಮಾರ್ ಕಟೀಲ್ ಆರೋಪ


ಮಂಗಳೂರು ಗಲಭೆ ಹಾಗೂ ಗೋಲಿಬಾರ್ ವಿಡಿಯೋಗಳನ್ನು ಮಂಗಳೂರು ಪೊಲೀಸರು ಬಿಡುಗಡೆಗೊಳಿಸಿದ್ದು ಕಿಡಿಗೇಡಿಗಳು ಪೊಲೀಸರ ಮೇಲೆ ಕಲ್ಲುತೂರಾಟ ನಡೆಸುತ್ತಿರುವುದು ಬಹಿರಂಗಗೊಂಡಿದೆ. ವಿಡಿಯೋದಲ್ಲಿ ಕಲ್ಲುತೂರಾಟ, ಪೊಲೀಸರ ವಾಹನ ಸಂಚಾರಕ್ಕೆ ಅಡ್ಡಿ ಹಾಗೂ ಸಿಸಿ ಕ್ಯಾಮರಾಗಳನ್ನು ಧ್ವಂಸ ಮಾಡುತ್ತಿರ ದೃಶ್ಯಗಳಿವೆ.

ಗೋಲಿಬಾರ್ ಘಟನೆ ಬಿಎಸ್‌ವೈ ಸರ್ಕಾರಕ್ಕೆ ಕಪ್ಪುಚುಕ್ಕೆ ತರಲು ಬಿಜೆಪಿಗರ ಒಳಸಂಚು ! ಖಾದರ್ ಆರೋಪ

ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ನಳಿನ್ ಕುಮಾರ್ ಕಟೀಲ್, ಮಂಗಳೂರು ಗಲಭೆ ವ್ಯವಸ್ಥಿತ ಸಂಚಿನ ಭಾಗವಾಗಿದೆ. ಗಲಭೆಕೋರರು ಕಾಶ್ಮೀರದ ಮಾದರಿಯಲ್ಲಿ ಕಲ್ಲು ತೂರಾಟ ನಡೆಸಿ ಪೊಲೀಸರ ಮೇಲೆ ದಾಳಿ ನಡೆಸಿದ್ದಾರೆ. ಪೆಟ್ರೋಲ್ ಬಾಂಬ್‌ಗಳನ್ನು ಗಲಭೆಯಲ್ಲಿ ಬಳಸಿದ್ದು ವ್ಯವಸ್ಥಿತ ಹಿಂಸಾಚಾರಕ್ಕೆ ಯೋಜನೆ ರೂಪಿಸಿದ್ದರು ಎಂದು ಆರೋಪಿಸಿದರು.

ಮಂಗಳೂರು ಗಲಭೆ ಪೂರ್ವನಿಯೋಜಿತ ; ಗೃಹ ಸಚಿವ ಬೊಮ್ಮಾಯಿ ಗಂಭೀರ ಆರೋಪ

ಕಾಶ್ಮೀರದಲ್ಲೂ ಪ್ರತಿಭಟನಾಕಾರರು ಪೊಲೀಸರನ್ನೇ ಟಾರ್ಗೆಟ್ ಮಾಡುತ್ತಾರೆ. ಇದೀಗ ಮಂಗಳೂರಿನಲ್ಲಿ ಕೂಡಾ ಅದೇ ನಡೆದಿದೆ. ಪೊಲೀಸರನ್ನು ಗುರಿಯಾಗಿಸಿಕೊಂಡೇ ದಾಳಿ ನಡೆದಿದೆ. ಮಾಜಿ ಸಚಿವ ಯು.ಟಿ ಖಾದರ್ ಅವರು ಗಲಭೆಗೆ ಕುಮ್ಮಕ್ಕು ನೀಡಿದ್ದಾರೆ. ಅವರ ಉದ್ರೇಕಕಾರಿ ಹೇಳಿಕೆ ಗಲಭೆಗೆ ಕಾರಣ ಎಂದು ನಳಿನ್ ಕುಮಾರ್ ಕಟೀಲ್ ಆರೋಪಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ