ಆ್ಯಪ್ನಗರ

ಕೋವಿಡ್‌ ಸೋಂಕಿತರು 7 ದಿನದಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ದೂರು, ಅಧಿಕಾರಿಗಳ ಸಭೆ ಕರೆದ ಸುಧಾಕರ್‌

ಕೋವಿಡ್‌ ಸೋಂಕಿತರನ್ನು 7 ದಿನದಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗುತ್ತಿರುವ ಕುರಿತಾಗಿ ಕೇಳಿ ಬಂದ ದೂರಿನ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್‌ ಬುಧವಾರ ಅಧಿಕಾರಿಗಳ ಸಭೆಯನ್ನು ಕರೆದಿದ್ದಾರೆ.

Vijaya Karnataka Web 29 Jul 2020, 10:43 am
ಬೆಂಗಳೂರು: ಕೋವಿಡ್‌ ಸೋಂಕಿತರನ್ನು ಕೇವಲ ಏಳು ದಿನಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡುವ ಕುರಿತಾಗಿ ದೂರು ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳ ಸಭೆ ಕರೆದು ಚರ್ಚೆ ನಡೆಸುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್‌ ತಿಳಿಸಿದ್ದಾರೆ.
Vijaya Karnataka Web sudhakar new


ಈ ಕುರಿತಾಗಿ ಟ್ವೀಟ್‌ ಮಾಡಿರುವ ಅವರು, “ಕೋವಿಡ್‌ ಸೋಂಕಿತರನ್ನು 7ದಿನಕ್ಕೆ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗುತ್ತಿದೆ ಎನ್ನುವ ಸುದ್ದಿ ನನ್ನ ಗಮನಕ್ಕೆ ಬಂದಿದೆ. ಇಂದು ಅಧಿಕಾರಿಗಳ ಸಭೆ ಕರೆದು ಚರ್ಚೆ ಮಾಡುತ್ತೇನೆ” ಎಂದಿದ್ದಾರೆ.

ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗುವ ವೇಳೆಯಲ್ಲಿ ಕೈಗೆ ಸೀಲ್‌ ಹಾಕುತ್ತಿಲ್ಲ .ಹೋಂ ಐಸೋಲೇಷನ್‌ಗೆ ಹೋಗುವವರಿಗೂ ಕೈಗೆ ಸೀಲ್‌ ಹಾಕದೆ ಕಳುಹಿಸಲಾಗುತ್ತಿದೆ ಅಲ್ಲದೆ ಕೋವಿಡ್‌ ಟೆಸ್ಟ್‌ ಮಾಡದೆ ಹೋಂ ಐಸೋಲೇಷನ್‌ ಮಾಡಲಾಗುತ್ತಿದೆ ಎಂದ ದೂರುಗಳು ಕೇಳಿ ಬಂದಿವೆ.


ಈ ಹಿನ್ನೆಲೆಯಲ್ಲಿ ಬುಧವಾರ ಸಚಿವ ಡಾ. ಸುಧಾಕರ್‌ ಅಧಿಕಾರಿಗಳ ಜೊತೆಗೆ ಸಭೆ ನಡೆಸಿ ಈ ಕುರಿತಾಗಿ ಚರ್ಚೆ ನಡೆಸಲಿದ್ದಾರೆ. ಕೋವಿಡ್‌ ವಿಚಾರವಾಗಿ ನಿಮಯಗಳನ್ನು ಸೂಕ್ತವಾಗಿ ಪಾಲನೆ ಮಾಡಬೇಕು. ಹಾಗೂ ತಪ್ಪು ನಡೆದಲ್ಲಿ ಅದರ ವಿರುದ್ಧ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ