ಆ್ಯಪ್ನಗರ

ಹಿರಿಯ ಅಧಿಕಾರಿಗಳ ಕಿರುಕುಳ: ಸಿಎಂ ಭೇಟಿಗೆ ಕಾಲಾವಕಾಶ ಕೋರಿದ ಮಥಾಯಿ

ಹಿರಿಯ ಐಎಎಸ್‌ ಅಧಿಕಾರಿಗಳ ನಿರಂತರ ಕಿರುಕುಳದ ವಿರುದ್ಧ ಸಕಾಲ ಮಿಷನ್‌ ಆಡಳಿತಾಧಿಕಾರಿ ಕೆಮಥಾಯಿ ಅವರು ಸಿಎಂ ಮೊರೆಹೋಗಿದ್ದಾರೆ...

Vijaya Karnataka 25 Apr 2019, 5:00 am
ಬೆಂಗಳೂರು: ಹಿರಿಯ ಐಎಎಸ್‌ ಅಧಿಕಾರಿಗಳ ನಿರಂತರ ಕಿರುಕುಳದ ವಿರುದ್ಧ ಸಕಾಲ ಮಿಷನ್‌ ಆಡಳಿತಾಧಿಕಾರಿ ಕೆ.ಮಥಾಯಿ ಅವರು ಸಿಎಂ ಮೊರೆಹೋಗಿದ್ದಾರೆ.
Vijaya Karnataka Web mathaee seeking cm appointment
ಹಿರಿಯ ಅಧಿಕಾರಿಗಳ ಕಿರುಕುಳ: ಸಿಎಂ ಭೇಟಿಗೆ ಕಾಲಾವಕಾಶ ಕೋರಿದ ಮಥಾಯಿ


ಕಿರುಕುಳದ ಕುರಿತು ಖುದ್ದು ಭೇಟಿ ಮಾಡಿ ವಿವರಿಸಲು ಕಾಲಾವಕಾಶ ನೀಡುವಂತೆ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ.

ಮಂಡ್ಯ ಮೂಡಾ ಆಯುಕ್ತರಾಗಿದ್ದ ಅವಧಿಯಲ್ಲಿ ನಿವೇಶನಗಳ ಹಂಚಿಕೆಯಲ್ಲಿನ ಸುಮಾರು 300 ಕೋಟಿ ರೂ. ಅಕ್ರಮ ಬಯಲಿಗೆಳೆದಿದ್ದೇನೆ. ಬಿಬಿಎಂಪಿ ಜಾಹೀರಾತು ವಿಭಾಗದ ಸಹಾಯಕ ಆಯುಕ್ತರಾಗಿದ್ದ ಅವಧಿಯಲ್ಲಿ ಸುಮಾರು 2,000 ಕೋಟಿ ರೂ. ಅದಾಯ ಸೋರಿಕೆ ಪತ್ತೆ ಮಾಡಿ ಸರಕಾರಕ್ಕೆ ವರದಿ ಕೊಟ್ಟಿದ್ದೇನೆ. ಈ ಅಕ್ರಮ ಹಾಗೂ ಭ್ರಷ್ಟಾಚಾರ ಬಯಲಿಗೆಳೆದಿದ್ದನ್ನು ಸಹಿಸದ ಡಿಪಿಎಆರ್‌ ಮತ್ತು ಇತರ ಹಿರಿಯ ಅಧಿಕಾರಿಗಳು ನಿರಂತರ ದೌರ್ಜನ್ಯ ನಡೆಸುತ್ತಿದ್ದಾರೆ. ಮುಖ್ಯ ಕಾರ್ಯದರ್ಶಿಗೆ ಮನವಿ ಮಾಡಿದ್ದರೂ ಸ್ಪಂದಿಸಿಲ್ಲ. ಜತೆಗೆ, ಐಎಎಸ್‌ ಅಧಿಕಾರಿಗಳ ಮಾಫಿಯಾ ರಕ್ಷಣೆಗಾಗಿ ಮುಖ್ಯಮಂತ್ರಿಯವರಿಗೇ ತಪ್ಪು ಮಾಹಿತಿ ನೀಡಿದ್ದಾರೆ. ಮುಂದಿನ ವರ್ಷ ನಿವೃತ್ತಿ ಹೊಂದುತ್ತಿದ್ದು, ನನ್ನ ವಿರುದ್ಧದ ಪ್ರಕರಣಗಳನ್ನು ವಿಲೇವಾರಿ ಮಾಡದೆ ಉದ್ದೇಶಪೂರ್ವಕವಾಗಿ ಬಾಕಿ ಉಳಿಸಲಾಗಿದೆ. ಈ ಬಗ್ಗೆ ಖುದ್ದು ವಿವರಣೆ ನೀಡಲು ಬಯಸಿದ್ದೇನೆ'' ಎಂದು ಪತ್ರದಲ್ಲಿ ಸಿಎಂಗೆ ವಿನಂತಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ