ಆ್ಯಪ್ನಗರ

ಬಸವರಾಜ ಬೊಮ್ಮಾಯಿ ದರ್ಬಾರ್‌ ಆರಂಭ: ಗಣ್ಯರ ಹೇಳಿದ್ದೇನು?

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಬಿಜೆಪಿಯ ಹಲವು ನಾಯಕರಿಂದ ನೂತನ ಸಿಎಂಗೆ ಅಭಿನಂದನೆಗಳ ಮಹಾಪೂರವೇ ಬರಿದುಬಂದಿದೆ.

Vijaya Karnataka Web 28 Jul 2021, 12:16 pm
ಬೆಂಗಳೂರು: ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಗಣ್ಯರ ಶುಭಾಶಯಗಳ ಮಹಾಪೂರ ಹರಿದುಬಂದಿದೆ.
Vijaya Karnataka Web ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ


ಅಶ್ವತ್ಥ ನಾರಾಯಣ

ನೂತನ ಸಿಎಂ ಆಗಿ ಆಯ್ಕೆಗೊಂಡಿರುವ ಬಸವರಾಜ ಬೊಮ್ಮಾಯಿಗೆ ಶುಭಾಶಯ ಕೋರಿದ್ದೇನೆ. ಡಿಸಿಎಂ ಸ್ಥಾನ ಸಿಗುವ ವಿಚಾರವಾಗಿ ಯಾವುದೇ ಪ್ರತಿಕ್ರಿಯೆ ಕೊಡುವುದಿಲ್ಲ. ನೂತನ ಸಿಎಂ ಮತ್ತು ಪಕ್ಷದ ವರಿಷ್ಠರು ಏನು ನಿರ್ಧಾರ ಮಾಡುತ್ತಾರೋ ಅದರಂತೆ ನಡೆಯತ್ತೇನೆ.‌ ಯಾವುದೇ ಕಾರಣಕ್ಕಾಗಿ ಹೊಸದಿಲ್ಲಿಗೆ ಹೋಗುವುದಿಲ್ಲ.

ಸುರೇಶ್ ಕುಮಾರ್


ಬಸವರಾಜ ಬೊಮ್ಮಾಯಿ ಆಯ್ಕೆ ಹೆಮ್ಮೆ ಹಾಗೂ ಸಂತೋಷ ತಂದಿದೆ. ಅವರು ಅನುಭವಿ ನೇತಾರರಲ್ಲಿ ಒಬ್ಬರು. ರಾಜ್ಯವನ್ನು ಅತ್ಯಂತ ಎತ್ತರದಲ್ಲಿ ನೋಡುವ ನಿರೀಕ್ಷೆಗೆ ಬಸವರಾಜ ಬೊಮ್ಮಾಯಿ ಪೂರಕವಾಗಿದ್ದಾರೆ ಸಂಪುಟದಲ್ಲಿ ಸ್ಥಾನ ಕೊಡುವುವು ಬಿಡುವುದು ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ. ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ