ಆ್ಯಪ್ನಗರ

ಶ್ರೀಗಳ ಸೇವೆಗೆ ಮಾಡಿದ ಅಪಮಾನ -ಎಂ.ಬಿ.ಪಾಟೀಲ್‌ ಆಕ್ರೋಶ

ಸಿದ್ಧಗಂಗಾ ಶ್ರೀಗಳಿಗೆ ದೇಶದ ಅತ್ಯುನ್ನತ 'ಭಾರತ ರತ್ನ' ಪ್ರಶಸ್ತಿ ನೀಡದ ಕೇಂದ್ರ ಸರಕಾರವು ಪರಮಪೂಜ್ಯರ 111 ವರ್ಷಗಳ ಸೇವೆಯನ್ನು ಅಪಮಾನಿಸುವ ಕೆಲಸ ಮಾಡಿದೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Vijaya Karnataka 27 Jan 2019, 5:00 am
ಬೆಂಗಳೂರು: ಸಿದ್ಧಗಂಗಾ ಶ್ರೀಗಳಿಗೆ ದೇಶದ ಅತ್ಯುನ್ನತ 'ಭಾರತ ರತ್ನ' ಪ್ರಶಸ್ತಿ ನೀಡದ ಕೇಂದ್ರ ಸರಕಾರವು ಪರಮಪೂಜ್ಯರ 111 ವರ್ಷಗಳ ಸೇವೆಯನ್ನು ಅಪಮಾನಿಸುವ ಕೆಲಸ ಮಾಡಿದೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Vijaya Karnataka Web mb patil condemn central decision
ಶ್ರೀಗಳ ಸೇವೆಗೆ ಮಾಡಿದ ಅಪಮಾನ -ಎಂ.ಬಿ.ಪಾಟೀಲ್‌ ಆಕ್ರೋಶ


ಶ್ರೀಗಳ ಜೀವಮಾನದ ಸೇವಾ ಕಾರ್ಯಕ್ಕಾಗಿ ಭಾರತ ರತ್ನ ಪ್ರಶಸ್ತಿ ನೀಡದೆ ಕರ್ನಾಟಕದ ಬಗ್ಗೆ ಕೇಂದ್ರ ಸರಕಾರ ಅಸಡ್ಡೆ ಮುಂದುವರಿಸಿದೆ ಮತ್ತು ಭಾರತ ರತ್ನ ಪ್ರಶಸ್ತಿಯನ್ನು ಅಪಮೌಲ್ಯಕ್ಕೆ ಈಡುಮಾಡಿದೆ ಎಂದೂ ಸಚಿವರು ಕಿಡಿಕಾರಿದ್ದಾರೆ.

ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು ''ಸಿದ್ಧಗಂಗಾ ಶ್ರೀಗಳ ಸೇವಾ ಕಾರ್ಯಕ್ಕೆ ಸ್ವಯಂಪ್ರೇರಿತವಾಗೇ ಭಾರತ ರತ್ನ ನೀಡಬೇಕಿತ್ತು. ಆದರೆ, ರಾಜ್ಯ ಸರಕಾರ ಈ ಕುರಿತು ಪ್ರಸ್ತಾವನೆ ಸಲ್ಲಿಸಿದ್ದರೂ, ಹಲವು ಗಣ್ಯರು ಮೇಲಿಂದ ಮೇಲೆ ಮನವಿ ಮಾಡಿಕೊಂಡರೂ ಭಾರತ ರತ್ನ ಪ್ರಶಸ್ತಿ ಪುರಸ್ಕೃತರ ಪಟ್ಟಿಯಲ್ಲಿ ಪೂಜ್ಯ ಶ್ರೀಗಳ ಹೆಸರು ಇಲ್ಲದಿರುವುದು ಇಡೀ ನಾಡಿಗೆ ದಿಗಿಲು ಬಡಿದಂತಾಗಿದೆ'' ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

''ಸಿದ್ಧಗಂಗಾ ಶ್ರೀಗಳು ಪೀಠಾಧಿಪತಿಗಳಾಗಿ ಹಲವಾರು ಶಿಕ್ಷ ಣ ಸಂಸ್ಥೆಗಳನ್ನು ಸ್ಥಾಪಿಸಿ, ಬಡ ಮಕ್ಕಳಿಗಾಗಿ ಉಚಿತ ಪ್ರಸಾದ ನಿಲಯ ಆರಂಭಿಸಿದ್ದಾರೆ. ಹಳ್ಳಿ- ಹಳ್ಳಿಗೆ ಸಂಚರಿಸಿ ಭಿಕ್ಷೆಯೆತ್ತಿ ಸುಮಾರು 90 ವರ್ಷಗಳ ಕಾಲ ನಿರಂತರವಾಗಿ ಲಕ್ಷಾಂತರ ಶಾಲಾ ಮಕ್ಕಳಿಗೆ ಅಕ್ಷ ರ, ಅನ್ನ, ಆಶ್ರಯ ನೀಡಿದ್ದಾರೆ. ಈ ಮೂಲಕ ಇವರು 'ಸೇವೆ' ಎಂಬ ಪದಕ್ಕೆ ಹೊಸ ಅರ್ಥ ತಂದುಕೊಟ್ಟಿದ್ದಾರೆ. ಶ್ರೀಗಳ ಈ ಸೇವೆಗೆ ಮರಣೋತ್ತರವಾಗಿಯಾದರೂ ಭಾರತ ರತ್ನ ಪ್ರಶಸ್ತಿ ನೀಡಲಾಗುತ್ತದೆ ಎಂದು ನಾವೆಲ್ಲ ಭಾವಿಸಿದ್ದೆವು. ಈ ಕುರಿತು ಜಾತ್ಯತೀತ, ಪಕ್ಷಾತೀತವಾಗಿ ಮನವಿ ಮಾಡಿಕೊಂಡಿದ್ದರೂ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರಕಾರ ನಿರಾಶೆ ಮೂಡಿಸಿರುವುದು ನೋವು ತಂದಿದೆ,'' ಎಂದು ಹೇಳಿದ್ದಾರೆ.

ಬಿಎಸ್‌ವೈ ಕಾಲೆಳೆದ ಸಿದ್ದು

''ಪ್ರಣಬ್‌ ಮುಖರ್ಜಿ ಅವರಿಗೆ ಭಾರತ ರತ್ನ ಕೊಟ್ಟಿರುವುದು ಸ್ವಾಗತಾರ್ಹ. ಆದರೆ ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ಕೊಡಬೇಕಿತ್ತು. ಶ್ರೀಗಳ ಪಾರ್ಥಿವ ಶರೀರದ ಮುಂದೆ ದಿನವಿಡೀ ಕೂರುವುದು ಗೌರವ ಅಲ್ಲ, ಅವರ ಸೇವೆಗೆ ಭಾರತ ರತ್ನ ಕೊಟ್ಟಿದ್ದರೆ ಗೌರವ ಬರುತ್ತಿತ್ತು. ಶ್ರೀಗಳ ಸಾಧನೆಗೆ ಭಾರತ ರತ್ನ ಕೊಟ್ಟಿದ್ದರೆ ಅದರ ಘನತೆ ಹೆಚ್ಚುತ್ತದೆ, ಆದರೆ ಕೇಂದ್ರ ಸರಕಾರ ಏಕೆ ಕೊಟ್ಟಿಲ್ಲವೇ.'' ಎಂದು ಹೇಳುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರ ಕಾಲೆಳೆದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ