ಬೆಂಗಳೂರು: ರಾಜ್ಯ ವಿಧಾನಸಭೆಗೆ ಮೇ 2ರಂದು ಚುನಾವಣೆ ನಡೆಯಲಿದೆಯೇ? ರಾಜ್ಯ ಚುನಾವಣೆ ಆಯೋಗವು ಸರಕಾರಕ್ಕೆ ಈ ಬಗ್ಗೆ ಸುಳಿವು ನೀಡಿದೆ. ಏಪ್ರಿಲ್ ಕೊನೆಯ ವಾರದೊಳಗೆ ತನ್ನ ಚಟುವಟಿಕೆಗಳನ್ನು ಪೂರ್ಣಗೊಳಿಸಲು ಯೋಜನೆ ರೂಪಿಸುವಂತೆ ರಾಜ್ಯ ಸರಕಾರಕ್ಕೆ ಆಯೋಗ ಸಲಹೆ ನೀಡಿದೆ.
ಈ ನಡುವೆ, ಚುನಾವಣೆ ಪ್ರಕ್ರಿಯೆಯಲ್ಲಿ ಶಿಕ್ಷಕರು ಪಾಲ್ಗೊಳ್ಳುವುದರಿಂದ ಅದೇ ಸಮಯದಲ್ಲಿ ಪರೀಕ್ಷೆ ನಡೆಸಿದರೆ ಉಂಟಾಗುವ ತೊಂದರೆಗಳ ಬಗ್ಗೆ ಶಿಕ್ಷಣ ಇಲಾಖೆ ಸೋಮವಾರ ಪರಾಮರ್ಶೆ ನಡೆಸಿತು. ಪ್ರಸಕ್ತ ವಿಧಾನಸಭೆಯ ಅವ 2018ರ ಮೇ 28ಕ್ಕೆ ಕೊನೆಗೊಳ್ಳಲಿದೆ. ಆಯೋಗವು ಅದಕ್ಕೂ ಬಹಳ ಮುನ್ನವೇ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸಲು ಮುಂದಾಗಿದೆ. ಹಾಗಾಗಿ ಪರೀಕ್ಷೆಗಳಿಗೆ ತೊಂದರೆಯಾಗದಂತೆ ವೇಳಾಪಟ್ಟಿ ನಿಗದಿಪಡಿಸುವ ಸಂಬಂಧ ಚುನಾವಣೆ ಆಯೋಗದಿಂದ ಸ್ಪಷ್ಟನೆ ಬಯಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ''ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವೇಳಾಪಟ್ಟಿ ನಿಗದಿಪಡಿಸುವ ಕುರಿತು ಇನ್ನೂ ಅಂತಿಮ ತೀರ್ಮಾನ ಕೈಗೊಂಡಿಲ್ಲ,'' ಎಂದು ಪ್ರತಿಕ್ರಿಯಿಸಿದರು.